nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ
    ಮಧುಗಿರಿ April 5, 2023

    ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ

    By adminApril 5, 2023No Comments3 Mins Read
    kanimaiha

    ಮಧುಗಿರಿ : ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರಿಂದ  ಇತಿಹಾಸದಲ್ಲೇ ಕಂಡರಿಯದಂತಹ  ತಲೆ ತಗ್ಗಿಸುವ  ಘಟನೆ ನಡೆದಿದೆ ಎಂದು   ಜಿಲ್ಲಾ ಡಿ ಎಸ್ ಎಸ್ ಸಂಘಟನಾ ಸಂಚಾಲಕರಾದ ಡಾ.ದೊಡ್ಡೇರಿ ಕಣಿಮಯ್ಯ ತಿಳಿಸಿದರು

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಈ ಹಿಂದೆ ಮಧುಗಿರಿ ಕ್ಷೇತ್ರವನ್ನು ಆಳಿದ ಮಹಾನೀಯರ ಕಾಲದಲ್ಲೂ  ಇಂತಹ ಘಟನೆ ಎಂದಿಗೂ ನಡೆದಿಲ್ಲ, ಆದರೆ ಈ ಬಾರಿಯ ಹಾಲಿ  ಶಾಸಕರಿಂದ ಆದ ಅವಮಾನದಿಂದ  ಕ್ಷೇತ್ರದ ಮತದಾರರು   ತಲೆತಗ್ಗಿಸುವಂತಾಗಿದೆ, ಮತದಾರರಿಗೆ ಆದ ಅವಮಾನವನ್ನು ಖಂಡಿಸುತ್ತಾ ಈ ದಿನ ತಾಲೂಕಿನ ಎಲ್ಲಾ ಪ್ರಗತಿಪರ, ದಲಿತಪರ, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ  ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು.


    Provided by
    Provided by

    ಶಾಸಕರ ಅವಧಿಯಲ್ಲಿ ಬಹು ಜನರಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿಲ್ಲ, ಕಳೆದ ಕೋರೋಣ  ಸಾಂಕ್ರಾಮಿಕ ರೋಗದ ಸಮಯದಲ್ಲಿ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸದ ಶಾಸಕರು,  ಈಗ ಚುನಾವಣೆ ಸಮೀಪ ಇರುವ  ಸಂದರ್ಭದಲ್ಲಿ   ಮತದಾರರಿಗೆ   ಹಣದ, ಪ್ರವಾಸದ ಅಮಿಷಾಗಳು ಒಡ್ಡುತ್ತಿರುವುದು ಖಂಡನೀಯವಾಗಿದೆ.   ಕ್ಷೇತ್ರದ ಮತದಾರರ ಮುಂದೆ ಶಾಸಕರು ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ  ದೊಡ್ಡ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.

    ಕ್ಷೇತ್ರದ ಜನರು ಹಾಲಿ  ಶಾಸಕರಿಗೆ ಈ ಹಿಂದೆ ನಡೆದ  ಚುನಾವಣೆಯಲ್ಲಿ  78,000 ಮತನೀಡಿ ಜಯಶೀಲರನ್ನಾಗಿ ಮಾಡಿದ್ದು ಓ ಎಫ್ ಸಿ ಕೇಬಲ್ ಹಗರಣದಲ್ಲಿ ಶಾಸಕರು  ಲಂಚ ಸ್ವೀಕರಿಸುವುದಕ್ಕಾ? ಎಂದು ಜೀವಿಕ ಸಂಘಟನೆಯ ಚಿಕ್ಕಮ್ಮ  ಪತ್ರಿಕಾಗೋಷ್ಠಿಯಲ್ಲಿ  ಪ್ರಶ್ನಿಸಿದರಲ್ಲದೇ, ಕ್ಷೇತ್ರದ ಮತಬಾಂಧವರಿಗೆ ಆಗಿರುವ ಅನ್ಯಾಯಕ್ಕೆ ಶಾಸಕರು   ಮತದಾರರಲ್ಲಿ ಶಾಸಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಪಾಂಡುರಂಗಯ್ಯ ಮಾತನಾಡಿ,   ಕ್ಷೇತ್ರದ   ಶಾಸಕರು  ಕೇಬಲ್ ಅಳವಡಿಕೆ ಕಾಮಗಾರಿಯಲ್ಲಿ  ಬೇಡಿಕೆ ಇಟ್ಟು ಒಂದುವರೆ ಲಕ್ಷ ಹಣ ಪಡೆದಿರುವುದು ಇದು  ನಾಚಿಕೆಯ ಸಂಗತಿ, ಇಂತಹ ಶಾಸಕರಿಂದ  ಇಡೀ ರಾಜ್ಯದಲ್ಲಿ ನಮ್ಮ ಕ್ಷೇತ್ರಕ್ಕೆ ಅವಮಾನವಾಗಿದೆ, ಈ ಹಿಂದೆ   ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ತಮ್ಮ ಅವಧಿಯಲ್ಲಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸ   ಕಾರ್ಯಗಳನ್ನು ಕ್ಷೇತ್ರದಲ್ಲಿ  ಮಾಡಿ ಒಳ್ಳೆಯ ಹೆಸರು ಗಳಿಸಿದ್ದು ನಾವು ಕಾಣಬಹುದು, ಶಾಸಕರ  ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿ ಸಹ  ಆಗಿಲ್ಲ, ಎಲ್ಲಾ ಮತಬಾಂಧವರು ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ  ಜನಸಮಾನ್ಯರ ಹಿತ ಕಾಯುವ ವ್ಯಕ್ತಿಗೆ ಅಮೂಲ್ಯವಾದ ಮತ ನೀಡಿ ಎಂದು ಮನವಿ ಮಾಡಿದರು.

    ಮಾದಿಗ ದಂಡೋರ ಅಧ್ಯಕ್ಷರು ಸಿದ್ದಾಪುರ ರಂಗಶಾಮಣ್ಣ ಮಾತನಾಡಿ, ನಮ್ಮ ಮಧುಗಿರಿ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಮೇಲ್ಪಟ್ಟು ಮತ ಬಾಂಧವರಿದ್ದು,  ಇಡೀ ರಾಷ್ಟ್ರ ರಾಜ್ಯ ಮಟ್ಟದಲ್ಲಿ ನಮ್ಮ ಕ್ಷೇತ್ರಕ್ಕೆ  ಶಾಸಕರಿಂದ ಅವಮಾನವಾಗಿದೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕ್ಷೇತ್ರದ ಹಾಲಿ  ಶಾಸಕರು ಕೇಬಲ್  ಅಳವಡಿಕೆ  ಕಾಮಗಾರಿಯಲ್ಲಿ ಹಣ ಪಡೆದು ಕ್ಷೇತ್ರದ ಜನಸಾಮಾನ್ಯರ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಇಂತಹ ಶಾಸಕರಿಂದ ಕ್ಷೇತ್ರಕ್ಕೆ ಕೆಟ್ಟ ಹೆಸರು, ಈ ಕೂಡಲೇ ಶಾಸಕರು ಕ್ಷೇತ್ರ ಮತದಾರರ  ಮುಂದೆ ಕ್ಷಮೆ ಯಾಚಿಸಿ,  ಎಲ್ಲಾ ಮತಬಾಂಧವರ ವಿಶ್ವಾಸ ಪಡೆಯಬೇಕು. ಈ ಹಿಂದೆ 2013 ರಿಂದ 2018 ವರೆಗೆ  ಕ್ಷೇತ್ರದ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ರವರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿರುವುದು ನಾವು ಕಾಣಬಹುದು, ಆದ್ದರಿಂದ  ಈ ಚುನಾವಣೆಯಲ್ಲಿ  ಕ್ಷೇತ್ರದ ಅಭಿವೃದ್ಧಿಗಾಗಿ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿ ಆಶೀರ್ವಾದಿಸಿ ಎಂದು ತಿಳಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ್ ಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಶಿವಕುಮಾರ್ ಮಾತನಾಡಿ, ಕ್ಷೇತ್ರದ ಶಾಸಕರು ರಸ್ತೆಯ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ಕಿ.ಮೀ. ಗೆ 1 ಲಕ್ಷ  ಹಣ ಪಡೆಯುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದರೂ, ಒಂದೊಂದು ಕೆಲಸಕ್ಕೆ ಇಷ್ಟು ಹಣ ನೀಡಬೇಕು ಇಲ್ಲವಾದಲ್ಲಿ ಕೆಲಸ ಕಾರ್ಯದಲ್ಲಿ ಅಡೆತಡೆ ಉಂಟಾಗುವುದು ಖಚಿತ. ಇದು ನಾಚಿಕೆಯ ಸಂಗತಿ ಇಂತಹ  ಸಂಗತಿಯಿಂದ  ಕ್ಷೇತ್ರದ ಗೌರವಕ್ಕೆ ಧಕ್ಕೆಯಾಗಿದೆ  ಈ ಕೂಡಲೇ ಶಾಸಕರು ಕ್ಷೇತ್ರದ ಮತಬಾಂಧವರ ಮುಂದೆ ಕ್ಷಮೆಯಾಚಿಸಬೇಕು ಎಂದರು.

    ಈ ಸಂದರ್ಭದಲ್ಲಿ   ಜೀವಿಕ ಮಂಜು, ಮಾದಿಗ ದಂಡೋರ ರಾಘವೇಂದ್ರ, ಸಿದ್ದಾಪುರ  ಸಂಜೀವಯ್ಯ, ಡಾ.ಮಹಾರಾಜು, ರಾಜ್ ಗೋಪಾಲ್,  ಅಂಜಿನಪ್ಪ, ಕೃಷ್ಣಪ್ಪ ನಾಗೇಶ್ ನೀರಕಲ್ಲು, ರಂಗನಾಥ ವಿಜಿ  ಹಾಗೂ ವಿವಿಧ ಸಂಘಟನಾ ಅಧ್ಯಕ್ಷರು ಕಾರ್ಯದರ್ಶಿಗಳು  ಪದಾಧಿಕಾರಿಗಳು ಇದ್ದರು.

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.