ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಕೃಷ್ಣಾಪುರ, ಕಾಟಿಪಳ್ಳ ಗ್ರಾಮದವನಾಗಿದ್ದು, ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.
ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


