ಕೊರಟಗೆರೆ : ಕಲ್ಪತರು ನಾಡಿನಲ್ಲಿಯೇ ಪ್ರಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಭವನ ಕಟ್ಟಡವು ನಿರ್ಮಾಣವಾಗಿದ್ದು, ಮಾರ್ಚ್ 5 ರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ ಪರಮೇಶ್ವರ್ ರವರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕ್ಷೇತ್ರದ ಪ್ರತಿಯೊಂದು ಬೂತ್ ನಲ್ಲಿ ಹಾಗೂ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹಿಸಿ ಕಾಂಗ್ರೆಸ್ ಭವನವನ್ನು ನಿರ್ಮಿಸಲಾಗಿದೆ, ಕಾಂಗ್ರೆಸ್ ಪಕ್ಷದ ಕಟ್ಟಡ ಹೊರತು ಯಾರದು ಸ್ವಂತ ಕಟ್ಟಡವಲ್ಲ, ನಿರ್ಮಾಣಕ್ಕೆ 1.5 ಕೋಟಿಗೂ ಹೆಚ್ಚಿನ ಹಣ ಖರ್ಚಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನಸ್ತೋಮ ಸೇರಲಿದೆ ಎಂದು ಹೇಳಿದರು.
ಪಕ್ಷದ ನಾಯಕರೆಲ್ಲಾ ಒಟ್ಟಾಗಿ ಪ್ರಜಾಧ್ವನಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ, ನಮ್ಮಲ್ಲಿ ಯಾವುಧೇ ಗುಂಪುಗಾರಿಕೆ ಇಲ್ಲ, ಸಂಘಟನೆಯಿಂದ ಇನ್ನಷ್ಟು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಕಾಂಗ್ರೇಸ್ಗೆ ಬೆಂಬಲವಿದೆ. ವಿರೋಧ ಪಕ್ಷಕ್ಕೆ ಆಹಾರವಾಗದೆ 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ, ನಮ್ಮ ಪಕ್ಷದ ಮುಖ್ಯ ಗುರಿ ಕೂಡ ಇದೆ ಎಂದರು.
ತುಮಕೂರು ಜಿಲ್ಲೆಯಲ್ಲೇ ಪ್ರಪ್ರಥಮವಾಗಿ ಕಾಂಗ್ರೆಸ್ ಭವನವನ್ನು ಕೊರಟಗೆರೆಯಲ್ಲಿ ನಿರ್ಮಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಲಿದ್ದು, ಅಧ್ಯಕ್ಷತೆಯನ್ನು ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ಡಿ.ಕೆ. ಶಿವಕುಮಾರ್ ವಹಿಸಲಿದ್ದಾರೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮೇಲ್ಮನೆ ವಿರೋಧ ಪಕ್ಷದ ನಾಯಕರಾದ ಹರಿಪ್ರಸಾದ್, ರಾಜ್ಯದ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಸುರ್ಜಿವಾಲ ಸೇರಿದಂತೆ ಪಕ್ಷದ ಪ್ರಮುಖ ನಾಯಕರುಗಳು, ಜಿಲ್ಲೆಯ 11 ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಭಾಗಿಯಾಗಿಲಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ವೈಫಲ್ಯತೆಗಳು ಜನರಿಗೆ ತಿಳಿದಿದೆ. ಬೆಲೆ ಏರಿಕೆ ಹೆಚ್ಚಿಸುವುದರ ಜೊತೆಗೆ ಕಾನೂನು ಸುವ್ಯವಸ್ಥೆಯು ಅಳಾಗುತ್ತಿರುವುದನ್ನು ಪ್ರತಿನಿತ್ಯ ಜನರು ಸೂಕ್ಷ್ಮ ದೃಷ್ಠಿಯಿಂದ ಗಮನಿಸಿದ್ದಾರೆ. ನಮಗೆ ವಿಶ್ವಾಸವಿದೆ ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು.
ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA