ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಚಾರವಾಗಿ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಮೊದಲು ಕೋಲಾರದಲ್ಲಿ ಸ್ಪರ್ಧೆ ಮಾಡ್ಬೇಕು ಅಂತ ತೀರ್ಮಾನ ಮಾಡಿದ್ರು. ಅಲ್ಲಿನ ಮುಖಂಡರೆಲ್ಲಾ ಬಂದು ನಮ್ಮ ಕೋಲಾರದಲ್ಲಿ ಸ್ಪರ್ಧೆ ಮಾಡಿ. ಬಾದಾಮಿ ಬಹಳ ದೂರ ಆಗುತ್ತೆ ಅಂತ ಅವರಿಗೆ ಒತ್ತಾಯ ಮಾಡಿ ಕರ್ಕೊಂಡು ಹೋಗಿ, ಒಂದು ರೀತಿಯಲ್ಲಿ ಕಮಿಟ್ಮೆಂಟ್ ಮಾಡಿಸಿದ್ರು. ಆ ನಂತರ ಅವರು ಅದನ್ನ ಒಪ್ಪಿಕೊಂಡು ಕೋಲಾರದಲ್ಲಿ ಸ್ಪರ್ಧೆ ಮಾಡೋಕೆ ತೀರ್ಮಾನ ಮಾಡಿದ್ರು. ತದ ನಂತರ ಅವರಿಗೆ ಬೇರೆ ಏನು ಅಭಿಪ್ರಾಯ ಬಂತು. ವರುಣಾದಲ್ಲಿ ಸ್ಪರ್ಧೆ ಮಾಡ್ತಿನಿ ಅಂದ್ರು. ವರುಣಾದಲ್ಲಿ ಅವರ ಹೆಸರನ್ನ ಘೋಷಣೆ ಮಾಡಿದ್ದಾರೆ. ಈಗ ಕೋಲಾರದವರು ನೀವು ಮೊದಲು ಆ ರೀತಿ ಹೇಳಿ, ಈಗ, ನಿಲ್ಲೋದಿಲ್ಲ ಹಾಗೇ- ಹೀಗೆ ಹೇಳೋದು ಬೇಡ. ನೀವು ಎರಡು ಕಡೆ ಸ್ಪರ್ಧೆ ಮಾಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ನಾನು ಈ ವಿಚಾರವನ್ನ ಹೈಕಮಾಂಡ್ ಗೆ ಬಿಡ್ತಿನಿ. ಎರಡು ಕಡೆ ಸ್ಪರ್ಧೆ ಮಾಡ್ತಿನಿ ಅಂತ ಹೇಳಿದ್ದಾರೆ ಎಂದರು
ನಾಳೆ ನಮ್ಮಲ್ಲಿ ಸೆಂಟ್ರಲ್ ಎಲೆಕ್ಷನ್ ಕಮಿಟಿ ಸಭೆ ಇದೆ. ಅದರಲ್ಲಿ ತೀರ್ಮಾನ ಆಗುತ್ತೆ. ಟಿಕೆಟ್ ಕೋಡೋದರಲ್ಲಿ ಈ ಕಮಿಟಿಯೆ ಫೈನಲ್, ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಪರ್ಮಿಷನ್ ಕೊಟ್ರೆ, ಎರಡು ಕಡೆ ಸ್ಪರ್ಧೆ ಮಾಡ್ತಾರೆ ಎಂದರು.
ನನಾಗಲಿ ಡಿ.ಕೆ. ಶಿವಕುಮಾರ್ ಗೆ ಆಗಲಿ ಎರಡು ಕಡೆ ಟಿಕೆಟ್ ಕೊಡಿ ಅಂತ ಕೇಳಿಕೊಂಡಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಕೆಲಸ ಮಾಡಿದೋರು, ರಾಜ್ಯ ನಾಯಕ ಅವರಿಗೆ ಯಾವುದೇ ರೀತಿ ತೊಂದರೆ ಆಗ್ಬಾರದು. ಜನರು ಕೂಡಾ ನೀವು ಬಂದು ಸ್ಪರ್ಧೆ ಮಾಡಿ ಅಂತ ಕೇಳ್ಕೊಳ್ತಿದ್ದಾರೆ. ಸಿದ್ದರಾಮಯ್ಯ ಕೂಡಾ ಕೋಲಾರದ ಜನರ ಜೊತೆ ಕಮಿಟ್ಮೆಂಟ್ ಮಾಡಿಕೊಂಡು ಬಂದಿದ್ರು. ಹಾಗಾಗಿ ಎರಡು ಸ್ಪರ್ಧೆ ಮಾಡುವ ಸನ್ನಿವೇಶ ಎದುರಾಗಿದೆ ಎಂದು ವಿವರಿಸಿದರು.
ಅವರು ವರುಣಾದಲ್ಲಿ ನಿಂತ್ರು ಗೆಲ್ತಾರೆ. ಎಲ್ಲಿ ನಿಂತ್ರು ಗೆಲ್ತಾರೆ. ಅವರಿಗೆ ಸೋಲು ಭೀತಿ ಕಂಡ್ರೆ.. ನಾವೆಲ್ಲಾ ಹೆದರಿಕೊಳ್ಳಬೇಕಾಗುತ್ತೆ. ಸೋಲೋ ಭೀತಿಯಿಂದ ಅಲ್ಲಾ, ಜನರ ಅಪೇಕ್ಷೆ ಮೇರೆಗೆ ನಿಲ್ತಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಸುತ್ತುಮುತ್ತಲಿನ ಕ್ಷೇತ್ರಗಳಿಗೂ ಅನುಕೂಲ ಆಗುತ್ತೆ ಎಂದರು.
ಸಿಎಂ ರೇಸ್ ನಲ್ಲಿರುವರಿಗೆ ಸ್ವಪಕ್ಷಿಯರಿಂದಲೇ ಒಳ ಏಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆ ರೀತಿಯಾಗಿ ನನಗೆಲ್ಲು ಕಾಣ್ತಿಲ್ಲ. ಇದೆಲ್ಲಾ ಕ್ರಿಯೆಟೆಡ್, ಒಂದೊಂದು ಸಲ ನಾವೆಲ್ಲಾ ಸೇರಿ ಕ್ರಿಯೆಟ್ ಮಾಡ್ಕೊಂಡು ಬಿಡ್ತಿವಿ. ಮೆಜಾರಿಟಿ ಬಂದ ಮೇಲೆ ಇದೆಲ್ಲಾ ತೀರ್ಮಾನ ಆಗುತ್ತೆ. ಅದಕ್ಕಿಂತ ಮುಂಚೆನೆ ನಾವೆಲ್ಲಾ ತೀರ್ಮಾನ ಮಾಡ್ಕೊಳ್ಳೋದಿಕ್ಕೆ ಆಗಲ್ಲ. ಮೊದಲನೇ ಹಂತದಲ್ಲಿ ನಾವು ಪಕ್ಷವನ್ನ ಅಧಿಕಾರಕ್ಕೆ ತರುವ ಕೆಲಸ ಮಾಡ್ಬೇಕು. ಮಿಕ್ಕಿದೆಲ್ಲಾ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಪರಮೇಶ್ವರ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


