ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಸರ್ಕಾರಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಬುಕ್ಕ ಪಟ್ಟಣ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪ್ಲೋರೋಸಿಸ್ ಅರಿವು ಮತ್ತು ತಪಾಸಣಾ ಶಿಬಿರದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವರಾಮಯ್ಯನವರು, ಆರೋಗ್ಯ ಇಲಾಖೆಯು ಸೂಚಿಸಿದಂತೆ ಪ್ಲೋರೋಸಿಸ್ ರೋಗ ನಿಯಂತ್ರಣಕ್ಕೆ ಅತಿ ಸೂಕ್ತವಾದ ಮಾರ್ಗವಾಗಿದ್ದು ಗ್ರಾಮಸ್ಥರು ಮಳೆ ನೀರು ಕೊಯ್ಲು ಮಾಡಿ ನೀರನ್ನು ಸಂಗ್ರಹಿಸಿ ವರ್ಷವಿಡಿ ಬಳಕೆ ಮಾಡುವುದರಿಂದ ಪ್ಲೋರೋಸಿಸ್ ರೋಗವನ್ನು ಸಂಪೂರ್ಣ ಮುಕ್ತ ಮಾಡುವುದರೊಂದಿಗೆ ಇತರೆ ಮೂಳೆ ರೋಗಗಳನ್ನು ಹತೋಟಿಯಲ್ಲಿ ಇಡಬಹುದಾಗಿರುವುದರಿಂದ ಮಳೆ ಕೊಯ್ಲು ವಿಧಾನವನ್ನು ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಿದರು..
ಜಿಲ್ಲಾ ಪ್ಲೋರೋಸಿಸ್ ಕನ್ಸಲ್ಲೆಂಟ್ ಆದ ಚೇತನ್ ರವರು ಪ್ಲೋರೋಸಿಸ್ ರೋಗಲಕ್ಷಣ,ನಿಯಂತ್ರಣ ಮತ್ತು ನಿರ್ವಹಣೆ ಹಾಗೂ ಪುನರ್ವಸತಿ ಕುರಿತು ಗ್ರಾಮಸ್ಥರಿಗೆ ಮಾಹಿತಿ ತಿಳಿಸಿದರು.
ಆಡಳಿತ ವೈದ್ಯಧಿಕಾರಿಯಾದ ಡಾ.ಹರ್ಷವರ್ಧನ್ ರವರು ಮಾತನಾಡಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳು ವ್ಯಾಪಕ ಫ್ಲೋರೈಡ್ ಪ್ರದೇಶವಾಗಿದ್ದು ಸೂಕ್ತ ಮುನ್ನೆಚ್ಚರಿಕೆ ಅನಿವಾರ್ಯವಾಗಿದ್ದು ಅದನ್ನು ಪಾಲಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ಪ್ಲೋರೋಸಿಸ್ ಕುರಿತು ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಪಿ ಜಿ ಡಿ ಹೆಚ್ ಪಿ ಉಪನ್ಯಾಸಕರದ ತನ್ವೀರ್ ಅಹ್ಮದ್ ಖಾನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್ ಟಿ ಚಂದ್ರಪ್ಪ, ಆಯುಷ್ ವೈದ್ಯರಾದ ಡಾ. ಆತ್ಮರಾಮ್ ಶೆಟ್ಟಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಮಾಮಣಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆನಂದ್, ಎಲ್ಲ ಗ್ರಾಮ ಪಂಚಾಯತಿ ಸದಸ್ಯರು, ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಮತ್ತು ರಾಜಣ್ಣ, ಧರಣೇಶ್ ಗೌಡ, ಕಾವಲಪ್ಪ, ಆರೋಗ್ಯ ಇಲಾಖೆ ಸೋಮಶೇಖರ್ ವಿಜಯಲಕ್ಷ್ಮಿ ಶ್ರೀನಿವಾಸ್ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA