nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
    • ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ
    • ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
    • ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
    • ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
    • ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
    • ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮ ಮೆಚ್ಚಿನ ಮಹಾನಾಯಕ ಮಾಧ್ಯಮಕ್ಕೆ 1 ವರ್ಷದ ಸಂಭ್ರಮ
    ಲೇಖನ October 30, 2021

    ನಿಮ್ಮ ಮೆಚ್ಚಿನ ಮಹಾನಾಯಕ ಮಾಧ್ಯಮಕ್ಕೆ 1 ವರ್ಷದ ಸಂಭ್ರಮ

    By adminOctober 30, 2021No Comments2 Mins Read

    ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು  2020 ಅಕ್ಟೋಬರ್ 20ರಂದು  ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ. ತಪ್ಪುಗಳು ಕಂಡು ಬಂದಾಗ ನಮ್ಮ ಗಮನಕ್ಕೆ ತಂದು ಅವುಗಳನ್ನು ತಿದ್ದುವ ಕೆಲಸವನ್ನೂ ಮಾಡಿದ್ದಾರೆ. ಹೀಗೆ ಓದುಗರಿಂದಲೇ ಉದ್ಘಾಟನೆಗೊಂಡ ಮಹಾನಾಯಕ ಮಾಧ್ಯಮ ಕೇವಲ ಒಂದೇ ವರ್ಷಗಳಲ್ಲಿ ಲಕ್ಷಾಂತರ ಓದುಗರ ಅಚ್ಚುಮೆಚ್ಚಿನ ತಾಣವಾಗಿದೆ. ಓದುಗರ ಈ ಪ್ರೀತಿ ವಿಶ್ವಾಸಕ್ಕೆ ಮಹಾನಾಯಕ ಬಳಗ ಆಭಾರಿಯಾಗಿದೆ.

    ಈ ಒಂದು ವರ್ಷಗಳ ಅವಧಿಯಲ್ಲಿ ಸಾವಿರಾರು ಆನ್ ಲೈನ್ ಮಾಧ್ಯಮಗಳ ನಡುವೆಯೇ ಮಹಾನಾಯಕ ಮಾಧ್ಯಮವನ್ನು ಓದುಗರು ಪ್ರತ್ಯೇಕವಾಗಿ ಗುರುತಿಸಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ತಪ್ಪುಗಳನ್ನು ಎತ್ತಿತೋರಿಸಲು ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೋಷಿತ ಜನರ ಸಂಕಷ್ಟಗಳು, ದಲಿತ ದೌರ್ಜನ್ಯಗಳು, ಅಸ್ಪೃಷ್ಯತೆ ಆಚರಣೆ, ಕೋಮುವಾದ, ಧಾರ್ಮಿಕ ಅಸಮಾನತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮೊದಲಾದ ಘಟನೆಗಳ ಸಂದರ್ಭದಲ್ಲಿ ಜಾತಿ, ಧರ್ಮ, ಪಕ್ಷ ಎಂದು ನೋಡದೇ ನೇರವಾಗಿ ಮಹಾನಾಯಕ ಮಾಧ್ಯಮ ಅವುಗಳನ್ನು ಟೀಕಿಸಿದೆ. ನಮ್ಮ ಸುತ್ತಮುತ್ತಲಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಸುದ್ದಿಗಳಲ್ಲಿ, ಜನರ ಮನಸ್ಥಿತಿಗಳನ್ನು ಬದಲಿಸುವಂತಹ ಸಲಹೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅಪರಾಧ ಪ್ರಕರಣಗಳನ್ನು ಇಳಿಕೆ ಮಾಡಲು ಮಹಾನಾಯಕ ಮಾಧ್ಯಮ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ.


    Provided by
    Provided by

    ಓದುಗರ ಮನವಿಯ ಮೇರೆಗೆ ವೈದ್ಯಕೀಯ ನೆರವುಗಳಂತಹ ಸುದ್ದಿಗಳ ಮೂಲಕ ಜನರಿಂದಲೇ ಸಹಕಾರ ನೀಡಲು ಮನವಿ ಮಾಡುವ ಮೂಲಕ ಒಂದಷ್ಟು ನೆರವುಗಳನ್ನು ನೇರವಾಗಿ ಸಂತ್ರಸ್ತರಿಗೆ ಕೊಡಿಸುವ ಮೂಲಕ ನೊಂದವರಿಗೆ ಮಾಧ್ಯಮ ಸಾಂತ್ವಾನ ಹೇಳಿದೆ. ಆದರೆ, ಮಹಾನಾಯಕ ಮಾಧ್ಯಮ ಇಂತಹ ಯಾವುದೇ ಉತ್ತಮ ಕೆಲಸಗಳ ಬಗ್ಗೆ ಫೋಟೋಗಳನ್ನು ಹಾಕಿಸಿಕೊಂಡು, ಬಿಟ್ಟಿ ಪ್ರಚಾರ ಪಡೆಯುವ ಕೆಲಸವನ್ನು ಮಾಡಿಲ್ಲ.

    ಮಹಾನಾಯಕ ಅಂತರ್ಜಾಲ ಮಾಧ್ಯಮವು ಯೂಟ್ಯೂಬ್ ಚಾನೆಲ್ ಮೂಲಕವೂ ಲೈವ್ ಸುದ್ದಿಗಳನ್ನು ಮಾಡುವ ನಿರೀಕ್ಷೆಯನ್ನು ಹೊಂದಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಒಂದು ಸ್ವತಂತ್ರ ಪೂರ್ಣ ಪ್ರಮಾಣದ ಸುದ್ದಿವಾಹಿನಿಯನ್ನು ಆರಂಭಿಸುವುದು ಮಾಧ್ಯಮದ ಗುರಿಯಾಗಿದೆ. ಮಹಾನಾಯಕ ಅಂತರ್ಜಾಲ ಮಾಧ್ಯಮವು ಶೋಷಿತರ, ನೊಂದವರ ಧ್ವನಿಯಾಗಿ ಮುನ್ನುಗ್ಗುತ್ತಿದೆ. ಮಾಧ್ಯಮ ಆರಂಭದಲ್ಲಿ ಒಂದು ತಿಂಗಳ ಅವಧಿಯಲ್ಲಿ ಕೆಲವು ಓದುಗ ಮಿತ್ರರು ಮಾಧ್ಯಮಕ್ಕೆ ಆರ್ಥಿಕವಾಗಿ ಸಣ್ಣಪುಟ್ಟ ನೆರವು ನೀಡಿದ್ದರು. ಆ ಬಳಿಕ ಮಾಧ್ಯಮವು ತನ್ನ ಸ್ವಂತ ಶಕ್ತಿಯಲ್ಲಿಯೇ ಈವರೆಗೆ ಮಾಧ್ಯಮವನ್ನು ಮುಂದುವರಿಸಿಕೊಂಡು ಬಂದಿದೆ. ಆದರೆ, ಮಹಾನಾಯಕ ಮಾಧ್ಯಮವು  ಹೆಚ್ಚಿನ ವ್ಯಾಪ್ತಿಯನ್ನು ತಲುಪಲು ಆರ್ಥಿಕ ಸಮಸ್ಯೆ ತೊಡಕಾಗಿರುವುದು ಸತ್ಯವೇ ಆಗಿದೆ.

    ಮಾಧ್ಯಮ ಒಂದು ವರ್ಷ ಪೂರೈಸಿರುವ ಬೆನ್ನಲ್ಲೇ ಮಹಾನಾಯಕ ಮಾಧ್ಯಮದ ಓದುಗರ ನಿರೀಕ್ಷೆಗಳು ಕೂಡ ಹೆಚ್ಚಾಗಿದೆ. ಪ್ರತಿ ಜಿಲ್ಲೆ, ತಾಲೂಕು ವ್ಯಾಪ್ತಿಗಳ ಸುದ್ದಿಗಳನ್ನು ಪ್ರಕಟಿಸುವಂತೆ ಓದುಗರು ಮನವಿ ಮಾಡಿಕೊಂಡಿದ್ದಾರೆ. ಖಂಡಿತವಾಗಿಯೂ ಈ ನಿಟ್ಟಿನಲ್ಲಿ ನಾವು ಕೂಡ ಯೋಚಿಸಿದ್ದೇವೆ. ಮಹಾನಾಯಕ ಮಾಧ್ಯಮದ ಸುದ್ದಿಗಳು ಪ್ರತಿಯೊಂದು ಜಿಲ್ಲೆಗಳನ್ನು ಕೂಡ ತಲುಪುವಲ್ಲಿ ನಮ ಮುಂದಿನ ದೃಷ್ಟಿ ನೆಟ್ಟಿದ್ದೇವೆ. ಈವರೆಗೆ ಓದುಗರು ನೀಡಿದ ಸಹಕಾರಗಳಿಗಿಂತಲೂ ಹೆಚ್ಚಿನ ಬೆಂಬಲ ಪ್ರೋತ್ಸಾಹ ನೀಡುವ ಮೂಲಕ ಮಾಧ್ಯಮದ ಬೆಳವಣಿಗೆಗೆ ಸಹಕಾರಿಯಾಗುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ.

    admin
    • Website

    Related Posts

    ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ

    August 13, 2025

    ನಾಶವಾಗ್ತಿದೆ ಮಿಂಚುಹುಳ ಸಂತತಿ!

    July 23, 2025

    ನಿಜವಾದ ದಾನಿ

    April 4, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್,…

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025

    ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ

    August 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.