ಮೈಸೂರು: ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ.
ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದು ವಾಗ್ದಾಳಿ ಮಾಡಿದರು.
ಈ ಬಾರಿ ಕಾಂಗ್ರೆಸ್ಗೆ ಬಹುಮತ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ನಿವಾಸದಲ್ಲಿ ಮಾತನಾಡಿದ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


