ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಹಾಗೂ ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಹರಿ, ಡಿಸಿಸಿ ಬ್ಯಾಂಕ್ ನ ಮಧುಗಿರಿಯ ನೀಲಿಚಕ ಮೇಲ್ವಿಚಾರಕರಾದ ನರಸಿಂಹಮೂರ್ತಿ, ಚುನಾವಣಾ ಅಧಿಕಾರಿಯ ರಾಘವೇಂದ್ರ, ಸಂಘದ ನಿರ್ದೇಶಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಯರಾಮಯ್ಯ ಜೆಟ್.ಪಿ.ಚೌಡಪ್ಪ, ಸಿದ್ದರಗಲ್ ಸಿದ್ದಗಂಗಪ್ಪ, ಕವನದಲ ವಿಎಸ್ ಎಸ್ ಎನ್ ಅಧ್ಯಕ್ಷರಾದ ನಾರಾಯಣಪ್ಪ, ಚಿಕ್ಕರಂಗ ನಾಯಕ, ಮುದ್ದುರಾಜ್, ಜಗನ್ನಾಥ್ ಕೊಂಡಪ್ಪ, ಬಾಗಜ್ಜಿ ರಂಗನಾಥಪ್ಪ, ಬಡವನಹಳ್ಳಿ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆದ ಜಾಫರ್ ಸಾಧಿಕ್, ಕಾಂಗ್ರೆಸ್ ನ ಹಿರಿಯ ಕಿರಿಯ ಮುಖಂಡರು ಭಾಗವಹಿಸಿದ್ದರು.
ವರದಿ: ರವಿ ಗುಟ್ಟೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA