ಮಧುಗಿರಿ:ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ದಂಡಿನ ದಿಬ್ಬ ಶಾಲೆಯ ಹಳೆಯ ವಿದ್ಯಾರ್ಥಿಗಳ ವತಿಯಿಂದ ಸ್ನೇಹ ಮಿಲನ ಮತ್ತು ಗುರುವಂದನ ಕಾರ್ಯಕ್ರಮ ನಡೆಸಲಾಯಿತು.
ಶಾಲಾ ಆವರಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಹಿಂದೆ ಕರ್ತವ್ಯ ನಿರ್ವಹಿಸಿದ ಎಲ್ಲಾ ಶಿಕ್ಷಕರು ಆಗಮಿಸಿ ವಿದ್ಯಾರ್ಥಿಗಳಿಂದ ಗುರುವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರಾದ ಡಾ.ಯೋಗೀಶ್ ಎಲ್. ಎನ್ . ನಿರ್ವಹಿಸಿದರು. ಸ್ವಾಗತವನ್ನು ವಿದ್ಯಾರ್ಥಿನಿ ಸಾವಿತ್ರಿರವರು ನಡೆಸಿಕೊಟ್ಟರು.
ಹಳೆಯ ವಿದ್ಯಾರ್ಥಿ ಹಾಗೂ ಹೊಸಕೆರೆಯಲ್ಲಿ ಮುಖ್ಯ ಶಿಕ್ಷಕರಾಗಿರುವ ಸುರೇಂದ್ರ ಕುಮಾರ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಮುಖ್ಯ ಉಪಾಧ್ಯಾಯರಾದ ಕಮಲಮ್ಮನವರು ಅಧ್ಯಕ್ಷತೆ ವಹಿಸಿದರು.
ಹಳೆಯ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಪಿಎಸ್ಐ ಆಗಿರುವ ಕಾವ್ಯರವರು ಕಾರ್ಯಕ್ರಮ ನಡೆಸಿಕೊಟ್ಟರು. ಬಹಳ ಅದ್ದೂರಿಯಾಗಿ ನಡೆದ ಈ ಸಮಾರಂಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಅಕ್ಕಪಕ್ಕದ ಗ್ರಾಮಸ್ಥರು ಚಂದ್ರಶೇಖರ್ ಹಾಗೂ ದೊಡ್ಡೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮಣಿ ರಂಗಸ್ವಾಮಿರವರು ಲಕ್ಷ್ಮಿಪುರ ಹಾಗೂ ದಂಡಿನ ದಿಬ್ಬ ಗ್ರಾಮ ಪಂಚಾಯತಿ ವರದರಾಜು ಶೈಲೇಂದ್ರ ಕುಮಾರ್ ಕಲಾವತಿ ವೆಂಕಟೇಶ್ ಸದಸ್ಯರುಗಳು ಸೇರಿದಂತೆ ಜನ ಪಾಲ್ಗೊಂಡಿದ್ದರು.
ಶಾಲೆಯು ಸ್ಥಾಪನೆಯಾಗಿ 75 ವಸಂತಗಳನ್ನು ಪೂರೈಸಿರುವುದರಿಂದ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಎಸ್. ಡಿ. ಎಂ. ಸಿ . ಅಧ್ಯಕ್ಷರಾದ ಪುನೀತ್ ಹಾಗೂ ಸದಸ್ಯರು ಹಾಜರಿದ್ದರು ಮುಂತಾದವರು ಅಕ್ಕ ಪಕ್ಕ ಗ್ರಾಮಸ್ಥರು ಊರಿನ ಗ್ರಾಮಸ್ಥರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s