ತುಮಕೂರು: ಗುಬ್ಬಿ ತಾಲೂಕು ಪಂಚಾಯಿತಿ ಸಭೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ ಪಿಡಿಒಗಳಿಗೆ ಅನುದಾನ ಬಳಕೆ ಕುರಿತಂತೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಅಯ್ಯೋ ನನ್ಮಗನೇ ಓದೋರಿಗೆ ಕೊಡಲೈ ಪಿಡಿಒಗಳ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪಿಡಿಒಗಳಿಗೆ ಏಕವಚನದಲ್ಲೇ ತಾಕೀತು ಮಾಡಿದ ಎಸ್.ಆರ್.ಶ್ರೀನಿವಾಸ್ ಗುಬ್ಬಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದಿದ್ದ ಪಿಡಿಒಗಳ ಸಭೆಯಲ್ಲಿ ತಾಲೂಕಾ ಪಂಚಾಯತ್ ಇಒ ಸೇರಿದಂತೆ 25ಕ್ಕೂ ಹೆಚ್ಚು ಪಿಡಿಒಗಳು ಸಭೆಯಲ್ಲಿದ್ದರು.
ಸಭೆಯುದ್ದಕ್ಕೂ ಏಕವಚನದಲ್ಲೇ ಮಾತನಾಡಿದ ಶಾಸಕ ಶ್ರೀನಿವಾಸ್, ಅನುದಾನ ಬಳಕೆ ಕುರಿತಂತೆ ಪಿಡಿಒಗಳಿಗೆ ತಾಕೀತು ಮಾಡುವ ವೇಳೆ ಪ್ರಥಮ ಪ್ರಶಸ್ತಿಯಾಗಿ ವ್ಯಾಸಂಗ ಮಾಡುವ ಮಕ್ಕಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಮುಂದಾಗಬೇಕು ನಂತರ ಅಂಗವಿಕಲರಿಗೆ ಆನಂತರ ವಿಧವೆಯರಿಗೆ ಅನುದಾನ ಕೊಡುವ ಕುರಿತಂತೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA