nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನಗೆ ಅವಮಾನ ಮಾಡಿದವ್ರನ್ನ ಸೋಲಿಸಿ, ಲಾಲ್ ರವರನ್ನ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಿ: ಹೆಚ್.ಡಿ.ದೇವೇಗೌಡ
    ಕೊರಟಗೆರೆ April 24, 2023

    ನನಗೆ ಅವಮಾನ ಮಾಡಿದವ್ರನ್ನ ಸೋಲಿಸಿ, ಲಾಲ್ ರವರನ್ನ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಿ: ಹೆಚ್.ಡಿ.ದೇವೇಗೌಡ

    By adminApril 24, 2023No Comments2 Mins Read
    koratagere jds
    •  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಕೊರಟಗೆರೆ: ಲೋಕಸಭಾ ಚುನಾವಣೆಗೆ ನಾನು ನಿಲ್ಲೋದಿಲ್ಲ ಅಂತಾ ಹೇಳ್ದೆ.. ಆದರೆ ಕಾಂಗ್ರೆಸ್ ಪಕ್ಷದವ್ರು ನನಗೇ ತುಮಕೂರು ಜಿಲ್ಲೆಗೆ ಕರೆತಂದು ಸೋಲಿಸಿ ಅವಮಾನ ಮಾಡಿದ್ರು.. ನನ್ನನ್ನು ಸೋಲಿಸಿ ಅವಮಾನ ಮಾಡಿದ ನೋವು ಇನ್ನೂ ಕಾಡ್ತಿದೆ.. ನಮ್ಮೆಲ್ಲರ ಆತ್ಮೀಯ ಸುಧಾಕರಲಾಲ್ ಗೆಲ್ಲಿಸಿ, ನನ್ನ ಕಣ್ಣೀರು ಒರೆಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕೇಂದ್ರದ ಗ್ರಾಮದಲ್ಲಿ ಜೆಡಿಎಸ್ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ನಾನು 1994ರಲ್ಲಿ ಸಿಎಂ ಆಗಿದ್ದಾಗ 11ಕ್ಷೇತ್ರದಲ್ಲಿ 9 ಕ್ಷೇತ್ರ ಗೆಲ್ಲಿಸಿದ ತುಮಕೂರು ಜಿಲ್ಲೆಯ ಪುಣ್ಯಾತ್ಮರು ನೀವು. ಕಾಂಗ್ರೆಸ್ ನಾಯಕರು ನನಗೇ ಅವಮಾನ ಮಾಡಿದ ನೋವು ಇನ್ನೂ ನನ್ನನ್ನು ಕಾಡ್ತಿದೆ. ಸುಧಾಕರಲಾಲ್ ಬಡಕುಟುಂಬದ ಓಬ್ಬ ಸಾಮಾನ್ಯ ಜೆಡಿಎಸ್ ಕಾರ್ಯಕರ್ತ. 25 ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಬಡಜನರ ಸೇವೆ ಮಾಡ್ತಿದ್ದಾನೆ. ನೀವು ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿದ್ದಿರಾ, 2023ಕ್ಕೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿ. ಕುಮಾರಸ್ವಾಮಿ ಸರಕಾರ ಸುಧಾಕರಲಾಲ್‍ ಗೆ ವಿಶೇಷ ಸ್ಥಾನಮಾನ ನೀಡ್ತಾರೇ ಎಂದು ಭರವಸೆ ನೀಡಿದರು.

    ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಜೆಡಿಎಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಯಾವುದೇ ಪಕ್ಷ ರಾಜ್ಯಾಧ್ಯಕ್ಷನ ಪಟ್ಟ ನೀಡಿಲ್ಲ ಆದರೆ ಜೆಡಿಎಸ್ ನನಗೇ ನೀಡಿದೆ. ಮುಸ್ಲಿಂ ಸಮಾಜ ಜೆಡಿಎಸ್ ಪಕ್ಷದ ಪರವಾಗಿ ಇರಬೇಕಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಗೆ ರೈತರ ಚಿಂತೆ ಆದರೇ ಪರಮೇಶ್ವರ್‍ಗೆ ಜೀರೋ ಟ್ರಾಫಿಕ್ ಚಿಂತೆ. ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಪರಮೇಶ್ವರ್ ಮಾತನಾಡಿದ್ರಾ ನೀವೇ ಹೇಳಿ. ಚುನಾವಣೆ ಭಾಷಣ ಮತ್ತು 1ಸಾವಿರ ಹಣಕ್ಕೆ ನಾವು ಯಾಮಾರಬಾದ್ರು ಎಂದು ಮನವಿ ಮಾಡಿದರು.

    ಜೆಡಿಎಸ್ ಹಿಂದುಳಿದ ವರ್ಗಗಳ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ನಿಮ್ಮ ಮನೆ ಬಾಗಿಲಿಗೆ ಮತಯಾಚನೆಗೆ ಬರುವ ಜನಸೇವಕ ಮತ್ತೇ ನಿಮ್ಮ ಬಳಿಯ ಇರ್ತಾರೇ. ಚುನಾವಣೆ ವೇಳೆಯಲ್ಲೇ ಕೊರಟಗೆರೆ–ತುಮಕೂರು ನಗರಕ್ಕೆ ಮುಖಂಡರನ್ನ ಕರೆಸಿಕೊಂಡು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕ ಮುಂದೆ ನಿಮ್ಮ ಕೈಗೆ ಸಿಗ್ತಾರೆ. 2023ಕ್ಕೆ ಅಭಿವೃದ್ದಿಯ ಚಿಂತನೆಯುಳ್ಳ ಜನನಾಯಕ ಸುಧಾಕರಲಾಲ್ ಗೆಲುವು ಖಚಿತ ಎಂದು ತಿಳಿಸಿದರು.

    ಸಮಾವೇಶದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಶನ್‍ ಬೇಗ್, ಎಸ್‍ ಸಿ ಘಟಕದ ಕಾರ್ಯಾಧ್ಯಕ್ಷ ಶ್ರೀರಾಮ್, ಜಿಲ್ಲಾಧ್ಯಕ್ಷ ಅಂಜಿನಪ್ಪ, ಮಹಿಳಾಧ್ಯಕ್ಷೆ ಕುಸುಮಾ, ಹಿರಿಯ ಮುಖಂಡ ಅಂದಾನಪ್ಪ, ಕೊರಟಗೆರೆ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಉಪಾಧ್ಯಕ್ಷ ಮಂಜುನಾಥ, ಮುಖಂಡರಾದ ಸಿದ್ದಮಲ್ಲಪ್ಪ, ಪ್ರಕಾಶ್, ಪಾರುಕ್, ಲಕ್ಷ್ಮೀನರಸಪ್ಪ, ವೆಂಕಟೇಶ್, ರಮೇಶ್, ಲಕ್ಷ್ಮೀಕಾಂತ, ಸಂತೋಷಗೌಡ, ಕಿಶೋರ್, ನಯಾಜ್, ರವಿಕುಮಾರ್, ಮರುಡಪ್ಪ, ರೇಣುಕಾ ಸೇರಿದಂತೆ ಇತರರು ಇದ್ದರು.

    ಪರಮೇಶ್ವರ್ ಮಾಜಿ ಪ್ರಧಾನಿ ದೇವೇಗೌಡರನ್ನ ಕರೆದುಕೊಂಡು ಬಂದು ಸೋಲಿಸಿದ್ರು. ಅವರಿಗೆ ದೇವರು ಒಳ್ಳೆದು ಮಾಡ್ತಾನಾ. ತುಮಕೂರು ನಗರಕ್ಕೆ ಕಾಂಗ್ರೆಸ್ ಪಕ್ಷದಿಂದ ವೀಕ್ ಅಭ್ಯರ್ಥಿ ಹಾಕಿ ಬಿಜೆಪಿ ಜೊತೆ ಟೈಹಪ್ ಮಾಡಿಕೊಂಡ್ರು. ಕೊರಟಗೆರೆ ಕ್ಷೇತ್ರಕ್ಕೆ ಜೀರೋ ಟ್ರಾಫಿಕ್ ಬೇಕಾ ಅಥವಾ ನಿಮ್ಮ ಮನೆಮಗ ಸುಧಾಕರಲಾಲ್ ಬೇಕಾ ಯೋಚಿಸಿ ಮತನೀಡಿ. ಮುಸ್ಲಿಂ ಸಮಾಜಕ್ಕೆ ಶೇ.4ರಷ್ಟು ಮೀಸಲಾತಿ ಮತ್ತು ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದವ್ರು ದೇವೇಗೌಡರು.

    -ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ.

     

    25 ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆ ಮಾಡಿದ್ದೇನೆ. ನೀರಾವರಿ, ಸಾಗುವಳಿ ಚೀಟಿ ಮತ್ತು ಗಂಗಾಕಲ್ಯಾಣಕೆಕ ಆಧ್ಯತೆ ಹಾಗೂ 35 ಸಾವಿರಕ್ಕೂ ಅಧಿಕ ಜನರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಿದ್ದೇನೆ. ಇನ್ನೂ 15 ದಿನ ನನ್ನ ಜೊತೆ ಇರಿ ಮುಂದಿನ 5 ವರ್ಷ ನಿಮ್ಮ ಮನೆಮಗನಂತೆ ಕೆಲಸ ಮಾಡ್ತೀನಿ. ನನ್ನ ಹತ್ತಿರ ಹಣ ಬಲವಿಲ್ಲ ಆದರೇ ಜನಬಲ ಇದೆ. ಜೆಡಿಎಸ್ ಕಾರ್ಯಕರ್ತರೇ ನನ್ನ ಗೆಲುವಿನ ಶಕ್ತಿ ಆಗ್ತಾರೇ.

    -ಪಿ.ಆರ್.ಸುಧಾಕರಲಾಲ್, ಮಾಜಿ ಶಾಸಕ, ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.