ತುಮಕೂರು: ಕಾಂಗ್ರೆಸ್ ಸಿಎಂ ಫೈಟ್ ಆರಂಭಗೊಂಡಿದೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನಡುವೆ ಜಿ.ಪರಮೇಶ್ವರ ಹೆಸರು ಮುನ್ನೆಲೆಗೆ ಬಂದಿದೆ. ಇದೇ ವೇಳೆ ತುಮಕೂರು ಜಿಲ್ಲೆಗೆ ಸಿಎಂ ಸ್ಥಾನ ಕೊಡಬೇಕು ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಆಗ್ರಹಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಡಾ.ಜಿ.ಪರಮೇಶ್ವರ ಹಿರಿಯ ನಾಯಕರು. ಅವರಿಗೆ ಸಿಎಂ ಸ್ಥಾನ ಕೊಡಬೇಕು ಅನ್ನೋದು ಜನರ ಅಪೇಕ್ಷೆಯಂತೆ ನಮ್ಮ ಆಗ್ರಹವೂ ಕೂಡ. ಆದರೆ ಎಲ್ಲಾ ನಿರ್ಧಾರವನ್ನು ಹೈ ಕಮಾಂಡ್ ಮಾಡುತ್ತೆ. ನಮ್ದು ಅದೇ ಆಗ್ರಹ. ಸಿನಿಯರ್ ನಾಯಕರು, ಅವರಿಗೆ ಕೊಟ್ಟರೆ ಸಂತೋಷ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಕೆಟ್ಟದಾಗಿದೆ. ಅಧಿಕಾರಕ್ಕೆ ಬರದೇ ಇದ್ದರೆ ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ರು. ಈಗ ಪಕ್ಷ ವಿಸರ್ಜನೆ ಮಾಡಿ ತೋರಿಸಲಿ. ಮಂಡ್ಯ ಪರಿಸ್ಥಿತಿ ನೋಡಿದರೆ…ಜನರ ತೀರ್ಮಾನ ಗೊತ್ತಾಗುತ್ತದೆ. ಬರೀ ಬ್ಲಾಕ್ ಮೇಲ್ ಮಾಡೇ ಅವರು ಈ ಸ್ಥಿತಿಗೆ ಬಂದರು. ರಾಮನಗರದಲ್ಲಿನಿಖಿಲ್ ಗೆ ಸೋಲಾಗಿದೆ. ಅಲ್ಲೇ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ, ಮತ್ತೇ ನನ್ನ ಸೋಲಿಸಲು ಹೊರಟಿದ್ರು. ರಾಮನಗರದ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ಕಲಿಸಿದ ಪಾಠ ಇದು. ಇನ್ನೂ ಇಬ್ಬರನ್ನು ಸೋಲಿಸಿ ಜನರು ಕುಟುಂಬ ರಾಜಕಾರಣಕ್ಕೆ ಪಾಠ ಕಲಿಸಬೇಕು ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy