ಕೊರಟಗೆರೆ: ದಿನಸಿ ಸಾಮಾನಿನ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ ತನ್ನ ಪತ್ನಿಯ ಮೇಲೆ ಡಿಸೇಲ್ ಸುರಿದು ಆಕೆಯ ಸಾವಿಗೆ ಕಾರಣನಾದ ಗಂಡನಿಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾಧವ ಕರಕೇರ ಅವರು ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢ ವಿಧಿಸಿ ಜೂನ್ 19ರ ಸೋಮವಾರ ತೀರ್ಪು ನೀಡಿರುವ ಘಟನೆ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಂಪುರ ಗ್ರಾಮದ ಶಫೀವುಲ್ಲಾ ಎಂಬುವರ ಮಗನಾದ ಜಿಯಾವುಲ್ಲಾ (42) ನಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ.
ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯ ಜೊತೆ 1ಲಕ್ಷ ದಂಢವಿಧಿಸಿ ಜೂ.19ರಂದು ಆದೇಶ ಮಾಡಿದೆ.
ಅಭಿಯೋಜನೆಯ ಪರವಾಗಿ ಸರಕಾರಿ ಅಭಿಯೋಜಕ ನಿರಂಜನಮೂರ್ತಿ.ಬಿ.ಎಂ ವಾದ ಮಂಡಿಸಿದ್ದಾರೆ.ದಿನಸಿ ಸಾಮಾನಿನ ವಿಚಾರಕ್ಕೆ ಜಗಳ ನಡೆದಿದೆ.
ಸೋಂಪುರದ ಜಿಯಾವುಳ್ಳಾ ಮತ್ತು ತಸ್ಲೀಮಾಭಾನು ನಡುವೆ ದಿನಸಿ ಸಾಮಾನಿನ ವಿಚಾರಕ್ಕೆ 2019ರ ಮೇ.14ರಂದು ಜಗಳವಾಗಿ ಬಾಟೀಲುನಲ್ಲಿದ್ದ ಡಿಸೇಲ್ ಸುರಿದು ಬೆಂಕಿ ಹಚ್ಚಿ ಪರಾರಿ ಆಗುತ್ತಾನೆ. ಸುಟ್ಟ ಗಾಯಗಳಾಗಿದ್ದ ತಸ್ಲೀಮಾಭಾನು ಅವರನ್ನು ಹೊಳವನಹಳ್ಳಿ, ಕೊರಟಗೆರೆ ಮತ್ತು ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸುತ್ತಾರೆ. 2019ರ ಮೇ.20ರಂದು ಚಿಕಿತ್ಸೆ ಫಲಕಾರಿ ಆಗದೇ ತಸ್ಲೀಮಾ ಭಾನು ಆಸ್ಪತ್ರೆಯಲ್ಲಿ ಮೃತಪಡುತ್ತಾಳೆ.
ಅಂದಿನ ಕೊರಟಗೆರೆ ಸಿಪಿಐ ನದಾಫ್ ರಿಂದ ತನಿಖೆ..
2019ರ ಮೇ.14ರಂದು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಿನ ಸಿಪಿಐ ಎಫ್.ಕೆ.ನದಾಫ್ ಐಪಿಸಿ ದಂಡ ಸಂಹಿತೆ 302ರ ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕೆ ದೋಷಾರೋಷಣಾ ಪಟ್ಟಿ ಸಲ್ಲಿಸಿದ್ದರು. ಮೃತಳು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದ್ದಾಗ ಯಲಹಂಕ ತಹಶೀಲ್ದಾರ್ ಮುಂದೆ ನೀಡಿದ ಮರಣ ಪೂರ್ವ ಹೇಳಿಕೆಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿ ಜಿಯಾವುಳ್ಳ ಸಿದ್ದದೋಷಿ ಎಂದು ಪರಿಗಣಿಸಿ 2023ರ ಜೂ.19ರಂದು ತೀರ್ಪು ನೀಡಿದೆ.
ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಲದ ನ್ಯಾಯಾಧೀಶರಾದ ಯಾಧವ ಕರಕೇರ ಅವರು ಶಿಕ್ಷೆಯ ಮೇಲಿನ ಸುನಾವಣೆ ಆಲಿಸಿ ಸೋಂಪುರದ ಆರೋಪಿ ಜಿಯಾವುಲ್ಲಾ(42)ನಿಗೆ ಜೀವಾವಧಿ ಶಿಕ್ಷೆ ಮತ್ತು 1ಲಕ್ಷ ದಂಡ ವಿಧಿಸಿದೆ. ದಂಡದ ಹಣದಲ್ಲಿ ತನ್ನ ಮೂರು ಜನ ಮಕ್ಕಳಿಗೆ ತಲಾ 25ಸಾವಿರ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ಅಭಿಯೋಜನೆಯ ಪರವಾಗಿ ನಿರಂಜನಮೂರ್ತಿ.ಬಿ.ಎಂ ವಾದ ಮಂಡಿಸಿದ್ದಾರೆ.
ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA