ಮನುಷ್ಯ, ಮನುಷ್ಯನನ್ನು ಪ್ರೀತಿಸುವುದೇ ನಿಜ ಧರ್ಮ. ಧರ್ಮದ ಸತ್ವ ಅಡಗಿರುವುದೇ ಪ್ರೀತಿಯಲ್ಲಿ, ಸಮಾಜದಲ್ಲಿನ ಎಲ್ಲ ಸಮುದಾಯದವರು ಸಮಾನತೆಯಿಂದ ಕೂಡಿ ಬಾಳಿದಾಗ ಶಾಂತಿ ನೆಮ್ಮದಿಯ ಜೀವನ ಸಾಧ್ಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದ ಸಮೀಪದ ಮದರಸದಲ್ಲಿ, ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯನ್ನು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಉದ್ಘಾಟಿಸಿ ಶಾಸಕರು ಮಾತನಾಡಿದರು.
ಇದೇ ವೇಳೆ ಮದರಸದ ಗುರುಗಳಾದ ಮುಫ್ತಿ ಅಫ್ತಾಬ್ ಮೌಲನಾ ಮಾತನಾಡಿ, ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಕ್ಕಾಗಿ ಶಾಸಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ, ಶಾಸಕರ ಧರ್ಮ ಸಹಿಷ್ಣುತೆಯನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮಕ್ಕ ಮಸೀದಿ ಅಧ್ಯಕ್ಷರಾದ ಬಷೀರ್ ಹಜರತ್, ಮದೀನಾ ಮಸೀದಿ ಅಧ್ಯಕ್ಷರಾದ ಷರೀಫ್ ಹಾಜರತ್, ನಾಸಿರ್, ಜೆಡಿಎಸ್ ಪಕ್ಷದ ಮುಖಂಡರಾದ ತುಂಗೋಟಿ ರಾಮಣ್ಣ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಸದಸ್ಯರಾದ ಚಂದ್ರಶೇಖರ್ ಬಾಬು ನಾರಾಯಣ, ಗಂಗರಾಜು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷರಾದ ಶಫಿಖ್, ದಾದು, ಶಿವಪ್ಪ, ಮೋಹನ್, ಧನಪಾಲ್, ರಘು ಮತ್ತು ನರಸಪ್ಪ ಪಾಲ್ಗೊಂಡಿದ್ದರು.
ವರದಿ: ಆಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA