ತುಮಕೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು ಜನರಿಗೆ ಟೋಪಿ ಹಾಕಿ ದ್ರೋಹ ಮಾಡಿ ಅಧಿಕಾರಕ್ಕೆ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಈಗ ಹಲವು ಷರತ್ತು ಹಾಕಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದೇ ರೀತಿಯ ದ್ರೋಹ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಮೋಸದ ವಿರುದ್ದ ಸದನದ ಹೊರಗೆ ಒಳಗೆ ನಾವು ಹೋರಾಟ ಮಾಡುತ್ತೇವೆ ಎಂದರು.
ಅಧಿವೇಶನ ಆರಂಭದಿಂದ ಮುಗಿಯುವವರೆಗೂ ಧರಣಿ ಮಾಡುತ್ತೇವೆ. ರಾಜ್ಯದ ಎಲ್ಲಾ ಕಡೆಯಿಂದ ಬಂದು ಪ್ರತಿಭಟನೆ ಮಾಡಲಿದ್ದೇವೆ. ಸರ್ಕಾರದ ಕೊಟ್ಟ ಯೋಜನೆ ಜಾರಿ ಮಾಡಬೇಕು, ಇಲ್ಲವಾದ್ರೆ ಅಧಿಕಾರಾದಲ್ಲಿ ಒಂದು ನಿಮಿಷನೂ ಅವರು ಇರಬಾರದು. ಅಧಿವೇಶನಕ್ಕೆ ಮುಂಚೆ ವಿಪಕ್ಷನಾಯಕರ ಆಯ್ಕೆ ಮಾಡುತ್ತೇವೆ. ನನಗೆ 81 ವರ್ಷ ಆದರೂ ನಾನು ಹೋರಾಟ ಮಾಡುತ್ತೇನೆ ಎಂದರು.
ಪ್ರಧಾನಿ ಮೋದಿಗೆ ವಿಶ್ವದಲ್ಲಿ ಗೌರವ ಸಿಗುತ್ತಿದೆ. ಈ ಬಾರಿ ಕಳೆದ ಬಾರಿಯಂತೆ ಲೋಕಸಭೆಯಲ್ಲಿ ಕರ್ನಾಟದಲ್ಲಿ ಹೆಚ್ಚು ಸ್ಥಾನ ಪಡೆಯುತ್ತೇವೆ. ನನ್ನನ್ನು ಯಾರೂ ನಿರ್ಲಕ್ಷ್ಯ ಮಾಡಿಲ್ಲ. ಇದರಲ್ಲಿ ಸತ್ಯಾಂಶ ಏನೂ ಇಲ್ಲ.ನನಗೆ ಎಲ್ಲಾ ಸ್ಥಾನ ಮಾನ ಗೌರವ ಸಿಕ್ಕಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರೂ ಬೇಕಾದರೂ ಆಕಾಂಕ್ಷಿ ಆಗಬಹುದು ಸೋಮಣ್ಣ ಆಕಾಂಕ್ಷಿ ಆಗೋದರಲ್ಲಿ ತಪ್ಪೇನಿಲ್ಲ ಎಂದು ಇದೇ ವೇಳೆ ಹೇಳಿದರು.
ಕೇಂದ್ರದಿಂದ ಅಕ್ಕಿ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಅಕ್ಕಿ ಕೊಡುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ. ಇವರ ತೀಟೆಗೆ ಕೆಲ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. 15 ಕೆಜಿ ಅಕ್ಕಿಯಲ್ಲಿ 1 ಕೆ.ಜಿ.ಯೂ ಕಡಿಮೆ ಆಗಬಾರದು. ಕಡಿಮೆ ಮಾಡಿದರೆ ನಾವು ಹೋರಾಟ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA