ಮಧುಗಿರಿ: ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ದಿನಾಂಕ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಮಧುಗಿರಿ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೋಸಕೋಟೆ ಗ್ರಾಮದ ತಿಮ್ಮಯ್ಯ ಬಿನ್ ಭೀಮಯ್ಯ ರವರ ಪೆಟ್ಟಿಗೆ ಅಂಗಡಿ ಮೇಲೆ ದಾಳಿ ಮಾಡಿ 16,944 ರೂ ಮೌಲ್ಯದ ಒಟ್ಟು 34.560ಲೀ ಮದ್ಯ, ಜಪ್ತಿ ಮಾಡಲಾಗಿದೆ.
ತುಮಕೂರು ಜಿಲ್ಲೆ ಅಬಕಾರಿ ಉಪ ಆಯುಕ್ತ ರವರ ನಿರ್ದೇಶನದಂತೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಮಧುಗಿರಿ ಉಪ ವಿಭಾಗರವರ ಮಾಗ೯ದಶ೯ನದಲ್ಲಿ ದಾಳಿ ನಡೆಸಿ ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಆರೋಪಿತನ ವಿರುದ್ಧ CrPC -41(A)(1) ರಡಿಯಲ್ಲಿ ನೋಟಿಸ್ ಜಾರಿಗೊಳಿಸಿ ಪ್ರಕರಣವನ್ನು ದಾಖಲಿಸಲಾಗಿದೆ.
ಅಬಕಾರಿ ಉಪ ನಿರೀಕ್ಷಕರಾದ ರಂಗದಾಮಯ್ಯ ಅವರು ಪ್ರಕರಣ ದಾಖಲಿಸಿದ್ದು, ಸಿಬ್ಬಂದಿಗಳಾದ ರಮೇಶ್, ಖಾನ್, ಶರಣಪ್ಪ , ನಿಂಗಣ್ಣ ಇವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA