ಕೊರಟಗೆರೆ: ಬಿಜೆಪಿಯಲ್ಲಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಂ.ಮುನಿಯಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಕೊರಟಗೆರೆ ಕ್ಷೇತ್ರದಲ್ಲಿ ನಾನು ಮಾಡಿರುವ ಜನಪರ ಕೆಲಸಗಳನ್ನು ಮೆಚ್ಚಿ ಜನರು ನನಗೆ ಮತ ಹಾಕುತ್ತಾರೆ.. ನಾನು ಗೌರಿ ಹಬ್ಬದಲ್ಲಿ ಕೊಟ್ಟ ಬಾಗಿನ, ಕೋವಿಡ್ ಸಂದರ್ಭದಲ್ಲಿ ನೀಡಿದ ಕಿಟ್ಟುಗಳು ಬಡವರ ಹಸಿವನ್ನು ನೀಗಿಸುವ ಕೆಲಸ ಮಾಡಿದೆ ಎಂದು ಅವರು ಹೇಳಿದರು.
ಇಂದು ಸಹಸ್ರರ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಬಂದು ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿಯ ವರಿಷ್ಠರು ನನಗೆ ಯಾರೂ ಅಲ್ಲ, ಕ್ಷೇತ್ರದ ಜನರೇ ನನಗೆ ವರಿಷ್ಠರು, ಅವರ ಮಾತೆ ನನಗೆ ವೇದ ವಾಕ್ಯ, ಅವರ ಮಾತಿನಂತೆಯೇ ಇಂದು ನಾಮಪತ್ರ ಸಲ್ಲಿಸಿದ್ದೇನೆ. ನಾನು ಯಾವುದೇ ಕಾರಣಕ್ಕೂ ನಾಮಪತ್ರ ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy