ಪ್ರಯಾಣಿಕನ ಬ್ಯಾಗ್ನಲ್ಲಿದ್ದ 5 ಲಕ್ಷ ರೂ. ಹಣವನ್ನು ಕದ್ದು ಹೋಗುತ್ತಿದ್ದ ಆರೋಪಿಯನ್ನ ಕೆ. ಎಸ್. ಆರ್. ಟಿ. ಸಿ ಚಾಲಕ ಮತ್ತು ನಿರ್ವಾಹಕ ಚೇಸ್ ಮಾಡಿ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬಹುಮಾನ ನೀಡಿ, ಸನ್ಮಾನಿಸಿದ್ದಾರೆ.
ಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ಟಿಸಿ ಬಸ್ಸಿಗೆ ಮೆಜೆಸ್ಟಿಕ್ ಹೋಗಬೇಕೆಂದು ಇಬ್ಬರು ಹತ್ತಿದ್ದಾರೆ. ಆದ್ರೆ, ಎಲೆಕ್ಟ್ರಾನಿಕ್ ಸಿಟಿ ಮದ್ಯದಲ್ಲೇ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ.
ಅದಾಗಲೇ ನಿರ್ವಾಹಕರಿಗೆ ಅವರ ಮೇಲೆ ಅನುಮಾನ ಮೂಡಿದೆ. ಅಲ್ಲಿ ಪ್ರಯಾಣಿಕರೊಬ್ಬರು ಇಳಿದು ಹೋಗುತ್ತಿದ್ದಂತೆ ಬ್ಯಾಗ್ ಪರಿಶೀಲಿಸಿದ್ದು, ನಿರ್ವಾಹಕರಿಗೆ ಐದು ಲಕ್ಷ ಕಾಣಿಸಲಿಲ್ಲ ಎಂದಿದ್ದಾರೆ. ಅಷ್ಟೊತ್ತಿಗಾಗಲೇ ಇಬ್ಬರು ಆರೋಪಿಗಳು ಓಡಲು ಪ್ರಾರಂಭಿಸಿದ್ದಾರೆ. ಕೂಡಲೇ ನಿರ್ವಾಹಕ ಚೆಸ್ ಮಾಡಿ ಇಬ್ಬರಲ್ಲಿ ಓರ್ವನನ್ನ ಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಶಹಾ ಅಲ್ಲಾಂ ನಿಂದ ಐದು ಲಕ್ಷ ಹಣ ವಶಕ್ಕೆ ಪಡೆದ ಪೊಲೀಸರು:
ಇನ್ನು ಓಡಿ ಹೋಗಿದ್ದ ಕಳ್ಳನನ್ನ ಚೇಸ್ ಮಾಡಿದ ಬಸ್ ಚಾಲಕ ಸೋಮಪ್ಪ ಮತ್ತು ಕಂಡಕ್ಟರ್ ಮಂಜುನಾಥ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಓರ್ವ ಕಳ್ಳ ಎಸ್ಕೆಪ್ ಆಗಿದ್ದಾನೆ. ಶಾಹಾ ಅಲ್ಲಾಂ ಎಂಬಾತನನ್ನ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಹಾ ಅಲ್ಲಾಂನಿಂದ ಐದು ಲಕ್ಷ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ, ಕಂಡಕ್ಟರ್ ರವರ ಉತ್ತಮ ಕೆಲಸಕ್ಕೆ ನಗರ ಪೊಲೀಸ್ ಆಯುಕ್ತ ದಯಾನಂದರಿಂದ ಸನ್ಮಾನ ಮಾಡಲಾಗಿದೆ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


