ನನಗೆ 5ರ ಅದೃಷ್ಟ ಒಲಿದಿದ್ದು, ನನ್ನ ಕ್ರಮ ಸಂಖ್ಯೆ ಐದು, 5ನೇ ಬಾರಿ ವಿಧಾನಸಭೆ ಚುನಾವಣೆಗೆ ನಿಂತಿದ್ದೇನೆ, ಇದೇ ಐದರಿಂದ ಚುನಾವಣಾ ಕಣಬು ಬದಲಾವಣೆಯಾಗುತ್ತದೆ ಎಂದು ಮಾಜಿ ಶಾಸಕ ಎಸ್.ಆರ್.ಶ್ರೀ ನಿವಾಸ್ ಅಚ್ಚರಿ ಹೇಳಿಕೆ ನೀಡಿದರು.
ಗುಬ್ಬಿ ತಾಲೂಕಿನ ಅಮ್ಮನಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ, ಇಸ್ಲಾಂನಗರ, ಎನ್.ಮತ್ತಿಘಟ್ಟ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಚಾರ ಮಾಡಿ ಮತಯಾಚನೆ ಮಾಡಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ತಾಲೂಕಿನ 27 ಗ್ರಾಮ ಪಂಚಾಯಿತಿಗಳು ಸಂಪೂರ್ಣವಾಗಿ ಇಂದಿಗೆ ಮುಗಿದಿದ್ದು, ಹೋದ ಎಲ್ಲಾ ಭಾಗದಲ್ಲಿಯೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾಗಿ ಈ ಬಾರಿ ಪಕ್ಷ ಬದಲಾವಣೆಯಾಗಿದ್ದು ಬಿಟ್ಟರೆ ಮತದಾರರು ನನ್ನ ಜೊತೆಯಲ್ಲಿಯೇ ಇದ್ದಾರೆ ಎಂದು ತಿಳಿಸಿದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy