ಹೆಬ್ರಿ: ಕುಡಿದು ಬಂದು ತಂದೆಯೊಂದಿಗೆ ಗಲಾಟೆ ಮಾಡಿದ ಪರಿಣಾಮವಾಗಿ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಮೂಡುಬಿಟ್ಟುವಿನಲ್ಲಿ ಪೆ.24ರ ರಾತ್ರಿ 9 ಗಂಟೆಗೆ ಸಂಭವಿಸಿತ್ತು.
ಸತೀಶ್ ಪೂಜಾರಿ 42 ಮೃತಪಟ್ಟ ವ್ಯಕ್ತಿ ಮತ್ತು ಕುಟ್ಟಿ ಪೂಜಾರಿ ಇಬ್ಬರೇ ಮನೆಯಲ್ಲಿ ವಾಸವಿದ್ದು, ಸತೀಶ್ ಪೂಜಾರಿ ಪ್ರತಿದಿನ ಕುಡಿದು ಮನೆಗೆ ಬಂದು ತಂದೆಯೊಂದಿಗೆ ಗಲಾಟೆ ಮಾಡುತ್ತಿದ್ದರು.
ನಿನ್ನೆ ರಾತ್ರಿಯೂ ವಿಪರೀತ ಕುಡಿದು ಬಂದು ಕುಟ್ಟಿ ಪೂಜಾರಿ ಮಲಗಿದ್ದ ಕೋಣೆಯ ಬಾಗಿಲಿಗೆ ಕಾಲಿನಿಂದ ಒದ್ದು ಅವರನ್ನು ಮನೆಯ ಹೊರಗೆ ಎಳೆದು ತಂದಾಗ ಕೋಪಗೊಂಡ ಕುಟ್ಟಿ ಪೂಜಾರಿ ಅಡುಗೆ ಕೋಣೆಯಲ್ಲಿದ್ದ ಒಲೆಗೆ ಬೆಂಕಿ ಉದುವಾ ಕಬ್ಬಿಣದ ಕೊಳವೆಯಿಂದ ಮಗನಿಗೆ ಹಲ್ಲೆ ನಡೆಸಿದ ಪರಿಣಾಮ ಸತೀಶ್ ಪೂಜಾರಿ ಮೃತಪಟ್ಟಿದ್ದಾರೆ. ಈ ಕುರಿತು ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy