ಕೊರಟಗೆರೆ: ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗದ ವಾಸದ ಸ್ಥಳಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಭೇಟಿ ನೀಡಿ ಅಲೆಮಾರಿ ಜನಾಂಗದ ವಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಕೊಟ್ಟ ಮಾತಿನಂತೆ ಮಾಶಾಸನದ ಆದೇಶ ಪತ್ರವನ್ನು ಕೇವಲ 24 ಗಂಟೆ ಒಳಗೆ ವಿತರಿಸಿದ್ದಾರೆ.
ಅಲೆಮಾರಿ ಜನಾಂಗದ ಬಡ ಜನರಿಗೆ ಬೇಕಾಗಿರುವಂತಹ ಎಲ್ಲಾ ಮೂಲಭೂತ ಸೌಕರ್ಯಗಳ ಬಗ್ಗೆ ಸ್ಥಳದಲ್ಲೇ ಎಲ್ಲಾ ಇಲಾಖೆಯ ಅಧಿಕಾರದೊಂದಿಗೆ ಚರ್ಚಿಸಿ ಶೀಘ್ರವೇ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು,ವಿದ್ಯುತ್, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾದ ರಸ್ತೆ, ಚರಂಡಿ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಅಧಿಕಾರಿಗಳು ಮುಂದಾಗಿದ್ದಾರೆ.
24 ಹೆಚ್ಚು ಅಲೆಮಾರಿ ಜನಾಂಗಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ನಿವೇಶನ ಆದೇಶ ಪ್ರತಿಯನ್ನು ವಿತರಿಸುವದಷ್ಟೇ ಬಾಕಿ ಇದೆ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿರವರು ಶೀಘ್ರದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಅಲೆಮಾರಿ ಜನಾಂಗದವರ ಕೊಟ್ಟಿಗೆ ನಮ್ಮ ತಾಲೂಕು ಆಡಳಿತ ಸದಾಕಾಲ ಇರುತ್ತದೆ ಎಂದು ಧೈರ್ಯ ತುಂಬಿದರು.
ನಮ್ಮತುಮಕೂರು ವರದಿಗೆ ಸಂದ ಜಯ:
ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಸಂಕಷ್ಟದಲ್ಲಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಗ್ರಾಮಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ಇಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದರು. ಇದೀಗ ಅಲೆಮಾರಿ ಜನಾಂಗದ ಸಮಸ್ಯೆ ಬಗೆ ಹರಿಸಲು ತಹಶೀಲ್ದಾರ್ ಮುನಿಶಾಮಿ ಅವರು ಮುಂದಾಗಿದ್ದು, ಇಲ್ಲಿನ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಂಬಿಕಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಕೀರ್ತಿ ನಾಯಕ್, ವಿದ್ಯುತ್ ಸರಬರಾಜು ಇಲಾಖೆಯ ಕಾರ್ಯನಿರ್ವಣಾಧಿಕಾರಿ ಅರಸು ರಾಜು, ಬೆಸ್ಕಾಂ ಇಲಾಖೆಯ ಅಧಿಕಾರಿ ಮಲ್ಲಣ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೈಲಣ್ಣ, ಜಿಲ್ಲಾ ಪಂಚಾಯತ್ ಎ ಇ ಇ ಅಧಿಕಾರಿ ರವಿಕುಮಾರ್,ಗ್ರಾಮ ಲೆಕ್ಕಿಗರಾದ ಬಸವರಾಜು, ಗ್ರಾಮ ಸಹಾಯಕ ರಘು, ಸ್ಥಳದಲ್ಲಿ ಅಲೆಮಾರಿ ಜನಾಂಗದ ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA