nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗಾಗಿ ಕ್ಷೇತ್ರದ ಮಗನಿಗೆ ಅಧಿಕಾರ ಕೊಡಿ: ಬಿಜೆಪಿ ಅಭ್ಯರ್ಥಿ ಎಲ್.ಸಿ.ನಾಗರಾಜ್
    ಮಧುಗಿರಿ April 16, 2023

    ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗಾಗಿ ಕ್ಷೇತ್ರದ ಮಗನಿಗೆ ಅಧಿಕಾರ ಕೊಡಿ: ಬಿಜೆಪಿ ಅಭ್ಯರ್ಥಿ ಎಲ್.ಸಿ.ನಾಗರಾಜ್

    By adminApril 16, 2023No Comments2 Mins Read
    lc nagaraj

    ಮಧುಗಿರಿ: ಅಧಿಕಾರವಿದ್ದರೂ ಕೂಡ ಜನಪರ  ಕೆಲಸಗಳು ಮಾಡದ ಇಬ್ಬರು ಮಾಜಿ  ಶಾಸಕರನ್ನು ಮನೆಗೆ ಕಳುಹಿಸಲು ಕ್ಷೇತ್ರದ ಜನತೆ ಮುಂದಾಗಬೇಕಾಗಿದೆ ಎಂದು ಸ್ಥಳೀಯ ಬಿಜೆಪಿ ಅಭ್ಯರ್ಥಿ ಎಲ್.ಸಿ. ನಾಗರಾಜ್ ಕರೆ ನೀಡಿದರು.

    ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರವು  ತೀರ ಬಡಪೀಡಿತ ಪ್ರದೇಶವಾಗಿದ್ದು, ಈ ಭಾಗದಲ್ಲಿ ರೈತಾಪಿ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಮಳೆಯನ್ನೆ  ಆಧರಿಸಿ ಇಲ್ಲ ಬೋರ್ವೆಲ್ ನೀರನ್ನು ಆಧರಿಸಿ  ಬೆಳೆನಟ್ಟಿ ಜೀವನ ಮಾಡುವ ಪರಿಸ್ಥಿತಿ ರೈತರಿಗೆ ಹಲವಾರು ವರ್ಷಗಳಿಂದ ಎದುರಾಗಿದೆ. 90ರ ದಶಕದ ನಂತರದಿಂದ ಇಲ್ಲಿಯವರೆಗೂ  ಮಳೆ ಕೈಕೊಟ್ಟ ಸಂದರ್ಭದಲ್ಲಿ ಭೂಮಿಯಲ್ಲಿ ವ್ಯವಸಾಯ  ಮಾಡಲು ಆಗದಿರುವ ಸಂದರ್ಭ   ವಲಸೆ ಹೋಗುವ ಪ್ರಕ್ರಿಯ ಮಧುಗಿರಿಯಲ್ಲಿ ಪ್ರಾರಂಭವಾಗಿದೆ ಎಂದು ಅವರು ಹೇಳಿದರು.


    Provided by

    ಭದ್ರಾ ಮೇಲ್ದಂಡೆ ಯೋಜನೆ ಅಡಿಯ 19 ಟಿಎಂಸಿ ನೀರು ಲಭ್ಯವಿದ್ದು ಇದನ್ನು ಬಳಸಿಕೊಂಡು ಬಯಲು ಸೀಮೆ ಭಾಗದ ಜನರಿಗಾಗಿ ಶಾಶ್ವತ ಶುದ್ಧ ನೀರು ಕೊಡುವ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರದ  ನಾಯಕರೊಂದಿಗೆ ಚರ್ಚಿಸಿ ಅನುಷ್ಠಾನಗೊಳಿಸುತ್ತೇನೆ ಎಂದು ಸ್ಥಳೀಯ  ಬಿಜೆಪಿ ಅಭ್ಯರ್ಥಿ ಎಲ್ ಸಿ  ನಾಗರಾಜ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ  ಭರವಸೆ ನೀಡಿದರು.

    ಕ್ಷೇತ್ರದಲ್ಲಿ ಟೆಕ್ಸ್ ಟೈಲ್ಸ್ ಪಾರ್ಕ್ ಸ್ಥಾಪಿಸಿ ದುಡಿಯುವ ಸಾವಿರಾರು ಸ್ಥಳೀಯರಿಗೆ ಉದ್ಯೋಗ ನೀಡಬಹುದಾಗಿತ್ತು, ರೈತಪಿ  ವರ್ಗ ಹೈನುಗಾರಿಕೆಗೆ ಅವಲಂಬಿತರಾಗಿದ್ದು, ರಾಸುಗಳಿಗೆ ಅನಾರೋಗ್ಯವಾದರೂ ಪಟ್ಟಣದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಬಂದು ತಪಾಸಣೆಗೆ ಒಳಪಡಿಸಬೇಕಾಗಿದೆ, ಪ್ರತಿ ಹೋಬಳಿ ಕೇಂದ್ರಗಳಲ್ಲೂ ಸಂಚಾರಿ ಪಶು ಆಸ್ಪತ್ರೆ ವ್ಯವಸ್ಥೆ ಮಾಡಿದ್ದರೆ ಸಾವಿರಾರು ದನ ಕರುಗಳು ಅನಾರೋಗ್ಯದಿಂದ ಸಾವಿಗೀಡಾಗುವುದನ್ನು ತಪ್ಪಿಸಬಹುದಾಗಿತ್ತು, ಇಂತಹ ಸಣ್ಣ ಜನಪರ ಕಾರ್ಯಗಳನ್ನು ಕೂಡ ಮಾಜಿ ಶಾಸಕರು ಮಾಡಿಲ್ಲ ಹಾಗೂ ಈ ಭಾಗದ ಹಲವಾರು ಸರ್ಕಾರಿ ಶಾಲೆಗಳ ಕೊಠಡಿಗಳು ಶಿತಿಲ ವ್ಯವಸ್ಥೆಯಲ್ಲಿದ್ದು ಶಾಲೆಗಳ ಅಭಿವೃದ್ಧಿ ಕೂಡ ಆಗಿಲ್ಲ ಎಂದು ಟೀಕಿಸಿದರು.

    ಈ ಹಿಂದೆ ನಾನು ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಐಎಂಎ ಹಗರಣದಲ್ಲಿ  ಲಂಚ ಪಡೆದಿದ್ದೇನೆಂದು ಆ ಪ್ರಕರಣದಲ್ಲಿ ಸಿಲುಕಿಸಲು ಕೆಲವರು ಸದ್ಯಂತರ  ರೂಪಿಸಿದ್ದರು ಈ ಪ್ರಕರಣ ನ್ಯಾಯಾಲಯದಲ್ಲಿದ್ದು ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ಮಧುಗಿರಿ ಜಿಲ್ಲಾ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಎಲ್.ಸಿ.ನಾಗರಾಜ್ ಅವರಿಗೆ ಟಿಕೆಟ್ ಕೊಟ್ಟು  ಸ್ಥಳೀಯರಿಗೆ ಆದ್ಯತೆ ನೀಡುವ ಮಾತನ್ನು ಬಿಜೆಪಿ ಪಕ್ಷ  ಉಳಿಸಿಕೊಂಡಿದೆ, ನಮ್ಮ ಪಕ್ಷದ ಕಾರ್ಯಕರ್ತರು ಪಣತೊಟ್ಟು  ಸ್ಥಳೀಯ ಅಭ್ಯರ್ಥಿ   ನಾಗರಾಜ್ ರವರನ್ನು ಬಹುಮತದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಕಮಲ ಹಾರಿಸಬೇಕು ಎಂದು ಕರೆ ನೀಡಿದರು.

    ನಾಗರಾಜ್ ರವರು ಕ್ಷೇತ್ರದಲ್ಲಿ ಈ ಹಿಂದೆ ಹಲವಾರು ವರ್ಷಗಳಿಂದ   ಜನಸೇವೆ ಮಾಡುತ್ತ ಬಂದಿದ್ದಾರೆ ಇವರಿಗೆ ಜನಪರ ಸೇವೆಯ  ಅನುಭವ ಸಾಕಷ್ಟು ಇದೆ ಇಂತಹ ವ್ಯಕ್ತಿಯ ಗೆಲುವು ಕ್ಷೇತ್ರದ ಅಭಿವೃದ್ಧಿಗೆ  ತೀರಾ ಅನಿವಾರ್ಯವಾಗಿದೆ,ಕಾಂಗ್ರೆಸ್ ಪಕ್ಷ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು ಆ ಪಕ್ಷ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರ್ಥ  ಆದ್ದರಿಂದ ಕಾರ್ಡ್ ನೀಡುವ ಮೂಲಕ ಪರಿಚಯಿಸಿಕೊಳ್ಳುತ್ತಿದೆ ಎಂದರು.

    ಬಿಜೆಪಿ ಮಂಡಳ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ  ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸ್ಥಳೀಯ ಅಭ್ಯರ್ಥಿ ಹಾಗೂ ಕ್ಷೇತ್ರದ ಮಗನಾದ ಎಲ್ ಸಿ  ನಾಗರಾಜ್ ಅವರನ್ನು  ಭಾರೀ ಬಹುಮತಗಳ ಅಂತರದಿಂದ ಗೆಲ್ಲಿಸಿಕೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ    ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಾವಗಡ ರವಿ, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾದ ಇಮ್ತಿಯಾಜ್ ಪಾಷಾ,  ಜಯಣ್ಣ ಕಾರ್ಯಾಲಯ ಕಾರ್ಯದರ್ಶಿ ಎಂ.ಸುರೇಶ್ ರೈತ ಮೋರ್ಚದ ನಾಗರಾಜಪ್ಪ, ಅಲ್ಪಸಂಖ್ಯಾತರ ಮಂಡಲ ಅಧ್ಯಕ್ಷರಾದ ರಿಯಾಜ್, ಯುವ ಮೋರ್ಚಾದ ಮಾಲಿ ಭರತ್, ಕಾರ್ತಿಕ್ ಆರಾಧ್ಯ ಎಸ್  ಸಿ ಮೋರ್ಚದ ಕಂಬದ ರಂಗಪ್ಪ, ಆರ್ ರವಿ ಮಹಿಳಾ ಮೋರ್ಚಾದ ಲತಾ ಪ್ರದೀಪ್, ಕಲ್ಪನಾ ಗೋವಿಂದರಾಜು ರತ್ನ ವೆಂಕಟಪ್ಪ ಕಾರ್ಯದರ್ಶಿ ನಾಗೇಂದ್ರ, ಸೀತಾರಾಮ್ ಉಸ್ತುವಾರಿ ರವೀಶ್, ಪಿ ಎಲ್ ಡಿ ಬ್ಯಾಂಕ್ ಒಬಳಾರೆಡ್ಡಿ, ಪಿ ಜಿ ಗೋವಿಂದರಾಜು ಹಾಗೂ ಬಹು ಸಂಖ್ಯದಲ್ಲಿ ಪಕ್ಷದ ಕಾರ್ಯಕರ್ತರು ಇದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.