nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಕಾರ್ಯಕರ್ತರ ಬಗ್ಗೆ ಲಘುವಾದ ಮಾತು ಮಸಾಲ ಜಯರಾಮ್ ಗೆ ಶೋಭೆ ತರಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿ
    ತುರುವೇಕೆರೆ May 18, 2023

    ಜೆಡಿಎಸ್ ಕಾರ್ಯಕರ್ತರ ಬಗ್ಗೆ ಲಘುವಾದ ಮಾತು ಮಸಾಲ ಜಯರಾಮ್ ಗೆ ಶೋಭೆ ತರಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿ

    By adminMay 18, 2023No Comments2 Mins Read
    m t krishnappa

    ತುರುವೇಕೆರೆ: ಮಾಜಿ ಶಾಸಕರಾದ ಮಸಾಲ ಜಯರಾಮ್ ಅವರು ತಮ್ಮ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆಯಲ್ಲಿ  ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಲಘುವಾಗಿ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಭಿಪ್ರಾಯಪಟ್ಟರು

    ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಯಾವತ್ತೂ ಎಲ್ಲೆ ಮೀರಿ ವರ್ತಿಸುವುದಿಲ್ಲ, ಅತ್ಯಂತ ಸಭ್ಯವಾದ ಕಾರ್ಯಕರ್ತರು ನಮ್ಮವರು,  ನಾನು 15 ವರ್ಷಗಳು ಆಡಳಿತ ನಡೆಸಿದರೂ ಸಹ ಯಾರಿಗೂ ನೋವನ್ನು ಉಂಟು ಮಾಡಿಲ್ಲ ಯಾರಿಗೂ ನೋವು ಕೊಡುವಂತ ಕಾರ್ಯಕರ್ತರು ನಮ್ಮ ಪಕ್ಷದಲ್ಲಿಲ್ಲ ಎಂದರು.


    Provided by
    Provided by

    ಮಾಜಿ ಶಾಸಕರು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಅದು ಅವರಿಗೆ ಗೌರವ ತರುವ ವಿಚಾರವಲ್ಲ, ರಾತ್ರಿ 12 ಗಂಟೆಗೆ ಕಾರ್ಯಕರ್ತರ ಮನೆಗೆ ಬರುತ್ತೇನೆ ಎಂದು ಹೇಳಿದ್ದಾರೆ. ಇವರು ಹೋದರೆ ನಮ್ಮ ಕಾರ್ಯಕರ್ತರು ಇವರನ್ನು ಬಿಡುತ್ತಾರಾ ? ಅವರಿಗೆಲ್ಲ ಗಂಡಸ್ತನ ಇಲ್ಲವಾ ? ಹಾಗೆಲ್ಲ ಹುಚ್ಚು ಹುಚ್ಚಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ವಾಮಾಚಾರವನ್ನು ಮಾಡಿ ಕೃಷ್ಣಪ್ಪನವರು ಗೆದ್ದಿದ್ದಾರೆ ಎಂದು ಹೇಳುವುದು ಇವರ ಬಾಲಿಷತನವನ್ನು ತೋರಿಸುತ್ತದೆ.  ವಾಮಾಚಾರಗಳನ್ನು ಮಾಡಿ ಚುನಾವಣೆಗಳಲ್ಲಿ ಗೆಲ್ಲುವುದಕ್ಕೆ ಆಗುವುದಿಲ್ಲ. ಎಷ್ಟೋ ಮಂತ್ರಿ ಮಹೋದಯರು ನೂರಾರು ಕೋಟಿ ಬಂಡವಾಳವನ್ನು ಹೂಡಿ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೆ. ವಾಮಾಚಾರವನ್ನು ಮಾಡಿ ಗೆಲ್ಲುವುದಾಗಿದ್ದರೆ ಹಳ್ಳಿ ಹಳ್ಳಿ ಸುತ್ತಿ ಪ್ರಚಾರವನ್ನು ಮಾಡಿ ಅವರೆಲ್ಲ ಯಾಕೆ ಸೋಲುತ್ತಿದ್ದರು ಎಂದು ಪ್ರಶ್ನೆ ಮಾಡಿದರು.

    ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾನು ಗೆಲುವನ್ನು ಕಂಡಿದ್ದೇನೆ ಮತದಾರರ ಚಿಂತನೆಗಳಿಗೆ ಒಳಪಡುತ್ತದೆ. ಚುನಾವಣೆ ದುಡ್ಡು,ಸೀರೆ, ಆಸೆ, ಆಮಿಷಗಳಿಗೆ ಒಳಪಡುವುದಿಲ್ಲ, ವಾಮಾಚಾರಗಳಿಗೆ ಪ್ರಾತಿನಿಧ್ಯ ಕೊಟ್ಟವರೆ ಮಸಾಲ ಜಯರಾಮ್. ಮತದಾರರಿಗೆ ಹಣ ಎಷ್ಟು ಕೊಟ್ಟರು ರೇಷ್ಮೆ ಸೀರೆಗಳನ್ನು ಎಷ್ಟು ಕೊಟ್ಟರು ಅವರೇ ಆತ್ಮವಲೋಕನ ಮಾಡಿಕೊಳ್ಳಿ ಎಂದರು.

    ಇವರು ಎಂತಹ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಕೊಡುತ್ತಿದ್ದಂತಹ ಕೋಳಿಗಳನ್ನು ಈ ಚುನಾವಣೆಗಳಲ್ಲಿ ಕೊಟ್ಟಿದ್ದಾರೆ,ಇದಕ್ಕೆ ಅವರೇ ಉತ್ತರ ಹೇಳಬೇಕು, ವಾಮಾಚಾರಕ್ಕೆ ಮಾಜಿ ಶಾಸಕ ಹೇಳಿ ಮಾಡಿಸಿದಂತ ವ್ಯಕ್ತಿ, ನಮ್ಮ ಬಗ್ಗೆ ವಾಮಾಚಾರ ಮಾತನಾಡುವುದು ಅವರ ಕೀಳು ಅಭಿರುಚಿಯನ್ನು ತೋರಿಸುತ್ತದೆ ಎಂದರು.

    ನಮ್ಮ ಪಕ್ಷದ ಕಾರ್ಯಕರ್ತರುಗಳು ಯಾವುದೇ ರೀತಿಯ ಗಲಾಟೆಗಳಿಗೆ ಆಸ್ಪದ ಕೊಡಬೇಡಿ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನನ್ನ ಬಳಿ ಬನ್ನಿ, ಯಾವುದೇ ರೀತಿಯ ಗದ್ದಲ ಗಲಾಟೆಗಳನ್ನು ಮಾಡಿಕೊಳ್ಳಬೇಡಿ  ಶಾಂತಿಯನ್ನು ಕಾಪಾಡಿ, ತಾಲೂಕಿನ ಸಮಗ್ರ ಬೆಳವಣಿಗೆ ಬಗ್ಗೆ ಚಿಂತೆ ಮಾಡಿ, ಈ ರೀತಿಯ ಕೆಟ್ಟ ಚಿಂತನೆಯನ್ನು ಮಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮುಖಂಡರುಗಳಾದ ಹೆಡಗಿಹಳ್ಳಿವಿಶ್ವನಾಥ್,  ಜೆಡಿಎಸ್ ತಾಲೂಕು ಅಧ್ಯಕ್ಷ ಸ್ವಾಮಿ, ಬಿ.ಎಸ್. ದೇವರಾಜ್, ಕಣತೂರು ಪ್ರಸನ್ನ, ಮಹೇಶ್, ಹರೀಶ್ ಹರಿದಾಸನಹಳ್ಳಿ, ಸೊಪ್ಪನಹಳ್ಳಿ ಮಧು, ರಂಗಸ್ವಾಮಿ ಮುನಿಯೂರು, ಎಚ್.ಆರ್.ರಾಮೇಗೌಡ, ಗಿರೀಶ್ ಆಚಾರ್, ಚೇತನ್, ಶಂಕರೇಗೌಡ, ಹೊನ್ನೇನಹಳ್ಳಿ ಕೃಷ್ಣಪ್ಪ, ಜುಂಜಪ್ಪ ಸ್ವಾಮಿ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ…

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.