ಕೊರಟಗೆರೆ: ಬಿಜೆಪಿ ಬೆಂಬಲಿತ ಎಸ್.ಟಿ ಸಮುದಾಯದ ವತಿಯಿಂದ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 11ರಂದು ಬೆಳಗ್ಗೆ 11 ಗಂಟೆಗೆ ಸಮಾವೇಶ ಆಯೋಜಿಸಲಾಗಿದೆ. ಸಮುದಾಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಮನವಿ ಮಾಡಿದರು.
ಪಟ್ಟಣದ ಪಾಂಚಜನ್ಯ ಬಿಜೆಪಿ ಕಛೇರಿಯಲ್ಲಿ ಎಸ್.ಟಿ ಸಮುದಾಯದ ಮುಖಂಡರಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಮ್ಮ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಪಕ್ಷದ ನರಸಿಂಹ ನಾಯಕ್, ಹೇಮಾಲತಾ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಆಗಮಿಸಲಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ೧೦ವರ್ಷಗಳ ಜನಪರ ಕೆಲಸಗಳನ್ನು ಜನತೆ ಮನವರಿಕೆ ಮಾಡಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.
ಎಸ್.ಟಿ ಮೋರ್ಚ ಅಧ್ಯಕ್ಷ ಗೋಪಾಲಕೃಷ್ಣ ಎ.ಪಿ ಮಾತನಾಡಿ ನಮ್ಮ ಶ್ರೀ ರಾಮುಲು ರವರ ನಾಯಕ ಸಮುದಾಯ ಅಭಿವೃದ್ಧಿಗಾಗಿ ಸದಾ ದುಡಿಯುತ್ತಿದ್ದಾರೆ. ೩% ಇದ್ದ ಮೀಸಲಾತಿಯನ್ನು ೭%ಕ್ಕೆ ಏರಿಕೆ ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು. ಅದರ ಸಲುವಾಗಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದರು.
ಮಾನ್ಯ ಶ್ರಿ ರಾಮುಲು ರವರು ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮುದಾಯಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ಹಾಗೂ ಅನೇಕ ಭವನಗಳನ್ನು ನಿರ್ಮಿಸಿಕೊಟ್ಟು ನಮ್ಮ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಮಹಿಳೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಎಲ್ಲಾರೂ ಒಟ್ಟಾಗಿ ಈ ಸಮಾವೇಶದಲ್ಲಿ ಭಾಗವಹಿಸಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಲಿದ್ದೇವೆ.
— ಗಿರಿಜಮ್ಮ , ತಾ. ಎಸ್.ಟಿ ಮಹಿಳಾ ಮೋರ್ಚ ಅಧ್ಯಕ್ಷೆ. ಕೊರಟಗೆರೆ.
ಎಸ್.ಟಿ ಮೋರ್ಚ ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಿ.ಆರ್, ಎಸ್.ಟಿ ಮಹಿಳಾ ಮೋರ್ಚ ಅಧ್ಯಕ್ಷೆ ಆರ್. ಗಿರಿಜಮ್ಮ, ಪ.ಪಂ ಸದಸ್ಯ ರಂಗನಾಥ್, ಹೆಚ್ ಮಾರುತಿ, ಶಕ್ತಿಕೇಂದ್ರದ ಅಧ್ಯಕ್ಷ ರಾಜಣ್ಣ, ಮಹಾಶಕ್ತಿ ಕೇಂದ್ರ ತಿಮ್ಮರಾಜು, ಅಧ್ಯಕ್ಷ ಸಿದ್ದಾರಾಜು ಕೆ.ಜೆ, ನಾಗರಾಜು.ಎಸ್, ಮಾರುತಿ ಪಿ.ಜಿ, ಎಸ್.ಸಿ ಮೋರ್ಚ, ಲೋಕೇಶ್ ಬಾಬು ಸೇರಿದಂತೆ ಸಮುದಾಯ ಮುಖಂಡರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy