ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯ, ನವದೆಹಲಿಯ ಅಧೀನ ಕಚೇರಿಯಾದ ಪರಿಶಿಷ್ಟ ಜಾತಿ, ಪಂಗಡದ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣ, ಕೌಶಲ್ಯ ಭವನ ಹಿಂಭಾಗ ಡೈರಿ ಸರ್ಕಲ್, ಬೆಂಗಳೂರು- 560 029 ಕಚೇರಿಯು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಒಂದು ವರ್ಷ ಅವಧಿಯ ವಿಶೇಷ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ಕಂಪ್ಯೂಟರ್ ಜ್ಞಾನ, ನ್ಯೂಮಿರಿಕಲ್ ಅಬಿಲಿಟಿ, ಶಾರ್ಟ್ ಹ್ಯಾಂಡ್/ಸ್ಪೆನೋಗ್ರಾಫಿ ವಿಷಯಗಳ ತರಬೇತಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಹಾಜರಾತಿ ನಿಯಮಗಳಿಗೊಳಪಟ್ಟು ತರಬೇತಿ ಭತ್ಯೆ ನೀಡಲಾಗುತ್ತದೆ. ಅರ್ಜಿಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಿ, ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 30ರ ಸಂಜೆ 5ರ ಒಳಗಾಗಿ ಕಚೇರಿಗೆ ನೋಂದಾಯಿತ ಪೋಸ್ಟ್ ಅಥವಾ ಖುದ್ದಾಗಿ ಬಂದು ಸಲ್ಲಿಸಲು ತಿಳಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಪಡೆಯಲು ಕಚೇರಿಯ ಮುಖ್ಯಸ್ಥರಾದ ಉಪ—ಪ್ರಾದೇಶಿಕ ಉದ್ಯೋಗಾಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೂರವಾಣಿ ಸಂಖ್ಯೆ 080—29756192, 9916188914 ಸಂಪರ್ಕಿಸುವಂತೆ ಉಪ ಪ್ರಾದೇಶಿಕ ಉದ್ಯೋಗಾಧಿಕಾರಿ ಶಿವಶಾಂತವೀರ ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA