ತುಮಕೂರು: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20ರಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಕೊರಟಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಕಮಿಷನರ್ ಆಗಿದ್ದ ವೇಳೆ 1300 ಕೋಟಿ ಅಕ್ರಮ ನಡೆಸಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ್ ಆರೋಪಿಸಿದರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಅವರು ಬಿಬಿಎಂಪಿ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆಸಿದ್ದಾರೆ, ಸ್ಮಾರ್ಟ್ ಪಾರ್ಕಿಂಗ್ ಗೆ 31.6 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಷ್ಟು ಹಣ ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ, ಅನಿಲ್ ಕುಮಾರ್ ಗುತ್ತಿಗೆ ಸಂಸ್ಥೆಯಾದ ಬಿಲ್ಡಿಂಗ್ಸ್ ಕಂಟ್ರೋಲ್ ಸಲ್ಯೂಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ದೂರಿದರು.
ಅಲ್ಲದೇ ಕಮಿಷನರ್ ಆಗಿದ್ದ ವೇಳೆ ಮಳೆ ನೀರಿನ ಹೂಳು ತೆಗೆಯುವ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ. ಎಂಟು ವಲಯಗಳ ಗುತ್ತಿಗೆಯನ್ನು ಮೆಸರ್ಸ್ಯೋಗ ಅಂಡ್ ಕಂಪನಿ ಎಂಬ ಒಂದೇ ಸಂಸ್ಥೆಗೆ 36 ಕೋಟಿ ರೂ. ಮೊತ್ತಕ್ಕೆ ನೀಡಲಾಗಿದೆ. ಈ ಕಾಮಗಾರಿ ಸರಿಯಾಗಿ ನಡೆಯದಿರುವುದರಿಂದ ಬೆಂಗಳೂರಿನಲ್ಲಿ ಪ್ರವಾಹ ನೋಡಬೇಕಾಯಿತು. ಅಗತ್ಯಕ್ಕಿಂತ ಹೆಚ್ಚು ಹಣ ಬಿಡುಗಡೆ ಮಾಡಿ ಜನರ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ ಎಂದರು.
ಅಲ್ಲದೇ ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು 969 ಕೋಟಿ ರೂ. ಬಿಡುಗಡೆ ಮಾಡಿದೆ. ಇಷ್ಟು ದೊಡ್ಡ ಪ್ರಮಾಣದ ಹಣವು ಹೇಗೆ ಬಳಕೆಯಾಗಬೇಕು ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಒಂದೇ ಕಡೆ 49 ಕೋಟಿ ರೂ. ಖರ್ಚು ಮಾಡಿರುವುದೂ ಇದೆ. ಇದಲ್ಲದೇ, ಕೋವಿಡ್ ಚಿಕಿತ್ಸೆಗಾಗಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಯಲಯದಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿಗೆ ಹಾಸಿಗೆ ಮುಂತಾದವುಗಳಿಗೆ ಕೋಟ್ಯಂತರ ಹಣ ಖರ್ಚು ಮಾಡಿರುವುದರಲ್ಲಿಯೂ ಫ್ಟ್ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಇವೆಲ್ಲ ಸೇರಿ ಅನಿಲ್ ಕುಮಾರ್ ಕಮಿಷನರ್ ಆಗಿದ್ದಾಗ ಸರಿ ಸುಮಾರು 1300 ಕೋಟಿ ರೂ. ಮೊತ್ತದ ಅಕ್ರಮಗಳು ನಡೆದಿವೆ. ಇವೆಲ್ಲವುಗಳ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy