nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ
    ಮಧುಗಿರಿ April 5, 2023

    ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ

    By adminApril 5, 2023No Comments3 Mins Read
    kanimaiha

    ಮಧುಗಿರಿ : ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರಿಂದ  ಇತಿಹಾಸದಲ್ಲೇ ಕಂಡರಿಯದಂತಹ  ತಲೆ ತಗ್ಗಿಸುವ  ಘಟನೆ ನಡೆದಿದೆ ಎಂದು   ಜಿಲ್ಲಾ ಡಿ ಎಸ್ ಎಸ್ ಸಂಘಟನಾ ಸಂಚಾಲಕರಾದ ಡಾ.ದೊಡ್ಡೇರಿ ಕಣಿಮಯ್ಯ ತಿಳಿಸಿದರು

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಈ ಹಿಂದೆ ಮಧುಗಿರಿ ಕ್ಷೇತ್ರವನ್ನು ಆಳಿದ ಮಹಾನೀಯರ ಕಾಲದಲ್ಲೂ  ಇಂತಹ ಘಟನೆ ಎಂದಿಗೂ ನಡೆದಿಲ್ಲ, ಆದರೆ ಈ ಬಾರಿಯ ಹಾಲಿ  ಶಾಸಕರಿಂದ ಆದ ಅವಮಾನದಿಂದ  ಕ್ಷೇತ್ರದ ಮತದಾರರು   ತಲೆತಗ್ಗಿಸುವಂತಾಗಿದೆ, ಮತದಾರರಿಗೆ ಆದ ಅವಮಾನವನ್ನು ಖಂಡಿಸುತ್ತಾ ಈ ದಿನ ತಾಲೂಕಿನ ಎಲ್ಲಾ ಪ್ರಗತಿಪರ, ದಲಿತಪರ, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ  ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು.


    Provided by
    Provided by
    Provided by

    ಶಾಸಕರ ಅವಧಿಯಲ್ಲಿ ಬಹು ಜನರಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿಲ್ಲ, ಕಳೆದ ಕೋರೋಣ  ಸಾಂಕ್ರಾಮಿಕ ರೋಗದ ಸಮಯದಲ್ಲಿ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸದ ಶಾಸಕರು,  ಈಗ ಚುನಾವಣೆ ಸಮೀಪ ಇರುವ  ಸಂದರ್ಭದಲ್ಲಿ   ಮತದಾರರಿಗೆ   ಹಣದ, ಪ್ರವಾಸದ ಅಮಿಷಾಗಳು ಒಡ್ಡುತ್ತಿರುವುದು ಖಂಡನೀಯವಾಗಿದೆ.   ಕ್ಷೇತ್ರದ ಮತದಾರರ ಮುಂದೆ ಶಾಸಕರು ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ  ದೊಡ್ಡ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.

    ಕ್ಷೇತ್ರದ ಜನರು ಹಾಲಿ  ಶಾಸಕರಿಗೆ ಈ ಹಿಂದೆ ನಡೆದ  ಚುನಾವಣೆಯಲ್ಲಿ  78,000 ಮತನೀಡಿ ಜಯಶೀಲರನ್ನಾಗಿ ಮಾಡಿದ್ದು ಓ ಎಫ್ ಸಿ ಕೇಬಲ್ ಹಗರಣದಲ್ಲಿ ಶಾಸಕರು  ಲಂಚ ಸ್ವೀಕರಿಸುವುದಕ್ಕಾ? ಎಂದು ಜೀವಿಕ ಸಂಘಟನೆಯ ಚಿಕ್ಕಮ್ಮ  ಪತ್ರಿಕಾಗೋಷ್ಠಿಯಲ್ಲಿ  ಪ್ರಶ್ನಿಸಿದರಲ್ಲದೇ, ಕ್ಷೇತ್ರದ ಮತಬಾಂಧವರಿಗೆ ಆಗಿರುವ ಅನ್ಯಾಯಕ್ಕೆ ಶಾಸಕರು   ಮತದಾರರಲ್ಲಿ ಶಾಸಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಪಾಂಡುರಂಗಯ್ಯ ಮಾತನಾಡಿ,   ಕ್ಷೇತ್ರದ   ಶಾಸಕರು  ಕೇಬಲ್ ಅಳವಡಿಕೆ ಕಾಮಗಾರಿಯಲ್ಲಿ  ಬೇಡಿಕೆ ಇಟ್ಟು ಒಂದುವರೆ ಲಕ್ಷ ಹಣ ಪಡೆದಿರುವುದು ಇದು  ನಾಚಿಕೆಯ ಸಂಗತಿ, ಇಂತಹ ಶಾಸಕರಿಂದ  ಇಡೀ ರಾಜ್ಯದಲ್ಲಿ ನಮ್ಮ ಕ್ಷೇತ್ರಕ್ಕೆ ಅವಮಾನವಾಗಿದೆ, ಈ ಹಿಂದೆ   ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ತಮ್ಮ ಅವಧಿಯಲ್ಲಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸ   ಕಾರ್ಯಗಳನ್ನು ಕ್ಷೇತ್ರದಲ್ಲಿ  ಮಾಡಿ ಒಳ್ಳೆಯ ಹೆಸರು ಗಳಿಸಿದ್ದು ನಾವು ಕಾಣಬಹುದು, ಶಾಸಕರ  ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿ ಸಹ  ಆಗಿಲ್ಲ, ಎಲ್ಲಾ ಮತಬಾಂಧವರು ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ  ಜನಸಮಾನ್ಯರ ಹಿತ ಕಾಯುವ ವ್ಯಕ್ತಿಗೆ ಅಮೂಲ್ಯವಾದ ಮತ ನೀಡಿ ಎಂದು ಮನವಿ ಮಾಡಿದರು.

    ಮಾದಿಗ ದಂಡೋರ ಅಧ್ಯಕ್ಷರು ಸಿದ್ದಾಪುರ ರಂಗಶಾಮಣ್ಣ ಮಾತನಾಡಿ, ನಮ್ಮ ಮಧುಗಿರಿ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಮೇಲ್ಪಟ್ಟು ಮತ ಬಾಂಧವರಿದ್ದು,  ಇಡೀ ರಾಷ್ಟ್ರ ರಾಜ್ಯ ಮಟ್ಟದಲ್ಲಿ ನಮ್ಮ ಕ್ಷೇತ್ರಕ್ಕೆ  ಶಾಸಕರಿಂದ ಅವಮಾನವಾಗಿದೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕ್ಷೇತ್ರದ ಹಾಲಿ  ಶಾಸಕರು ಕೇಬಲ್  ಅಳವಡಿಕೆ  ಕಾಮಗಾರಿಯಲ್ಲಿ ಹಣ ಪಡೆದು ಕ್ಷೇತ್ರದ ಜನಸಾಮಾನ್ಯರ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಇಂತಹ ಶಾಸಕರಿಂದ ಕ್ಷೇತ್ರಕ್ಕೆ ಕೆಟ್ಟ ಹೆಸರು, ಈ ಕೂಡಲೇ ಶಾಸಕರು ಕ್ಷೇತ್ರ ಮತದಾರರ  ಮುಂದೆ ಕ್ಷಮೆ ಯಾಚಿಸಿ,  ಎಲ್ಲಾ ಮತಬಾಂಧವರ ವಿಶ್ವಾಸ ಪಡೆಯಬೇಕು. ಈ ಹಿಂದೆ 2013 ರಿಂದ 2018 ವರೆಗೆ  ಕ್ಷೇತ್ರದ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ರವರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿರುವುದು ನಾವು ಕಾಣಬಹುದು, ಆದ್ದರಿಂದ  ಈ ಚುನಾವಣೆಯಲ್ಲಿ  ಕ್ಷೇತ್ರದ ಅಭಿವೃದ್ಧಿಗಾಗಿ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿ ಆಶೀರ್ವಾದಿಸಿ ಎಂದು ತಿಳಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ್ ಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಶಿವಕುಮಾರ್ ಮಾತನಾಡಿ, ಕ್ಷೇತ್ರದ ಶಾಸಕರು ರಸ್ತೆಯ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ಕಿ.ಮೀ. ಗೆ 1 ಲಕ್ಷ  ಹಣ ಪಡೆಯುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದರೂ, ಒಂದೊಂದು ಕೆಲಸಕ್ಕೆ ಇಷ್ಟು ಹಣ ನೀಡಬೇಕು ಇಲ್ಲವಾದಲ್ಲಿ ಕೆಲಸ ಕಾರ್ಯದಲ್ಲಿ ಅಡೆತಡೆ ಉಂಟಾಗುವುದು ಖಚಿತ. ಇದು ನಾಚಿಕೆಯ ಸಂಗತಿ ಇಂತಹ  ಸಂಗತಿಯಿಂದ  ಕ್ಷೇತ್ರದ ಗೌರವಕ್ಕೆ ಧಕ್ಕೆಯಾಗಿದೆ  ಈ ಕೂಡಲೇ ಶಾಸಕರು ಕ್ಷೇತ್ರದ ಮತಬಾಂಧವರ ಮುಂದೆ ಕ್ಷಮೆಯಾಚಿಸಬೇಕು ಎಂದರು.

    ಈ ಸಂದರ್ಭದಲ್ಲಿ   ಜೀವಿಕ ಮಂಜು, ಮಾದಿಗ ದಂಡೋರ ರಾಘವೇಂದ್ರ, ಸಿದ್ದಾಪುರ  ಸಂಜೀವಯ್ಯ, ಡಾ.ಮಹಾರಾಜು, ರಾಜ್ ಗೋಪಾಲ್,  ಅಂಜಿನಪ್ಪ, ಕೃಷ್ಣಪ್ಪ ನಾಗೇಶ್ ನೀರಕಲ್ಲು, ರಂಗನಾಥ ವಿಜಿ  ಹಾಗೂ ವಿವಿಧ ಸಂಘಟನಾ ಅಧ್ಯಕ್ಷರು ಕಾರ್ಯದರ್ಶಿಗಳು  ಪದಾಧಿಕಾರಿಗಳು ಇದ್ದರು.

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್

    September 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.