nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರ ದುರ್ಬಳಕೆ ಮಾಡಿ ಲಕ್ಷಾಂತರ ರೂಪಾಯಿ ನಾಮ: ಗ್ರಾ.ಪಂ. ಅಧ್ಯಕ್ಷೆ, ಪಿಡಿಒ, ವಾಟರ್ ಮ್ಯಾನ್, ಎಲೆಕ್ಟ್ರಿಕ್ ಅಂಗಡಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶ
    ತುಮಕೂರು May 8, 2023

    ಅಧಿಕಾರ ದುರ್ಬಳಕೆ ಮಾಡಿ ಲಕ್ಷಾಂತರ ರೂಪಾಯಿ ನಾಮ: ಗ್ರಾ.ಪಂ. ಅಧ್ಯಕ್ಷೆ, ಪಿಡಿಒ, ವಾಟರ್ ಮ್ಯಾನ್, ಎಲೆಕ್ಟ್ರಿಕ್ ಅಂಗಡಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶ

    By adminMay 8, 2023No Comments3 Mins Read
    tumakuru
    • ಕರ್ತವ್ಯ ಪಾಲಿಸದ ತಾ.ಪಂ.ಕಾರ್ಯನಿರ್ವಹಕ ಅಧಿಕಾರಿಗೆ 10 ಸಾವಿರ ದಂಡ

    • ಕೋಳಾಲ ಗ್ರಾ.ಪಂ. ಪಿಡಿಓಗೆ 10 ಸಾವಿರ ದಂಡ, ಕ್ರಿಮಿನಲ್ ಪ್ರಕರಣ ದಾಖಲಿಸಲು ಶಿಫಾರಸು

     

    ವರದಿ: ಶಿವಕುಮಾರ್, ಮೇಷ್ಟ್ರುಮನೆ


    Provided by
    Provided by

    ತುಮಕೂರು: ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿಡಿಓ, ವಾಟರ್ ಮ್ಯಾನ್ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್ ಎಂಬ ಅಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರ ಆದೇಶ ನೀಡಿದೆ.

    ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಕ್ರಮ ಎಸಗಿರುವ ಬಗ್ಗೆ ವಕೀಲರಾದ ಎಂ.ಎನ್.ಚಿನ್ಮಯ ಅವರು  ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು,  ಈ ಅರ್ಜಿಯ ವಿಚಾರಣೆಯಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಕಮಲಮ್ಮ, ಪಿಡಿಒ ಕೋಮಲ,   ವಾಟರ್ ಮ್ಯಾನ್ ಕರಿಯಣ್ಣ, ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಿಕಲ್ಸ್ ಮತ್ತು ಮತ್ತು ಹಾರ್ಡ್ ವೇರ್ ಅಂಗಡಿ ಬೋಗಸ್ ಬಿಲ್ ಮೂಲಕ ಸರ್ಕಾರವನ್ನು ವಂಚಿಸಿರುವುದು ರುಜುವಾತಾದ ಕಾರಣ ಇವರ ವಿರುದ್ಧ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಆದೇಶಿಸಲಾಗಿದೆ.

    ಈ ಪ್ರಕರಣದ ಬಗ್ಗೆ ನಮ್ಮತುಮಕೂರು ವಾಹಿನಿ ಜೊತೆಗೆ ಮಾಹಿತಿ ಹಂಚಿಕೊಂಡ ವಕೀಲರಾದ ಎಂ.ಎನ್.ಚಿನ್ಮಯ ಅವರು,  ಈ ಪ್ರಕರಣದ ಬಗ್ಗೆ ಸುದೀರ್ಘವಾದ ವಿಚಾರಣೆಯು ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರ ತುಮಕೂರು ಕಾರ್ಯಾಲಯದಲ್ಲಿ ನಡೆಯಿತು. ಕೋಳಾಲ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರು ಹಾಗೂ ಪಿಡಿಓ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಿಕಲ್ ಅಂಗಡಿ ಇವರು ಜೊತೆಯಾಗಿ ಬೀದಿ ದೀಪ ಖರೀದಿ ಮಾಡ್ತೇವೆ ಎಂದು ಎಲ್ಲ ಬೋಗಸ್ ಬಿಲ್ ಗಳನ್ನು  ಸೃಷ್ಟಿಸಿ, ಹಣವನ್ನು ವರ್ಗಾವಣೆ ಮಾಡಿಕೊಂಡು ಯಾವುದೇ ಬೀದಿ ದೀಪ ಖರೀದಿ ಮಾಡದೇ,  22 ಲಕ್ಷ ರೂಪಾಯಿ ಹಣ ದುರುಪಯೋಗ ಮಾಡಲಾಗಿದೆ  ಎಂದರು.

    ಪ್ರಕರಣ ಸಂಬಂಧ ಜಿಲ್ಲಾ ಪಂಚಾಯತ್ ವತಿಯಿಂದ ಸೂಕ್ತವಾದ ಲೆಕ್ಕ ಪರಿಶೋಧನೆ  ತಂಡ ನೇಮಕವಾಗಿ ಅವರು ಕೂಡ ಒಂದು ವರದಿ ಕೊಟ್ಟರು. ಈ ವರದಿಗೆ ಸಂಬಂಧಿಸಿದಂತೆ  ವಿಚಾರಣೆ ನಡೆದು. ಬೋಗಸ್ ಬಿಲ್ ಸೃಷ್ಠಿಸಿರುವುದು ಸಾಬೀತಾದ ಕಾರಣ, ತೀರ್ಪು ಪ್ರಕಟವಾಗಿದೆ ಎಂದು ಅವರು ತಿಳಿಸಿದರು.

    ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳದೇ ಗ್ರಾಮ ಪಂಚಾಯತ್ ಅನುಮೋದನೆ ಇಲ್ಲದೇ, ಖರೀದಿ ಮತ್ತು ನಿರ್ವಹಣೆಯಲ್ಲಿ ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಬಿಲ್ ಗಳಿಲ್ಲದೇ ವೆಚ್ಚ ಮಾಡಿರುವ 12,01,851 ರೂಪಾಯಿಗಳನ್ನು ಪಿಡಿಒ ಅವರಿಂದ ವಸೂಲಾತಿ ಮಾಡಿ, ಸಂಬಂಧ ಪಟ್ಟ ನಿಧಿಗೆ ಜಮಾ ಮಾಡಲು ಪ್ರಾಧಿಕಾರವು ಶಿಫಾರಸು ಮಾಡಿದೆ. ಕರ್ತವ್ಯ ಲೋಪ, ಹಣ ದುರ್ಬಳಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿಲ್ ಪ್ರಕರಣ ದಾಖಲಿಸುವಂತೆ ಸಿಇಒ ಮೂಲಕ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

    ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಪಿಡಿಒಗೆ ತಲಾ 10 ಸಾವಿರ ದಂಡ ಹಾಗೂ ಇವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಲಾಗಿದೆ. ಅಧಿಕಾರ ದುರ್ಬಳಕೆಗೆ ಸಹಕಾರ ನೀಡಿದ ಗ್ರಾಮ ಪಂಚಾಯತ್ ಅಧ್ಯಕ್ಷೆ,  ವಾಟರ್ ಮ್ಯಾನ್, ಎಲೆಕ್ಟ್ರಿಕ್ ಅಂಗಡಿ ವಿರುದ್ಧ ಕ್ರಮ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆಯ  ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದ ಪತಿ ಕರಿಯಣ್ಣ ಕ್ರಮಕ್ಕೆ ಆದೇಶಿಸಲಾಗಿದೆ.

    ಅಂಗಡಿಯವನು ಯಾವುದೇ ಬೀದಿ ದೀಪಗಳನ್ನು ಮಾರಾಟ ಮಾಡದೇ ಲಕ್ಷಾಂತರ ಹಣವನ್ನು ವರ್ಗಾವಣೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆತನನ್ನು ಕಪ್ಪು ಪಟ್ಟಿಗೆ ಸೇರಿಸ ಬೇಕು ಹಾಗೂ ಕಾನೂನು ಕ್ರಮಕೈಗೊಳ್ಳಬೇಕು. ವಾಣಿಜ್ಯ ತೆರಿಗೆ ಇಲಾಖೆಯವರಿಗೆ ಇದಕ್ಕೆ ಸಂಬಂಧಪಟ್ಟ ವರದಿಯನ್ನು ಕಳುಹಿಸಿ, ಸಂಬಂಧಪಟ್ಟ ಅಂಗಡಿಯವರ ಮೇಲೆ ಸೂಕ್ತಕ್ರಮಕ್ಕೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.

    ಈ ಹಿಂದಿನ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾದ ಶಿವಪ್ರಕಾಶ್ ಅವರು, ಸರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿನಿಯಮದಡಿಯಲ್ಲಿ ಗ್ರಾಮ  ಪಂಚಾಯತ್ ಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ವಿಫಲರಾಗಿ ಕರ್ತವ್ಯ ಲೋಪ ನಿರ್ಲಕ್ಷ್ಯಗಳನ್ನು ತೋರಿರುವುದನ್ನು ಪರಿಗಣಿಸಿ ಕಾರ್ಯನಿರ್ವಹಣಾಧಿಕಾರಿಗೆ 10 ಸಾವಿರ ದಂಡ ವಿಧಿಸಿ ಇವರ ವಿರುದ್ಧ ಶಿಸ್ತು ಕ್ರಮ ಜರಗಿಸಲು ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಶಿಫಾರಸು ಮಾಡಿದ್ದಾರೆ ಎಂದವರು ತಿಳಿಸಿದರು.

    ಎಸ್ ಸಿಪಿ/ ಟಿಎಸ್ ಪಿ  ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ವಾರ್ಡ್ ಸಭೆ,  ಗ್ರಾಮ ಸಭೆಗಳನ್ನು ಮಾಡಿ ಆಯ್ಕೆ ಮಾಡದೇ, ಅಧಿಕಾರ ದುರುಪಯೋಗಪಡಿಸಿಕೊಂಡು, ತನ್ನ ಮಗಳಿಗೆ 5 ಸಾವಿರ ರೂಪಾಯಿಗಳನ್ನು ವಿದ್ಯಾಭ್ಯಾಸಕ್ಕಾಗಿ ಪಡೆದಿರುವುದು. ನಿಯಮ ಬಾಹಿರವಾಗಿರುವುದರಿಂದ ಸದರಿ 5 ಸಾವಿರ ರೂಪಾಯಿಗಳನ್ನು ಸಂಬಂಧ ಪಟ್ಟ ಖಾತೆ ಜಮಾ ಮಾಡಲು ಪ್ರಾಧಿಕಾರ ಆದೇಶಿಸಿದೆ.

    ಗ್ರಾ.ಪಂ. ಅಧ್ಯಕ್ಷೆ ಪತಿ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು, ವಿಚಾರಣೆಯಲ್ಲಿ ಕಂಡು ಬಂದ ಕಾರಣ ಸದರಿ ಕರಿಯಪ್ಪ ಇವರ ಮೇಲೆ ಸೂಕ್ತ ಶಿಸ್ತಿನ ಕ್ರಮಕ್ಕೆ ಪ್ರಾಧಿಕಾರವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿಗೆ   ಶಿಫಾರಸು ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

    ಈ ಹೋರಾಟ ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಯ್ತು, ನನ್ನ ಮೇಲೆ ವೈಯಕ್ತಿಕ ದಾಳಿಯಾಯಿತು, ಸುಳ್ಳು ಪ್ರಕರಣ ದಾಖಲಿಸುವ ಯತ್ನಗಳು ನಡೆದವು, ಲೆಕ್ಕ ಪರಿಶೋಧನಾ ತಂಡ ಬಂದಾಗ ಇಡೀ ಗ್ರಾಮ ಪಂಚಾಯತ್ ನ ವಾಟರ್ ಮ್ಯಾನ್ ಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ನಡೆಸಲು ಪ್ರಯತ್ನಪಟ್ಟರು. ಈ ಎಲ್ಲದಕ್ಕೂ ಈ ತೀರ್ಪಿನ ಮೂಲಕ ಉತ್ತರ ಈಗ ಸಿಕ್ಕಿದೆ. ಈ ಪ್ರಕರಣಕ್ಕೆ ನಮ್ಮ ಜಿಲ್ಲಾ ತಂಡ ಹಾಗೂ ನಮ್ಮ ಸ್ನೇಹಿತರು ಕೂಡ ಸಹಕರಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಹಂದ್ರಾಳ್ ನಾಗಭೂಷಣ್ ಮಾರ್ಗದರ್ಶನ ನೀಡಿದ್ದರು. ವಕೀಲರಾದ ಶೇಖರ್, ಎಂ.ಎಸ್.ಗಣೇಶ್, ಮೋಹನ್, ಕೆ. ಪದ್ಮನಾಭನ್, ಶಿವಕುಮಾರ್ ರೈತರ ಪಾಳ್ಯ ಇವರು ಹೋರಾಟಕ್ಕೆ ಸಹಕಾರ ನೀಡಿದ್ದರು. ಇವರಲ್ಲದೇ ಸಾಕಷ್ಟು ಜನರು ಈ ಹೋರಾಟಕ್ಕೆ ಕೈ ಜೋಡಿಸಿದ್ದರು. ಇದು ನನ್ನ ಏಕಾಂಗಿ ಹೋರಾಟ ಅಲ್ಲ, ಸಾಮೂಹಿಕ ಹೋರಾಟ. ಭ್ರಷ್ಟರಿಗೆ ಈ ಪ್ರಕರಣ ಒಂದು ಎಚ್ಚರಿಕೆಯ ಗಂಟೆ. ಈ ಹೋರಾಟವನ್ನು  ಇನ್ನೂ ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.