ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್ ಹಾಗೂ ಎನ್ ಸಿಸಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಜ. 10ರಂದು ನಡೆದಿದ್ದ ಘಟನೆಯಲ್ಲಿ ತೇಜಸ್ವಿನಿ ಸುಲಾಖೆ (28) ಹಾಗೂ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಿದ ಗೋವಿಂದಪುರ ಠಾಣೆ ಪೊಲೀಸರು ಅಧಿಕಾರಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
‘ಬಿಎಂಆರ್ ಸಿಎಲ್ ಮುಖ್ಯ ಎಂಜಿನಿಯರ್ ಸಿ.ಎಂ. ರಂಗನಾಥ್, ಉಪ ಮುಖ್ಯ ಎಂಜಿನಿಯರ್ ಡಿ. ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಮುಖ್ಯ ಎಂಜಿನಿಯರ್ ಮಹೇಶ್, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್, ಸಹಾಯಕ ಎಂಜಿನಿಯರ್ ಜೀವನ್ಕುಮಾರ್ ಹಾಗೂ ನಾಗಾರ್ಜುನ್ ಕನ್ಸ್ಟ್ರಕ್ಷನ್ನ (ಎನ್ಸಿಸಿ) ಯೋಜನಾ ವ್ಯವಸ್ಥಾಪಕ ವಿಕಾಸ್ ಕುಮಾ ಸಿಂಗ್, ಹಿರಿಯ ಯೋಜನಾ ವ್ಯವಸ್ಥಾಪಕ ಎ. ಮಾತಯ್ಯ, ಸಹಾಯಕ ಎಂಜಿನಿಯರ್ ಪ್ರಭಾಕರ್ ಮಾಳಿ, ಸುರಕ್ಷತಾ ಮೇಲ್ವಿಚಾರಕ ಭರತೇಶ್ ಸತ್ತಿಗೇರಿ ಹಾಗೂ ಮೇಲ್ವಿಚಾರಕ ಕೆ. ಲಕ್ಷ್ಮಿಪತಿ ರಾಜು ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


