ಮಧುಗಿರಿ: ಭಾರತದ ಪ್ರತಿಯೊಬ್ಬ ಪ್ರಜೆಗೂ ಮತದಾನ ಹಕ್ಕು ದೊರೆತಿದ್ದು. ಅದನ್ನು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಮಾರಿಕೊಳ್ಳದೆ ಯೋಗ್ಯ ಅಭ್ಯರ್ಥಿಗೆ ಮತ ನೀಡಬೇಕು ಎಂದು ಪುರಸಭೆ ಮುಖ್ಯ ಅಧಿಕಾರಿ ನಜ್ಮ ತಿಳಿಸಿದರು.
ಪುರಸಭೆ ಕಾರ್ಯಾಲಯ, ವತಿಯಿಂದ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದ ಅವರು, ತಪ್ಪದೇ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿಕೊಂಡರು.
‘ಭಾರತದ ಪ್ರಜೆಗಳಾದ ನಾವುಗಳು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಯಾವುದೇ ಧರ್ಮ, ಜನಾಂಗ, ಜಾತಿ, ಮತ, ಭಾಷೆಯ ಪ್ರೇರಣೆ, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುವಂತಾಗಬೇಕು’ ಎಂದರು.
ಎಲೆಕ್ಷನ್ ಕಾರ್ಡ್ ಮತದಾನದ ವೇಳೆ ಅವಶ್ಯವಿದ್ದು, ಅದನ್ನು ತಮ್ಮ ಬಳಿ ಇಟ್ಟುಕೊಂಡು ಮತದಾನಕ್ಕೆ ಹೋಗುವುದು ಅವಶ್ಯವಾಗಿದೆ. ಭಾರತೀಯ ಪ್ರತಿಯೊಬ್ಬ ಪ್ರಜೆಗೆ ಮತದಾನ ಒಂದು ಹಕ್ಕಾಗಿದ್ದು, ಅದನ್ನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಚಲಾಯಿಸಬೇಕು ಎಂದು ಅವರು ಹೇಳಿದರು.
ಕಳೆದ ಬಾರಿಯ 2018 ಚುನಾವಣೆ ಸಮಯದಲ್ಲಿ ಬೆಂಕಿಪುರ ಮಂಡರ ಕಾಲೋನಿಯಲ್ಲಿ ಅತಿ ಕಡಿಮೆ ಮತ ಚಲಾವಣೆಯಾಗಿದ್ದು , ಆದ್ದರಿಂದ ಈ ಭಾಗದಲ್ಲಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತ ಜಾಗೃತಿ ಕಾರ್ಯಾಗಾರ ನಡೆಸಿದ್ದು, ಪಟ್ಟಣದ ಲಿಂಗೇನಹಳ್ಳಿ ಸಿದ್ದನಾಯಕನ ಗಲ್ಲಿ, ದೊಡ್ಡಪೇಟೆ ಹಾಗೂ ಎಲ್ಲಾ ವಾರ್ಡ್ ಗಳಿಗೆ ಪತಸಂಚಲನ ಮೂಲಕ ತೆರಳಿ ಮತ ಜಾಗೃತಿ ಅಭಿಯಾನ ನಡೆಸಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಆರೋಗ್ಯ ನಿರೀಕ್ಷಕರಾದ ಬಾಲಾಜಿ, ಸುರೇಶ್, ಆರ್.ಐ. ಶಿವಣ್ಣ ಪುರಸಭೆಯ ಸ್ವಚ್ಛ ಕಾರ್ಮಿಕರು ಸಿಬ್ಬಂದಿ ವರ್ಗದವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy