ತಾಕತ್ ಇದ್ದರೆ ಪ್ರತಿ ಕುಟುಂಬದ ಮಹಿಳೆಯರಿಗೆ 5 ಸಾವಿರ ರೂಪಾಯಿ ಘೋಷಣೆ ಮಾಡಿ ಎಂದು ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಬಿಜೆಪಿಗೆ ಸವಾಲು ಹಾಕಿದ್ದಾರೆ.
ತಿಗಳ ಮತ್ತು ನಾಯಕರ ಸಮುದಾಯದ ಸಮಾವೇಶದಲ್ಲಿದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜನರ ಹಸಿವನ್ನು ನೀಗಿಸುವ ಕೆಲಸ ಮಾಡಿದರೆ, ಬಿಜೆಪಿ ಸರ್ಕಾರ ಅನ್ನವನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಒಂದನ್ನು ಬಿಟ್ಟು, ಬಿಜೆಪಿಯವರ ಕೈಯಿಂದ ಇನ್ನೇನನ್ನೂ ಮಾಡಲು ಸಾಧ್ಯವಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎನ್ನುವುದನ್ನು ತಿಳಿಯ ಬೇಕಾದ್ರೆ ವಿಧಾನ ಸೌಧದ ಕಂಬಗಳಿಗೆ ಕಿವಿಕೊಟ್ಟು ಕೇಳಿ, ಪ್ರತಿ ಕಂಬವೂ 40 ಪರ್ಸೆಂಟ್ ಕಮಿಷನ್ ಎಂದು ಹೇಳುತ್ತದೆ ಎಂದು ಅವರು ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಕೊಟ್ಟಂತಹ ಮಾತುಗಳನ್ನು ನೆರವೇರಿಸಿದೆ ಮುಂದೆಯೂ ಮಾತಿಗೆ ಬದ್ದವಿರುತ್ತೇವೆ. ಈಗಲೂ ಅಷ್ಟೇ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಪ್ರತಿ ಕುಟುಂಬದ ಮಹಿಳೆಗೆ 2000, 10 ಕೆಜಿ ಅಕ್ಕಿ, 200 ಯೂನಿಟ್ ವಿದ್ಯುತ್ ಉಚಿತ ಇದು ಕಾಂಗ್ರೆಸ್ ನ ಭರವಸೆಯಾಗಿದೆ. ಬಿಜೆಪಿಗೆ ತಾಕತ್ ಇದ್ದರೆ ಈ ರೀತಿಯ ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
ವರದಿ : ಮಂಜುಸ್ವಾಮಿ. ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy