ಕೊರಟಗೆರೆ : ಪಟ್ಟಣದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಮುಖಂಡರ ನೇತೃತ್ವದಲ್ಲಿ ಆಚರಿಸಲಾಯಿತು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪಕ್ಷದ ಆಮ್ ಆದ್ಮಿ ಪಕ್ಷದ ಸಂಭಾವ್ಯ ಅಭ್ಯರ್ಥಿಯಾದ ಹನುಮಂತರಾಯಪ್ಪ ಮಾತನಾಡಿ ವಿಶ್ವ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ದೇಶಾದ್ಯಂತ ಅತಿ ವಿಜೃಂಭಣೆಯಾಗಿ ಆಚರಿಸಲಾಗುತ್ತಿದೆ. ಸಂವಿಧಾನದಲ್ಲಿ ಬಡವರಿಗೆ ಮತ್ತು ಶ್ರೀಮಂತರಿಗೆ ಸಮಾನ ನ್ಯಾಯವನ್ನು ನೀಡಿದ್ದು ನಮ್ಮ ದೇಶದ ಸಂವಿಧಾನವು ಪವಿತ್ರವಾದ ಸಂವಿಧಾನವಾಗಿದ್ದು ಅದನ್ನು ಆನೆ ಗಾತ್ರದ ಸಂವಿಧಾನವೆಂದು ಕರೆಯುತ್ತಾರೆ.
ಈ ಪುಸ್ತಕದಲ್ಲಿ ಎಲ್ಲಾ ಜನಾಂಗದ ಸಮುದಾಯದವರ ಅನುಕೂಲಕ್ಕಾಗಿ ಮತ್ತು ಅವರ ಹಕ್ಕುಗಳನ್ನು ಪಡೆಯುವುದಕ್ಕಾಗಿ ಸಮಾನತೆಯನ್ನು ಕಾಪಾಡಲು ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು ಸಂವಿಧಾನದ ಪುಸ್ತಕವನ್ನು ರಚಿಸಿದ್ದಾರೆ. ಈ ದಿನವನ್ನು ದೇಶಾದ್ಯಂತ ಸಮಾನತೆಯ ದಿನವೆಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಂತರಾಯಪ್ಪ,ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಮಂಜುಳ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA