nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಕ್ಷಸ ರಾಜಕೀಯಕ್ಕೆ ಕೊನೆ ಎಳೆಯಬೇಕು: ಮಧುಗಿರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ
    ಮಧುಗಿರಿ April 10, 2023

    ರಾಕ್ಷಸ ರಾಜಕೀಯಕ್ಕೆ ಕೊನೆ ಎಳೆಯಬೇಕು: ಮಧುಗಿರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ

    By adminApril 10, 2023No Comments3 Mins Read
    kumaraswami

    ಮಧುಗಿರಿ: ಕ್ಷೇತ್ರದ ಹಾಲಿ ಶಾಸಕರಾದ ಎಂ.ವಿ. ವೀರಭದ್ರಯ್ಯ ರವರ ನಿವಾಸ ಡಿ ಕೈಮರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಹಲವಾರು ಪಕ್ಷಗಳಲ್ಲಿ ಸೇವೆ ಸಲ್ಲಿಸಿದ ಜನಸೇವಕರು, ಸಮಾಜ ಸೇವಕರು ಹಾಗೂ ಹಲವಾರು ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರುಗಳು ಸುಮಾರು 2,000ಕ್ಕೂ ಹೆಚ್ಚು ಜನ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ತೊರೆದು ವೀರಭದ್ರಯ್ಯ ರವರ ಚುನಾವಣಾ ಬೆಂಬಲಕ್ಕೆ ನಿಂತು ಜೆಡಿಎಸ್ ಪಕ್ಷ ಸೇರ್ಪಡೆ ಆಗಿದ್ದು ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.


    Provided by

    ಮಳೆಯ ಆಧಾರದಲ್ಲಿ ಜೀವನ ಮಾಡುವ ಕ್ಷೇತ್ರ ಇದು, ತೀರ ಬಡಪೀಡಿತ ಪ್ರದೇಶ. ಬೋರ್ವೆಲ್ ಇದ್ದರೆ ಮಾತ್ರ ರೈತರು ಕೃಷಿ ಮಾಡಬಹುದು ಆದ್ದರಿಂದ ರೈತರಿಗಾಗಿ ಶಾಶ್ವತ ನೀರಿನ ಪರಿಹಾರ ರೂಪಿಸಬೇಕು, ರಾಜ್ಯದಲ್ಲಿ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಸುಮಾರು ಎರಡೂವರೆ ಲಕ್ಷ ಕೋಟಿ ಹಣ ಬೇಕು. ಅದಕ್ಕೆ ಐದು ವರ್ಷದ ಸ್ವತಂತ್ರ ಸರ್ಕಾರದ ಅಧಿಕಾರ ನನಗೆ ಕೊಡಿ, ಉರಿಬಿಸಿಲಿನಲ್ಲಿ ನಾಲ್ಕು ತಿಂಗಳಲ್ಲಿ ರಾಜ್ಯ ವ್ಯಾಪ್ತಿ ಓಡಾಡಿ ಬಡವರಿಗಾಗಿ ಬದುಕು ಕಟ್ಟುವುದಕ್ಕೆ ಕೆಲಸ ಮಾಡುತ್ತ ಬಂದಿದ್ದು, ಬಡವರಿಗಾಗಿಯೇ ಪಂಚರತ್ನ ಯೋಜನೆ ತಂದಿದ್ದು, ಅಧಿಕಾರಕ್ಕೆ ಬಂದ ಕೂಡಲೇ ಪಂಚಾತ್ಮ ಯೋಜನೆಯ ಜಾರಿಯಾಗುತ್ತೆ ಆದ್ದರಿಂದ ನಮ್ಮ ಪಕ್ಷದ ಕ್ಷೇತ್ರದ ಅಭ್ಯರ್ಥಿ ವೀರಭದ್ರಯ್ಯ ರವರ ಗೆಲುವು ತುಂಬಾನೇ ಮುಖ್ಯ ಈ ಕಾರ್ಯಕ್ರಮ ಯಶಸ್ವಿಗೆ ಕಾರಣಕರ್ತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಕೊಂಡವಾಡಿ ಚಂದ್ರಶೇಖರ್ ಮತ್ತು ಬೆಂಬಲಿಗರು, ಎಸ್ ಡಿ ಕೃಷ್ಣಪ್ಪ ರವರ ಅಭಿಮಾನಿಗಳು ಹಲವು ಪಕ್ಷಗಳ ಮುಖಂಡರು ಪಕ್ಷ ಸೇರ್ಪಡೆಯಾಗಿದ್ದು ಎಲ್ಲರೂ ಅವರ ಮನೆಗೆ ಮರಳಿ, ಮತ್ತೆ ಮನೆಗೆ ಬಂದಂತೆ. 2008 ರ ಚುನಾವಣಾ ಋಣ ನನ್ನ ಮೇಲಿದೆ ಸಂಪೂರ್ಣ ಅಧಿಕಾರ ಸಿಗದಿರುವುದರಿಂದ ಅಭಿವೃದ್ಧಿಪಡಿಸಲಾಗಿಲ್ಲ ಆದ್ದರಿಂದ ಈ ಬಾರಿ ಸಂಪೂರ್ಣ ಅಧಿಕಾರ ಕೊಡಿ ನಾನು ದತ್ತು ಪಡೆದಾರರು ಕ್ಷೇತ್ರ ಅಭಿವೃದ್ಧಿ ಮಾಡುವೆ ಎಂದರು.

    ಮಾಜಿ ಶಾಸಕ ರಾಜಣ್ಣನಿಗೆ ಪರೋಕ್ಷಕವಾಗಿ ಟಾಂಗ್ ಕೊಟ್ಟ ಕುಮಾರಸ್ವಾಮಿ :
    ಅಪೇಕ್ಸ್ ಬ್ಯಾಂಕ್ ಹಗರಣ ಬಯಲಾಗಿ ಜೈಲಿಗೆ ಹೋಗಬೇಕಿದ್ದ ವ್ಯಕ್ತಿಗೆ ಬಿಜೆಪಿ ಸರ್ಕಾರ ರಚನೆಯಾದ ಕೂಡಲೇ ರಕ್ಷಣೆ ಕೊಟ್ಟು ಶ್ರೀರಕ್ಷೆಯಾದ ಬಿಜೆಪಿ ಸರ್ಕಾರ, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ನಾಯಕ ಸಮಾಜದ ಮತಗಳು ಮಾತ್ರ ಬೇಕು ಅಷ್ಟೇ ನಾಯಕ ಸಮಾಜ ಗುರುಗಳ ಕುಟುಂಬದ ರಕ್ಷಣೆ ಬೇಡ,ಕಳೆದ ಸಂಸದೀಯ ಚುನಾವಣಾ ಸಂದರ್ಭದಲ್ಲಿ ದೇಶದ ಒಬ್ಬ ಮಾಜಿ ಪ್ರಧಾನಿಯ ಸೋಲಿಗೆ ಕಾರಣಕರ್ತರಾಗಿ ಹಾಗೂ ಅವರ ಸಾವು ಬಯಸಿದ ವ್ಯಕ್ತಿಗೆ ತಕ್ಕ ಪಾಠ ಕಲಿಸಬೇಕು, ಕ್ಷೇತ್ರದಲ್ಲಿ ರಾಕ್ಷಸಿಯ ರಾಜಕೀಯಕ್ಕೆ ಕೊನೆಯಲೆಯ ಬೇಕು ಎಂದು ಸಮಾವೇಶದಲ್ಲಿ ಟಾಂಗ್ ಕೊಟ್ಟರು.

    ಶಾಸಕರಾದ ವೀರಭದ್ರಯ್ಯ ಮಾತನಾಡಿ, ಕೊಂಡವಾಡಿ ಚಂದ್ರಶೇಖರ್ ಎಸ್.ಡಿ. ಕೃಷ್ಣಪ್ಪ ಇನ್ನು ಹಲವು ಮುಖಂಡರ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ಸಿದ್ಧಾಂತ ಕುಮಾರಸ್ವಾಮಿ ಅವರ ಮಾರ್ಗದರ್ಶನ ಬೆಂಬಲಿಸಿ ಕಾಂಗ್ರೆಸ್ ಬಿಜೆಪಿ ಪಕ್ಷ ತೊರೆದು ಬೃಹತ್ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

    ಪ್ರಾದೇಶಿಕ ಪಕ್ಷವಾಗಿದ್ದರೂ ಸಹ ದೇಶಕ್ಕೆ ಪ್ರಧಾನಿ ಕೊಟ್ಟಿದ್ದು, ಇದೇ ನಮ್ಮ ಜಾತ್ಯತೀತ ಜನತಾದಳ ಪಕ್ಷ ನಾವು ಹೆಮ್ಮೆಯಿಂದ ಹೇಳಬಹುದು, ಎಚ್.ಡಿ.ದೇವೇಗೌಡರು ರಾಜ್ಯದ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ಹತ್ತು ಹಲವು ಜನಉಪಯೋಗಿ ಕೆಲಸ ಕಾರ್ಯಗಳನ್ನು ಮಾಡಿರುವುದು ಒಂದು ಇತಿಹಾಸದಂತೆ ನಾವು ನೋಡಬಹುದು, ಗ್ರಾಮೀಣ ಭಾಗದ ಬದುಕನ್ನು ಹಸಿನ ಗಳಿಸುವುದಕ್ಕೆ ಈ ಪಂಚ ರತ್ನ ಯೋಜನೆ ಮಾಡಿರುವುದು ಈ ಯೋಜನೆಯಲ್ಲಿ ಆರೋಗ್ಯಕ್ಕೆ, ಶಿಕ್ಷಣಕ್ಕೆ, ವಿದ್ಯಾಭ್ಯಾಸಕ್ಕೆ ಯುವಕ ಯುವತಿಯರಿಗೆ ಉದ್ಯೋಗ ಸೃಷ್ಟಿ ಮಾಡಲು, ಪ್ರತಿ ಮನೆ ಮನೆಯ ಸಮಸ್ಯೆ ನೀಗಿಸುವುದಕ್ಕೆ ಈ ಯೋಜನೆಯು ಒಳಗುಂದಿದೆ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿಧವೆಯರ ಮಾಸಾಸ ಪಿಂಚಣಿ 800 ರಿಂದ 2,500 ಕ್ಕೆ ಏರಿಕೆ,ರೈತರ, ಶ್ರೀ ಶಕ್ತಿ ಸಂಘ ಸಾಲಗಳ ಮನ್ನಾ ಹಲವು ಯೋಜನೆಗಳು ಕಾರ್ಯರೂಪಕ್ಕೆ ಬರುತ್ತದೆ, ಮುಖ್ಯವಾಗಿ ಮಧುಗಿರಿ ಜಿಲ್ಲೆ ಯ ಕನಸು ನನಸಾಗುತ್ತದೆ ಆಗ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

    ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಬರಬೇಕಾದರೆ ಈ ಕ್ಷೇತ್ರದ ಸ್ಥಳೀಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ, ಕಾಂಗ್ರೆಸ್ ನ ಹೈಕಮಾಂಡ್ ಸೌಜನ್ಯಕ್ಕಾದರೂ ಮಾತನಾಡಿಸಿಲ್ಲ ಏಕಾಏಕಿ ಅಭ್ಯರ್ಥಿಯನ್ನು ಘೋಷಿಸಿದರು.

    ಅನಿವಾರ್ಯ ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರುತ್ತಿದ್ದೇನೆ, ಏಕೆಂದರೆ ಈ ಹಿಂದೆ ಇದೆ ಜನತಾ ದಳದಿಂದಲೇ ನಾನು ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿದ್ದೆ, ಜಿಲ್ಲಾ ಪಂಚಾಯತಿಯ ಟಿಕೆಟ್ ಸಹಾ ಲಬಿಸಿತ್ತು ಆಗ ತಾನೇ ನನ್ನ ರಾಜಕೀಯ ಪ್ರವೇಶವಾಗಿತ್ತು, ರಾಜಕೀಯ ಪಕ್ಷದಲ್ಲಿ ನುಡಿದಂತೆ ನಡೆಯುವ ವ್ಯಕ್ತಿ ನಮ್ನ ಕುಮಾರಣ್ಣ ಈ ಹಿಂದೆ ರಾಜ್ಯಕ್ಕೆ ಅಪಾರ ಕೊಡುಗೆಗಳು ಕೊಟ್ಟಿರುವುದು ರೈತರ ಸಾಲ ಮನ್ನಾ, ಸ್ವಸಹಾಯ ಸಂಘಗಳ ಸಾಲ ಮನ್ನಾ ರೈತರ ಬೆನ್ನೆಲುಬಾಗಿ ನಿಂತಿರುವುದು, ಈ ಪಂಚ ರತ್ನ ಯೋಜನೆಯು ಸಹ ಅಪಾರ ಕೊಡುಗೆಗಳಿಂದ ತುಂಬಿದೆ ಕ್ಷೇತ್ರದಲ್ಲಿ ವೀರಭದ್ರಯ್ಯನವರಿಗೆ ಶಕ್ತಿ ತುಂಬಿದರೆ ರಾಜ್ಯದಲ್ಲಿ ಕುಮಾರಣ್ಣನಿಗೆ ಶಕ್ತಿ ತುಂಬಿದಂತೆ ಎಂದು ವೀರಭದ್ರಯ್ಯ ರವರ ಪರ ಮತಯಾಚಿಸಿದರು.

    ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ತಿಮ್ಮರಾಜು, ಸದಸ್ಯರಾದ ನಾಣಿ, ಚಂದ್ರಶೇಖರ್ ಬಾಬು, ಎಂ ಆರ್ ಜಗನ್ನಾಥ್, ಗಂಗರಾಜು, ಆಸಿಯ ಶಾಜು , ಮಾಜಿ ಪುರಸಭೆ ಸದಸ್ಯರಾದ ಅಲೀಂ ಉನ್ನಿಸಾ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್.ಡಿ. ಕೃಷ್ಣಪ್ಪ, ದೊಡ್ಡಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವೆಂಕಟೇಶ್ ಕೃಷ್ಣಪ್ಪ, ಮುಖಂಡರಾದ ಕಂಬದ ಹಳ್ಳಿ ರಘು, ಸಲ್ಮಾನ್, ನಾಗಭೂಷಣ್, ಗೋವಿಂದರಾಜು, ಕಾಂಗ್ರೆಸ್ನ ಯುವ ಮುಖಂಡ ಹರ್ಷದ್, ಕೊಡಿಗೇನಹಳ್ಳಿ ಜಬಿವುಲ್ಲಾ, ಅಲ್ಲೂ ಮಾಮು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಇದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.