ಕೊರಟಗೆರೆ: ನಮ್ಮ ಪಕ್ಷ ಸಿದ್ಧಾಂತದಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ, ಕ್ಷೇತ್ರದ ಜನತೆ ಈ ಬಾರಿ ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುವಂತೆ ಅಭ್ಯರ್ಥಿ ನಿವೃತ್ತ ತಹಶೀಲ್ದಾರ್ ಹನುಮಂತರಾಯಪ್ಪ ಮನವಿ ಮಾಡಿದರು.
ಪಟ್ಟಣದ ಎ.ಎ.ಪಿ ಕಚೇರಿಯಿಂದ ಕಾರ್ಯಕರ್ತರೊಂದಿಗೆ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿ ತಲುಪಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ಅವರು, ಮಾತನಾಡಿದರು.
ನಮ್ಮ ಪಕ್ಷ ದೇಶದಲ್ಲಿ ಇಗಾಲೇ ಚಾಪು ಮೂಡಿಸಿದ್ದು, ದೆಹಲಿ ಹಾಗೂ ಪಂಜಾಬ್ ನಲ್ಲಿ ನಮ್ಮ ಎ.ಎ.ಪಿ ಪಕ್ಷದ ಜನಪರ ಅಭಿವೃದ್ಧಿ ಕೆಲಸಗಳು ನಮ್ಮ ಜನತೆಗೆ ತಿಳಿದಿದೆ. ನಾನು ಕೊರಟಗೆರೆ ಕ್ಷೇತ್ರದ ಮನೆಮಗ, ನನಗೆ ಈ ಬಾರಿ ಬೆಂಬಲಿಸಿ ನಿಮ್ಮ ಮನೆ ಮಗನಿಗೆ ಮತನೀಡಿ ಕ್ಷೇತ್ರದಲ್ಲಿ ನಿಮ್ಮೆಲ್ಲರ ಸೇವೆ ಮಾಡಲು ಸಹಕರಿಸಿ ಎಂದು ಮನವಿ ಮಾಡುತ್ತೇನೆ ಎಂದರು.
ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಮನುಷ್ಯನಿಗೆ ಅಗತ್ಯವಾಗಿಬೇಕಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯನ್ನು ಇವುಗಳಿಗೆ ನೀಡುತ್ತೇವೆ. ಜನತೆ ಈ ಬಾರಿ ಅನ್ಯ ಪಕ್ಷದವರನ್ನು ಪೊರಕೆಯಲ್ಲಿ ಗುಡಿಸಿ ಹಾಕಿ ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಲ್ಮಾಭಾನು, ರಮ್ಯಾ ಸೇರಿದಂತೆ ಆಮ್ ಅದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy