ತಾಪಮಾನ ಏರಿಕೆ, ಮಳೆ ಕೊರತೆಯಿಂದಾಗಿ ಇಳುವರಿ ಕುಂಠಿತವಾಗಿ ತರಕಾರಿ ಮತ್ತು ಸೊಪ್ಪಿನ ದರಗಳು ದುಪ್ಪಟ್ಟಾಗಿವೆ.ಬೀನ್ಸ್ ಮತ್ತು ಕ್ಯಾರೆಟ್ 7100ರ ಗಡಿ ದಾಟಿದ್ದು, ಗ್ರಾಹಕರಿಗೆ ಹೊರೆಯಾಗಿದೆ.
ಕಳೆದ ವಾರ ರಾಜ್ಯದ ಕೆಲವು ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಬಿದ್ದಿದೆ.ಆದರೆ, ಬಿಸಿಲಿನ ತಾಪ ಕಡಿಮೆಯಾಗಿಲ್ಲ. ಈ ಕಾರಣದಿಂದಾಗಿ ಸಹಜವಾಗಿಯೇ ತರಕಾರಿಗಳ ಇಳುವರಿ ಕಡಿಮೆಯಾಗಿ ಬೆಲೆ ದುಬಾರಿಯಾಗಿದೆ.
‘ತಮಿಳುನಾಡು ಸೇರಿ ಬೇರೆ ರಾಜ್ಯಗಳಲ್ಲಿ ಮಳೆ ಬೀಳದ ಕಾರಣ ಕ್ಯಾರೆಟ್ ಪೂರೈಕೆ ಕಡಿಮೆಯಾಗಿದೆ. ಅಲ್ಲಿಂದ ಅವಕವಾಗುತ್ತಿದ್ದ ಕ್ಯಾರೆಟ್ ಪ್ರಮಾಣ ಇದರಿಂದ ಹೆಚ್ಚು ತೊಂದರೆಯಾಗಿದೆ.
ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರಿಂದ ಬೆಲೆ ಹೆಚ್ಚಾಗಿದೆ.ಮದುವೆ ಮೊದಲಾದ ಶುಭ ಸಮಾರಂಭ ಮಾಡುವವರಿಗೆ ಹಾಗೂ ಗ್ರಾಹಕರಿಗೆ ಮತ್ತೊಂದೆಡೆ ರೈತರು ಬೆಳೆದ ಫಸಲಿನಲ್ಲಿ ಸಮರ್ಪಕ ಇಳುವರಿ ಬಾರದ ಕಾರಣ ಅವರಿಗೂ ಹೆಚ್ಚಿನ ಲಾಭವಾಗುತ್ತಿಲ್ಲ ಎನ್ನುತ್ತಾರೆ ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳು.
ಕಳೆದ ವಾರ ಕೆ.ಜಿಗೆ 360ಕ್ಕೆ ಮಾರಾಟವಾಗುತ್ತಿದ್ದ ಬೀನ್ಸ್, ಕ್ಯಾರೆಟ್ 7100ರ ಗಡಿ ದಾಟಿದೆ.ಪ್ರತಿ ಕೆ.ಜಿ.ಗೆ 140ರಂತೆ ಮಾರಾಟವಾಗುತ್ತಿದ್ದಹೂಕೋಸು, ಹಾಗಲಕಾಯಿ, ತೊಂಡೆಕಾಯಿ,
ಬದನೆಕಾಯಿ, ಕುಂಬಳಕಾಯಿ,ಸೊರೇಕಾಯಿ, ಹಿರೇಕಾಯಿ 320 ಹೆಚ್ಚಳವಾಗಿ, 360ರಂತೆ ಮಾರಾಟವಾಗುತ್ತಿವೆ.
ಸೊಪ್ಪಿನ ದರ ಹೆಚ್ಚಳ: ಕಳೆದ ವಾರ ಒಂದು ಕಟ್ಟಿಗೆ 110ರಂತೆ ಮಾರಾಟವಾಗುತ್ತಿದ್ದ ಕೊತ್ತಂಬರಿ, ಸದ್ಯ 140ರಂತೆ ಮಾರಾಟವಾಗುತ್ತಿದೆ. ಮೆಂತೆ, ಸಬ್ಬಸಿಗೆ ಪ್ರತಿ ಕಟ್ಟಿಗೆ 720ರಂತೆ ಮಾರಾಟವಾಗುತ್ತಿವೆ. ‘ಪ್ರತಿ ಕೆ.ಜಿ. ಪಡವಲಕಾಯಿ 180, ಟೊಮೆಟೊ ದರದಲ್ಲಿ 720 ಹೆಚ್ಚಾಗಿದ್ದು, 140ರಂತೆ ಮಾರಾಟವಾಗುತ್ತಿದೆ. ಕಳೆದ ವಾರದಂತೆ ಅಗತ್ಯ ಪ್ರಮಾಣದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


