nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮ್ಮಿಶ್ರ ಸರಕಾರ ಕೆಡವಿದ ತಪ್ಪಿಗೆ ಬಿಜೆಪಿಗೆ ಎದುರಾಯಿತೇ ಈ ಶಿಕ್ಷೆ..?
    ರಾಜ್ಯ ಸುದ್ದಿ April 12, 2023

    ಸಮ್ಮಿಶ್ರ ಸರಕಾರ ಕೆಡವಿದ ತಪ್ಪಿಗೆ ಬಿಜೆಪಿಗೆ ಎದುರಾಯಿತೇ ಈ ಶಿಕ್ಷೆ..?

    By adminApril 12, 2023No Comments2 Mins Read
    bjp

    ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಹಲವು ರಾಜ್ಯದ ಮಾದರಿಗಳನ್ನು ಕರ್ನಾಟಕದ ಮುಂದಿಟ್ಟು ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಕಮಲ ಪಡೆ 52 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ.

    ಇತ್ತಕಡೆ ಹೊಸಬರ ಪಾದಾರ್ಪಣೆಯಾಗುತ್ತಿದ್ದಂತೆ ಹಲವು ಮಾಜಿ ಅಭ್ಯರ್ಥಿಗಳು ಕಣ್ಣೀರಿಟ್ಟರೆ ಇನ್ನು ಹಲವರು ಬಂಡಾಯದ ಮುನ್ಸುಚನೆಯ ಮಾತಗಳನ್ನಾಡಿದ್ದಾರೆ ಇದರ ಮದ್ಯೆಯೆ ಕಾಂಗ್ರೆಸ್ ಇನ್ನು ಹಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದ್ದು ಬಿಜೆಪಿಯ ಹಲವರು ಕಾಂಗ್ರೆಸ್ ಕಡೆಗೆ ಜಾರಿದರೆ ಎಂಬ ತಲೆನೋವು ಕೂಡ ಬಿಜೆಪಿಗೆ ಶುರುವಾಗಿದೆ.


    Provided by
    Provided by

    ಮೊದಲ ಪಟ್ಟಿ ಬಿಡುಗಡೆಯಾದ ಕೆಲವ ಗಂಟೆಗಳಲ್ಲಿ ಬಂಡಾಯದ ಬೀತಿ:
    ಮಂಗಳವಾರ ರಾತ್ರಿ ಬಿಜೆಪಿ ಮೊದಲ ಪಟ್ಟಿ ದೆಹಲಿಯಲ್ಲಿ ಬಿಡುಗಡೆಯಾಗುತ್ತಿದ್ದಂತೆ ಕರ್ನಾಟಕದಲ್ಲಿ ಬಂಡಾಯದ ಬೀತಿ ಶುರುವಾಗಿದೆ. ಕಳೆದ ಚುನಾವಣೆಗಳಲ್ಲಿ ಬೆರಳೆಣಿಕೆಯಷ್ಟು ಮತಗಳ ಅಂತರದಲ್ಲಿ ಸೋತಿದ್ದ 52 ಕ್ಷೇತ್ರಗಲ್ಲಿ ಮಾಜಿಗಳನ್ನು ಪಕ್ಕಕ್ಕಿಟ್ಟು ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದಂತೆಯೇ ಅಥಣಿ ಕ್ಷೇತ್ರದ ಲಕ್ಷ್ಮಣ್ ಸವದಿ, ಬೆಳಗಾವಿ ಉತ್ತರದ ಅನಿಲ ಬೆನಕೆ ಸೇರಿದಂತೆ ಹಲವರು ಟಿಕೆಟ್ ಸಿಗದಿದ್ದರೆ ಬಿಜೆಪಿಗೆ ಗುಡ್ ಬಾಯ್ ಹೇಳುವ ಮುನ್ಸೂಚನೆ ನೀಡಿದ್ದು ಹೈಕಮಾಂಡ್ ಇವರ ಮನವಲಿಸುವಲ್ಲಿ ವಿಫಲವಾದರೆ ಬೆಂಬಲಿಗರ ಮತ್ತು ಸಮುದಾಯದ ಮತಗಳು ವಡೆದು ಬಿಜೆಪಿಗೆ ಪೆಟ್ಟು ಬೀಳುವುದು ಖಚಿತ.

    ನಿಷ್ಠಾವಂತ ಕಾರ್ಯಕರ್ತನ್ನು ಕಡೆಗಣಿಸಿತೆ ಬಿಜೆಪಿ?:
    ಮೋದಿ ಪರ್ವ ಶುರುವಾದಾಗಿನಿಂದಲೂ ಬಿಜೆಪಿ ಗೆಲ್ಲುವ ಕುದುರೆ ಎನ್ನುವಂತೆ ನಾಗಾಲೋಟ ಶುರುಮಾಡಿದೆ. ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಗೆದ್ದೆಗೆಲ್ಲುತ್ತೆವೆ ಎಂಬ ವಿಶ್ವಾಸ ಇಟ್ಟುಕೊಂಡಿರುವ ಬಿಜೆಪಿ ಇದೇ ಕಾರಣಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದೆಯೇ ಎಂಬ ಚರ್ಚೆ ಕಾರ್ಯಕರ್ತರ ಮದ್ಯೆ ಜೋರಾಗಿದೆ. ಇಪ್ಪತ್ತು ಮೂವತ್ತು ವರ್ಷಗಳಿಂದ ಪಕ್ಷಕ್ಕೆ ದುಡಿದ ಮತ್ತು ಕ್ಷೇತ್ರದಲ್ಲಿ ತಮ್ಮದೆಯಾದ ಹಿಡಿತ ಸಾಧಿಸಿದ ಜನಪ್ರತಿನಿಧಿಗಳನ್ನು ಪಕ್ಷಾಂತರವಾಗಿ ಬಂದ ಅಭ್ಯರ್ಥಿಗಳಿಗಾಗಿ ಸೈಡ್ ಲೈನ್ ಮಾಡಿದ್ದು ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲವೇ ಎಂಬ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಬೆಂಬಲಿಗರ ಸಮಾವೇಶದಲ್ಲಿ ಲಕ್ಷ್ಮಣ ಸವದಿಯು ನನ್ನ ಮುಂದಿನ ರಾಜಕೀಯ ಜೀವನವನ್ನು ಕಟ್ಟಿಕೊಳ್ಳಲು ನಿಮ್ಮ ಸಹಕಾರ ನೀಡಿ ಎಂದು ಭಾವುಕ ಭಾಷಣ ಮಾಡಿದ್ದು ಇದಕ್ಕೊಂದು ಉದಾಹರಣೆಯಾಗಿದೆ.

    ನಂಬಿ ಬಂದವರಿಗಾಗಿ ಮೂಲ ಅಭ್ಯರ್ಥಿಗಳಿಗೆ ನಿರಾಸೆ:
    ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ರಚಿಸಲು ಕಾಂಗ್ರೆಸ್ನಿಂದ ಬಂದಿದ್ದ ಶಾಸಕರುಗಳನ್ನ ಈ ಭಾರಿ ಚುನಾವಣೆಯಲ್ಲಿ ಕಡೆಗಣಿಸಿದರೆ ವಿಶ್ವಾಸದ್ರೋಹ ಮಾಡಿದಂತಾಗುತ್ತದೆ ಎಂಬ ಕಾರಣಕ್ಕಾದರೂ ವಲಸೆ ಬಂದ ನಾಯಕರುಗಳಿಗೆ ಟಿಕೆಟ್ ನೀಡುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಮಾಜಿ ಅಭ್ಯರ್ಥಿಗಳನ್ನು ಬಿಟ್ಟು ವಲಸೆ ಬಂದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು ಮೂಲ ಅಭ್ಯರ್ಥಿಗಳ ಅಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಟಿಕೆಟ್ ಸಿಗದಿದ್ದರೆ ತಾವು ಬೇರೆ ಪಕ್ಷಕ್ಕೆ ವಲಸೆ ಹೋಗುವ ಮುನ್ಸೂಚನೆ ನೀಡುತ್ತಿದ್ದಾರೆ.

    ಎರಡನೇ ಪಟ್ಟಿ ಬಿಡುಗಡೆ ಮೊದಲೇ ಅಭ್ಯರ್ಥಿಗಳಿಂದ ಎಚ್ಚರಿಕೆಯ ಕರೆಗಂಟೆ:

    ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಇನ್ನುಳಿದ ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದೆ. ಹುಬ್ಬಳ್ಳಿಯಿಂದ ಜಗದೀಶ ಶೆಟ್ಟರ್ ಸೇರಿದಂತೆ ಹಲವರ ಹೆಸರು ಮೊದಲ ಪಟ್ಟಿಯಲ್ಲಿ ಇಲ್ಲದಿರುವುದರಿಂದ ಪಕ್ಷ ಟಿಕೆಟ್ ನೀಡದಿದ್ದರೂ ಚುನಾವಣಾ ಸ್ಪರ್ಧೆ ಖಚಿತ ಎಂದು ಹೇಳುವುದರ ಮೂಲಕ ಹೈಕಮಾಂಡಗೆ ಮುಂಚಿತ ಎಚ್ಚರಿಕೆ ನೀಡುತ್ತಿದ್ದು ಹೇಗಾದರೂ ಟಿಕೆಟ್ ಪಡೆದು ಸ್ಪರ್ಧೆಯಲ್ಲಿರಲೇ ಬೇಕು ಎಂಬ ಹಂಬಲ ಶುರು ವಾಗಿದೆ.

    ಒಟ್ಟಿನಲ್ಲಿ 2023ರ ಚುನಾವಣೆ ಬಿಜೆಪಿಗೆ ಕಗ್ಗಂಟಾಗಿದ್ದು ಹೊಸ ಅಭ್ಯರ್ಥಿಗಳನ್ನು ಗೆಲ್ಲಿಸುವ ಪ್ರಯತ್ನದ ಜೊತೆಗೆ ಹಳೆ ಅಭ್ಯರ್ಥಿಗಳು ಪಕ್ಷದಿಂದ ಹಿಂದೆ ಸರಿಯದಂತೆ ನೋಡಿಕೊಳ್ಳುವ ಹೊಣೆ ಹೈಕಮಾಂಡ್ ಮೇಲಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ತುಮಕೂರು: ಮುಂದೆ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈಗಿನಿಂದಲೇ ತಳಮಟ್ಟದಿಂದ ಪಕ್ಷ ಸಂಘಟಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ…

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.