nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕ್ಕೆ ವೀರಶೈವ ಅರಸರ ಕೊಡುಗೆ ಅಪಾರ: ಶಾಸಕ ವೀರಣ್ಣ ಚರಂತಿಮಠ
    ಜಿಲ್ಲಾ ಸುದ್ದಿ March 2, 2023

    ಸಮಾಜಕ್ಕೆ ವೀರಶೈವ ಅರಸರ ಕೊಡುಗೆ ಅಪಾರ: ಶಾಸಕ ವೀರಣ್ಣ ಚರಂತಿಮಠ

    By adminMarch 2, 2023No Comments2 Mins Read
    bagalkote

    ಬಾಗಲಕೋಟೆ: ಪ್ರಜೆಗಳ ಹಿತಾಸಕ್ತಿ ಕಾಪಾಡುವಲ್ಲಿ ಮತ್ತು ಸಾಮಾಜಿಕ ಕೊಡುಗೆ ನೀಡುವಲ್ಲಿ ವೀರಶೈವ ರಾಜಮನೆತನಗಳ ಕೊಡುಗೆ ಅಪಾರವಾದದ್ದು. ಇದರಲ್ಲಿ ಹಂಡೆ ಅರಸು ಮನೆತನವು ಮೊದಲ ಸಾಲಿನಲ್ಲಿದೆ ಎಂದು ಶಾಸಕು ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಹೇಳಿದರು.

    ಬಸವೇಶ್ವರ ಶಾಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಕನ್ನಡ ಸ್ನಾತಕೋತ್ತರ ವಿಭಾಗ, ಬಿವಿವಿಎಸ್ ಸಂಶೋಧನಾ ಕೇಂದ್ರ ಹಾಗೂ ಕಲಬುರ್ಗಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಹಂಡೆ ಅರಸರ ಸಾಂಸ್ಕೃತಿಕ ಕೊಡುಗೆಗಳು ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಗ್ರಂಥಗಳ ಬಿಡುಗಡೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇತರ ಧರ್ಮಿಯ ರಾಜರಂತೆ ದಬ್ಬಾಳಿಕೆ ಮತ್ತು ಹಿಂಸೆಗಳನ್ನು ಪ್ರೋತ್ಸಾಹಿಸಿದೆ ಧಾರ್ಮಿಕ ನೆಲಗಟ್ಟಿನ ಮೇಲೆ ಆದರ್ಶ ಆಡಳಿತ ನೀಡಿರುವುದು ವೀರಶೈವ ರಾಜಮನೆತನಗಳು. ಇದಕ್ಕೆ ಮೈಸೂರು ಮತ್ತು ಸುರಪೂರ ರಾಜಾಡಳಿತವೆ ಸಾಕ್ಷಿಯಾಗಿದೆ ಎಂದರು.


    Provided by
    Provided by

    ಹಂಡೆ ಅರಸರ ಕೊಡುಗೆ ಅಪಾರವಾಗಿದ್ದು ಅವುಗಳನ್ನು ತಿಳಿದುಕೊಳ್ಳುವುದ ಅವಶ್ಯಕವಾಗಿದೆ. ಕರ್ನಾಟಕ ಇತಿಹಾಸದಲ್ಲಿ ತಮ್ಮದೆಯಾದ ಕೊಡುಗೆಕೊಟ್ಟ ಅರಸು ಮನೆತನಗಳ ಮೇಲೆ ಪ್ರಜೆಗಳು ಸರಕಾರಕ್ಕಿಂತ ಹೆಚ್ಚು ಅವಲಂಭಿತರಾಗಿದ್ದರು ಅದಕ್ಕೆ ಅವರ ತ್ಯಾಗ, ಶೌರ್ಯ, ಧೈರ್ಯ ಮತ್ತು ಸಮರ್ಪಕ ಆಡಳಿತವೆ ಕಾರಣ ಎಂದರು.

    ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ಅಧ್ಯಕ್ಷರಾದ ಜಿ.ಎನ್‌.ಪಾಟೀಲ್ ಮಾತನಾಡಿ ಹಂಡೆ ಅರಸರ ಆಡಳಿತ ಅತಿದೊಡ್ಡ ಇತಿಹಾಸ ಹೊಂದಿದ್ದು ಕರ್ನಾಟಕಕ್ಕೆ ತಮ್ಮದೆಯಾದ ಸಾಲು ಸಾಲು ಕೊಡುಗೆ ನೀಡಿದ ಅವರ ಅಧ್ಯಯನ ಅವಶ್ಯವಾಗಿದೆ. ಇತಿಹಾಸವನ್ನು ಕಟ್ಟಲು ಶಾಸನ, ಕೈಪಿಯತ್ತುಗಳು ಮತ್ತು ಸಾಹಿತ್ಯ ಕೃತಿಗಳು ಪ್ರಮುಖವಾಗಿದ್ದು ಇಂದು ಲೋಕಾರ್ಪಣೆಯಾದ ಕೈಪಿಯತ್ತುಗಳು ಹಂಡೆ ಅರಸರ ಸಮರ್ಪಕ ಇತಿಹಾಸವನ್ನು ಒದಗಿಸುತ್ತವೆ ಎಂದರು.

    ಸಾಂಸ್ಕೃತಿಕವಾಗಿ ಅಷ್ಟೇ ಅಲ್ಲದೆ ಧಾರ್ಮಿಕ, ಸಾಹಿತ್ಯ ಲೋಕದಲ್ಲಿಯೂ ಅಪಾರ ಕೊಡುಗೆ ನೀಡಿದ ಹಂಡೆ ಅರಸು ಮನೆತನಗಳ ಬಗ್ಗೆ ಅನ್ಯರಾಜ್ಯಗಳಲ್ಲಿ ಅಧ್ಯಯನ ಮಾಡಲಾಗುತ್ತಿದ್ದು ಹಲವಾರು ಭಾಷೆಗಳಲ್ಲಿ ಗ್ರಂಥಗಳನ್ನು ಬರೆಯಲಾಗಿದೆ. ವೀರಶೈವ ಧರ್ಮವನ್ನು ವೃತದಂತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ರವೀಂದ್ರನಾಥರು ಹೇಳುವುದನ್ನು ಗಮನಿಸಿದರೆ ಅವರ ಧರ್ಮಪಾಲನೆಯ ಶ್ರೇಷ್ಠತೆ ಕಾಣುತ್ತದೆ ಎಂದರು.

    ಹಂಡೆ ಅರಸು ಮನೆತನಕ್ಕೆ ಸಂಬಂಧಿಸಿದಂತೆ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದಿಂದ 25 ಕೃತಿಗಳನ್ನು ಹೊರ ತಂದಿದ್ದೆವೆ. ಹಂಡೆ ಆಡಳಿತದ ಅಧ್ಯಯನಕ್ಕಾಗಿ ವಿವಿ ಮಟ್ಟದಲ್ಲಿ ಸಂಶೋಧನ ಪೀಠ ಪ್ರಾರಂಭವಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪ್ರಾಚಾರ್ಯರ ಡಾ. ವಿ.ಎಸ್ ಕಟಗಿಹಳ್ಳಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಗುರುಬಸವ ಸೂಳಿಭಾವಿ, ವಿಶ್ರಾಂತ ಪ್ರದ್ಯಾಪಕರಾದ ಡಾ. ರು.ಮ ಷಡಕ್ಷರಯ್ಯ, ಕರ್ನಾಟಕ ಲಲಿತಕಲಾ ವಿವಿ ವಿಶ್ರಾಂತ ವಿಶೇಷಾಧಿಕಾರಿ ಡಾ.ಎಸ್.ಸಿ ಪಾಟೀಲ್, ಡಾ.ಡಿ.ಎನ್ ಪಾಟೀಲ, ನೇತಿ ರಘುರಾಮ, ಡಾ. ಕೊಟ್ರಸ್ವಾಮಿ ಎ.ಎಂ.ಎಂ, ಡಾ.ಬಿ.ವ್ಹಿ ಖೋತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ಕೈಪಿಯತ್ತುಗಳ ಲೋಕಾರ್ಪಣೆ: ಹಂಡೆ ಅರಸರ ಆಡಳಿತ ಮತ್ತು ಇತಿಹಾಸದ ಕುರಿತು ಬರೆಯಲಾದ ಕೈಪಿಯತ್ತುಗಳನ್ನು ಲೋಕಾರ್ಪಣೆ ಮಾಡಲಾಯಿತು. ಬಳ್ಳಾರಿಯ ನೇತೃತ್ವದಲ್ಲಿ ರಘುರಾಮರ ಬುಕ್ಕರಾಯಸಮುದ್ರ ಅನಂತಸಾಗರ ಕೈಫಿಯತ್ತು ಮತ್ತು ಅನಂತಪುರ ಜಿಲ್ಲೆಯ ಐತಿಹಾಸಿಕ ಕಥೆಗಳು ಎಂಬ ಗ್ರಂಥಗಳನ್ನು ಹಾಗೂ ಡಾ. ಕೊಟ್ರಸ್ವಾಮಿ.ಎ.ಎಂ.ಎಂ ಅವರು ಬರೆದ ಅನಂತಪುರ ಕೈಪಿಯತ್ತುಗಳನ್ನು ಲೋಕಾರ್ಪಣೆ ಮಾಡಲಾಯಿತು. ಡಾ.ಡಿ.ಎನ್ ಪಾಟೀಲ್ ಕೃತಿಗಳ ಪರಿಚಯ ಮಾಡಿದರು.

    ಹಂಡೆ ಅರಸರ ಕೊಡುಗೆ ಕುರಿತು ಗೋಷ್ಟಿ: ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಹಂಡೆ ಅರಸರ ಕೊಡುಗೆ ಮತ್ತು ಆಡಳಿತದ ಕುರಿತು ಗೋಷ್ಟಿ ನಡೆಸಲಾಯಿತು. ಗೋಷ್ಟಿಯಲ್ಲಿ ಹಂಡೆ ಅರಸರ ಧಾರ್ಮಿಕ ಕೊಡುಗೆಗಳು ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ.ರವೀಂದ್ರನಾಥ ಉಪನ್ಯಾಸ ನೀಡಿದರು. ಬೆಂಗಳೂರಿನ ಸಂಶೋಧಕರಾದ ಡಾ.ಸುಂಕಂ.ಗೋವರ್ಧನ್ ಅವರು ಶಾಸನಗಳಲ್ಲಿ ಹಂಡೆ ಅರಸರು ಎಂಬ ವಿಷಯದ ಬಗ್ಗೆ ಮತ್ತು ಧಾರವಾಡದ ಕರ್ನಾಟಕ ವಿವಿಯ ಕನ್ನಡ ಸಂಶೋಧನ ಸಂಸ್ಥೆಯ ನಿರ್ದೇಶಕರಾದ ಪ್ರೋ.ಎಸ್.ಕೆ.ಮೇಲಕಾರ ಅವರು ಹಂಡೆ ಅರಸರ ಸಾಮಾಜಿಕ ಕೊಡುಗೆಗಳು ವಿಷಯದ ಕುರಿತು ಉಪನ್ಯಾಸ ಮಂಡಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು…

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.