ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದಿಂದ ಹಿಂದುಳಿದ ವರ್ಗಗಳ ಸಮಾವೇಶ ಮಾಡಲು ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ನಿರೀಕ್ಷೆಗೂ ಹೆಚ್ಚು ಮುಖಂಡರು ಭಾಗವಹಿಸಿದ್ದು ವಿಶೇಷವಾಗಿತ್ತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಮಾತನಾಡಿ, ನಾವು ಕೆಲವರಿಗೆ ಮಾತ್ರ ಈ ಪೂರ್ವಭಾವಿ ಸಭೆ ಬರುವಂತೆ ಆಹ್ವಾನ ನೀಡಿದ್ದೆವು. ಈ ಸಭೆಗೆ ಇಷ್ಟು ಮುಖಂಡರು ಭಾಗವಹಿಸಿದ್ದು ಬಹಳ ಖುಷಿಯ ಸಂಗತಿ ಎಂದರು.
ದೇವೇಗೌಡರ ಅಂದಿನ ದೂರದೃಷ್ಟಿಯ ಕಾರಣ ಇಂದು ಬಹುತೇಕ ಎಲ್ಲಾ ಸಮುದಾಯಕ್ಕೆ ಮೀಸಲಾತಿ ಸಿಕ್ಕಿದೆ. ಹಾಗಾಗಿ ಈ ಬಾರಿ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ಗದ್ದುಗೆ ಏರಲು ತಾವೆಲ್ಲ ಶ್ರಮಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಕೆಲ ಸಮುದಾಯಗಳ ಮುಖಂಡರು ಮಾತನಾಡಿ, ಈ ಬಾರಿ 2013 ರ ಫಲಿತಾಂಶ ಮರುಕಳಿಸುತ್ತಿದೆ. ಈ ಬಾರಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಖಚಿತ. ಮತ್ತೊಮ್ಮೆ ಕೊರಟಗೆರೆ ಜೆಡಿಎಸ್ ಭದ್ರಕೋಟೆ ಎಂಬುದು ಸಾಬೀತಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಜೆಡಿಎಸ್ ಅಭ್ಯರ್ಥಿಯಾದ ಪಿ.ಆರ್. ಸುಧಾಕರ್ ಲಾಲ್ ರವರ ಬೆಂಬಲಕ್ಕೆ ಸ್ವಯಂ ಪ್ರೇರಿತವಾಗಿ ಹಿಂದುಳಿದ ವರ್ಗಗಳ ಎಲ್ಲಾ ಜಾತಿಯ ಮುಖಂಡರು ಸೇರಿ ಹಿಂದುಳಿದ ವರ್ಗದ ಸಮಾವೇಶದ ಆಯೋಜನೆಗೆ ತೀರ್ಮಾನಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy