nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025
    Facebook Twitter Instagram
    ಟ್ರೆಂಡಿಂಗ್
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    • ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
    • ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
    • ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
    • ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    • ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?
    ತಿಪಟೂರು May 14, 2023

    ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?

    By adminMay 14, 2023No Comments2 Mins Read
    shadakshari
    • ಆನಂದ್, ತಿಪಟೂರು

    ತಿಪಟೂರು: ತೀರ್ವ ಕುತೂಹಲ ಕೆರಳಿಸಿದ್ದ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕಾಂಗ್ರೆಸ್‌ ನ ಕೆ.ಷಡಕ್ಷರಿ 17662 ಮತಗಳ ಅಂತರದಿಂದ ಜಯಗಳಿಸಿದ್ದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

    ಈ ಬಾರಿಯ ವಿಧಾನಸಭಾ ಚುನಾವಣಾ ಕಣದಲ್ಲಿ ತಿಪಟೂರು ಕ್ಷೇತ್ರದಿಂದ ಒಟ್ಟು 12 ಜನರು ಅಭ್ಯರ್ಥಿಗಳೂ ಇದ್ದರು ಇವರಲ್ಲಿ ಕೆ.ಷಡಕ್ಷರಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ 71415 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಶಿಕ್ಷಣ ಸಚಿವ ನಾಗೇಶ್ ವಿರುದ್ದ 17662 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.


    Provided by
    Provided by

    ಚುನಾವಣೆ ಪ್ರಾರಂಭವಾದಾಗಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಜೋರಾಗಿಯೇ ಸಾಗುತ್ತಿತ್ತು. ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ನೀಲಕಂಠಸ್ವಾಮಿ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ತಳಿ ಸ್ಥಾಪನೆ ವಿಚಾರವಾಗಿ ನಡೆದ ಸಂಭಾಷಣೆಯ ಸಂಪೂರ್ಣ ಲಾಭ ಮತ್ತು ಕಳೆದ ಬಾರಿ ಶೋಭಾ ಕರಂದ್ಲಾಜೆ ಭಾಷಣ ಮಾಡುವಾಗ ಬಿ.ಸಿ.ನಾಗೇಶ್ ಯಡಿಯೂರಪ್ಪನವರ ಬಲದಿಂದ ಗೆದ್ದು ಅನಂತಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಮತಚಲಾಯಿಸಿದ್ದರು ಎಂಬ ವಿಡಿಯೋ ಲಿಂಗಾಯತರನ್ನು ಕೆರಳಿಸಿತ್ತು. ಇದರ ಪರಿಣಾಮವಾಗಿ ನಾಗೇಶ್ ಸೋಲನುಭವಿಸಿದ್ದಾರೆ ಎನ್ನುವ ಚರ್ಚೆ ಕೇಳಿ ಬಂದಿದೆ.

    ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ ಚುನಾವಣೆಯಾಗಿ ಕಂಡುಬಂದಿದ್ದು ಉಳಿದ ಅಭ್ಯರ್ಥಿಗಳು 500 ಮತಗಳನ್ನು ಪಡೆಯಲು ವಿಫಲವಾಗಿದ್ದು, 640 ಮತಗಳನ್ನು ಪಡೆದ ಆಪ್‌ ನ ಚಂದ್ರಶೇಖರ್ 4ನೇ ಸ್ಥಾನವನ್ನು, 5ನೇ ಸ್ಥಾನವನ್ನು 635 ಮತಗಳನ್ನು ಪಡೆದ ನೋಟಾ ಪಡೆದುಕೊಂಡಿದ್ದು ಕಳೆದ ಬಾರಿ 3000ಕ್ಕೂ ಹೆಚ್ಚು ಮತಗಳನ್ನು ಪಡೆದು ಗಮನ ಸೆಳೆದಿದ್ದ ಪಕ್ಷೇತರ ಅಭ್ಯರ್ಥಿ ಕುಮಾರಸ್ವಾಮಿ 468 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

    ಜೋಡೆತ್ತುಗಳ ಪಟ್ಟಿಗೆ ತತ್ತರಿಸಿದ ಶಿಕ್ಷಣ ಸಚಿವ :

    ಕಾಂಗ್ರೆಸ್ ಪಕ್ಷದಲ್ಲಿ ಕೆ.ಷಡಕ್ಷರಿ ಅವರಿಗೆ ಟಿಕೆಟ್ ಘೋಷಣೆಯಾದ ಮೇಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲೋಕೇಶ್ವರ್, ಷಡಕ್ಷರಿ ಅವರಿಗೆ ಬೆಂಬಲ ಘೋಷಿಸಿ ಕಾರ್ಯಾಚರಣೆಗೆ ಇಳಿದ ಮೇಲೆ ಕಾಂಗ್ರೆಸ್ ಬಲ ಹೆಚ್ಚಾಗುತ್ತಾ ಸಾಗಿತು. ಕೆ.ಷಡಕ್ಷರಿ ಮತ್ತು ಲೋಕೇಶ್ವರ್ ಎಂಬ ಜೋಡೆತ್ತುಗಳ ಕಾರ್ಯತಂತ್ರ ಮತ್ತು ಹೆಚ್ಚಿನದಾಗಿ ಕಳೆದ ಚುನಾವಣೆಗಳ್ಳಿ ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದನ್ನು ಕಲಿತ ಇವರಿಬ್ಬರು ನಾಗೇಶ್‌ರ ತಪ್ಪುಗಳನ್ನು ಸಾಮಾಜಿಕ ಜಾಲತಣಾದಲ್ಲಿ ಪ್ರಚಾರಕ್ಕೆ ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿಯೇ ಅರ್ಧಮತಗಳನ್ನು ಪರಿವರ್ತಿಸಿಕೊಂಡು ಶಿಕ್ಷಣ ಸಚಿವರಿಗೆ ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಪಾಠಮಾಡಿ ಸೋಲಿನ ಪಾಠಕಲಿಸಿದ್ದಾರೆ.

    ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?:ಕಳೆದ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಸಚಿವ ಸ್ಥಾನದ ಅಂಚಿನಲ್ಲಿದ್ದು ಕಾರಣಾಂತರದಿಂದ ಸಚಿವಸ್ಥಾನದಿಂದ ವಂಚಿತರಾಗಿದ್ದ ಕೆ.ಷಡಕ್ಷರಿಯವರಿಗೆ ಈ ಬಾರಿ ಮಂತ್ರಿ ಭಾಗ್ಯ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.

    ತಾಲ್ಲೂಕಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮವನ್ನು ಆಚರಿಸುತ್ತಿದ್ದರೆ, ಬಿ.ಜೆ.ಪಿಯ ಬೆಂಬಲಿಗರಲ್ಲಿ ಮಾತ್ರ ಸೂತಕ ಛಾಯೆ ಆವರಿಸಿದೆ. ಆದರೆ ಚುನಾವಣೆ ಮುಗಿಯುತು ಇನ್ನೇನಿದ್ದರು ಎಲ್ಲರೂ ಅಣ್ಣ-ತಮ್ಮಂದಿರು ಎಂಬ ಭಾವನೆಯಲ್ಲಿ ತಿಪಟೂರನ್ನು ಜಿಲ್ಲೆಯನ್ನಾಗಿಸಿ ಅಭಿವೃದ್ಧಿಗಾಗಿ ಪಕ್ಷಭೇದ ಬಿಟ್ಟು ದುಡಿಯೋಣ ಎಂದು ಸಾಗಬೇಕಿದೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    November 21, 2025

    ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ

    November 21, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಔರಾದ: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಔರಾದ್ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ…

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.