nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುರಿಯಿಲ್ಲದ ಗುರಿ ಸಾಧಿಸದ ಬದುಕು ವ್ಯರ್ಥ: ಶ್ರೀ ರಂಭಾಪುರಿ ಜಗದ್ಗುರುಗಳು
    ಜಿಲ್ಲಾ ಸುದ್ದಿ June 12, 2023

    ಗುರಿಯಿಲ್ಲದ ಗುರಿ ಸಾಧಿಸದ ಬದುಕು ವ್ಯರ್ಥ: ಶ್ರೀ ರಂಭಾಪುರಿ ಜಗದ್ಗುರುಗಳು

    By adminJune 12, 2023No Comments2 Mins Read
    sree rambhapuri swameejigalu

    ಕೊರಟಗೆರೆ: ಮಾನವ ಜೀವನ ಉನ್ನತಿಗೆ ಗೊತ್ತು ಗುರಿಗಳಿರಬೇಕು. ಗುರಿಯಿಲ್ಲದ ಮತ್ತು ಗುರಿ ಸಾಧಿಸದ ಬದುಕು ವ್ಯರ್ಥವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ತಾಲೂಕಿನ ಸಿದ್ಧರಬೆಟ್ಟ ಕ್ಷೇತ್ರದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಶ್ರೀ ಜಗದ್ಗುರು ರೇಣುಕ-ಬಸವ ಜಯಂತಿ, ಸಾಮೂಹಿಕ ವಿವಾಹ, ವೀರಭದ್ರ ಶ್ರೀಗಳವರ ಪಟ್ಟಾಧಿಕಾರದ 17ನೇ ವಾರ್ಷಿಕೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

    ಭಾರತೀಯ ಸಂಸ್ಕøತಿಯಲ್ಲಿ ಧರ್ಮ ಮತ್ತು ಆಧ್ಯಾತ್ಮಕ್ಕೆ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಶಾಂತಿ ಸುಖದಾಯಕ ಬದುಕಿಗೆ ಧರ್ಮದ ಅರಿವು ಆಚರಣೆ ಅಗತ್ಯವಾಗಿದೆ. ಬದುಕು ಭಗವಂತ ಕೊಟ್ಟ ಕೊಡುಗೆಯಲ್ಲಿ ಮನುಷ್ಯ ಕಲಿಯುವ ಪಾಠಗಳಿವೆ. ಅನುಭವಿಸುವ ವಿಚಾರ ಧಾರೆಗಳಿವೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಮತ್ತು ಶ್ರೀ ಬಸವೇಶ್ವರರು ವೀರಶೈವ ಧರ್ಮ ಸಂಸ್ಕøತಿಯ ಸಂವರ್ಧನೆಗಾಗಿ ಶ್ರಮಿಸಿದ ಮಹಾಚೇತನ. ಅವರು ತೋರಿದ ದಾರಿಯಲ್ಲಿ ನಡೆದು ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ. ಗೃಹಸ್ಥಾಶ್ರಮ ಅತ್ಯಂತ ಪವಿತ್ರವಾದುದು. ಸತಿ ಪತಿಗಳು ಪರಸ್ಪರ ಅರಿವು ಸಾಮರಸ್ಯದಿಂದ ಬಾಳಿದರೆ ಜೀವನ ಉಜ್ವಲಗೊಳ್ಳುತ್ತದೆ. ಸಾಮೂಹಿಕ ವಿವಾಹ ಸಮಾರಂಭದಿಂದ ದುಂದು ವೆಚ್ಚ ತಡೆಗಟ್ಟಲು ಸಾಧ್ಯವಾಗುತ್ತದೆ.

    17 ಜೋಡಿ ನವ ದಂಪತಿಗಳು ಪವಿತ್ರವಾದ ಗೃಹಸ್ಥಾಶ್ರಮದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಅವರೆಲ್ಲರ ಬಾಳ ಬದುಕು ಸಮೃದ್ಧಗೊಳ್ಳಲೆಂದು ಹರಿಸಿದ ಜಗದ್ಗುರುಗಳು ಮಠಾಧ್ಯಕ್ಷರಾದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಧರ್ಮ ಮುಖಿಯಾಗಿ ಸಮಾಜ ಮುಖಿಯಾಗಿ 17 ವರುಷಗಳಿಂದ ಶ್ರಮಿಸುತ್ತಿರುವುದನ್ನು ಕಂಡು ಎಲ್ಲರಿಗೂ ಸಂತೋಷವಾಗಿದೆ. ಶ್ರೀಗಳಿಂದ ಈ ಭಾಗದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ನೆರವೇರಲೆಂದು ಶುಭ ಹಾರೈಸಿದರು.

    ಸಮಾರಂಭವನ್ನು ಉದ್ಘಾಟಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ ವೀರಭದ್ರ ಶ್ರೀಗಳು ಪ್ರತಿ ವರುಷ ಈ ಕ್ಷೇತ್ರದಲ್ಲಿ ಜನೋಪಯೋಗಿ ಕಾರ್ಯಗಳನ್ನು ಮಾಡುತ್ತಾ ಸಮಾಜದಲ್ಲಿ ಸಾಮರಸ್ಯ ಸದ್ಭಾವನೆ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ಅವರು ಕೈಗೊಳ್ಳುವ ಎಲ್ಲ ಜನಹಿತ ಕಾರ್ಯಗಳಿಗೆ ನಮ್ಮೆಲ್ಲರ ಬೆಂಬಲ ಸಹಕಾರ ಸದಾ ಇದೆ ಎಂದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಎಡೆಯೂರು ರೇಣುಕ ಶಿವಾಚಾರ್ಯರು, ಎಲೆರಾಂಪುರ ಡಾ.ಹನುಮಂತನಾಥ ಸ್ವಾಮಿಗಳು, ಬೆಳ್ಳಾವಿ ವೀರಬಸವ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ಹಲಕರಟಿ ಮುನೀಂದ್ರ ಶ್ರೀಗಳು, ಕಲ್ಕೇರಿ ಸಿದ್ಧರಾಮ ಶ್ರೀಗಳು, ತಂಗನಹಳ್ಳಿ ಬಸವಲಿಂಗ ಶ್ರೀಗಳು, ಹತ್ತಿಕಣಬಸ ಪ್ರಭುಶಾಂತ ಶ್ರೀಗಳವರು ಪಾಲ್ಗೊಂಡು 50 ಜನ ವೀರಮಾಹೇಶ್ವರ ಮತ್ತು ಭಕ್ತರಿಗೆ ಅಯ್ಯಾಚಾರ ಶಿವದೀಕ್ಷೆ ನೆರವೇರಿಸಿದರು.

    ರೈತರಿಗೆ ಸಸಿ ವಿತರಿಸಿ ರೈತಪರ ಚಿಂತನಗಳನ್ನು ಮನವರಿಕೆ ಮಾಡಿಕೊಟ್ಟರು. ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು.

    ನೇತೃತ್ವ ವಹಿಸಿದ ಮಠಾಧ್ಯಕ್ಷರಾದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶ್ರೀ ಕ್ಷೇತ್ರದಲ್ಲಿ ಪ್ರತಿ ವರುಷ ಜರುಗುತ್ತಿರುವ ಧರ್ಮ ಕಾರ್ಯಗಳಿಗೆ ಭಕ್ತರ ಹೆಚ್ಚಿನ ಸಹಕಾರ ದೊರೆಯುತ್ತಿರುವುದು ಸಂತೋಷದ ಸಂಗತಿ. ಬದುಕಿ ಬಾಳುವ ಜನಾಂಗಕ್ಕೆ ಒಳಿತಾಗಬೇಕೆಂಬ ಉದ್ದೇಶದಿಂದ ಜನಹಿತ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದೇವೆ. ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಮತ್ತು ಭಕ್ತರ ಸಹಕಾರದಿಂದ ಜೀವನ ಪರ್ಯಂತರ ಧರ್ಮ ಸಂಸ್ಕøತಿಯ ಪುನರುತ್ಥಾನಕ್ಕಾಗಿ ಶ್ರಮಿಸುವ ಸಂಕಲ್ಪ ನಮ್ಮದಾಗಿದೆ ಎಂದರು.

    ಸಿದ್ಧಗಿರಿ ನಂಜುಂಡಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ನಂತರ ಅನ್ನ ದಾಸೋಹ ನೆರವೇರಿತು.

    ವರದಿ: ಮಂಜುಸ್ವಾಮಿ ಎಂ ಎನ್  ಕೊರಟಗೆರೆ


    Provided by
    Provided by
    admin
    • Website

    Related Posts

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಐಸಿಎಸ್‌ ಎಸ್‌ ಆರ್–ಪ್ರಾಯೋಜಿತ ಸಂಶೋಧನ ಯೋಜನೆಗೆ ಸಂಶೋಧನ ಸಹಾಯಕರ…

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.