nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂಕ್ತ ಕ್ರಮವಹಿಸದೇ ಟೋಲ್ ಶುಲ್ಕ ಸರಿಯಲ್ಲ ಎಂದು ಸಿಎಂಗೆ ಮನವಿ
    ಜಿಲ್ಲಾ ಸುದ್ದಿ July 1, 2023

    ಸೂಕ್ತ ಕ್ರಮವಹಿಸದೇ ಟೋಲ್ ಶುಲ್ಕ ಸರಿಯಲ್ಲ ಎಂದು ಸಿಎಂಗೆ ಮನವಿ

    By adminJuly 1, 2023No Comments2 Mins Read
    toll fees

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಬೆಂಗಳೂರಿನಿಂದ ಅಥವಾ ಮೈಸೂರಿನಿಂದ ಹೊರಟಾಗ ಒಂದು ಬಾರಿ ಟೋಲ್ ಶುಲ್ಕವನ್ನು ಕಟ್ಟಿಸಿಕೊಳ್ಳಲಾಗುತ್ತಿದೆ. ಈಗ ಶ್ರೀರಂಗಪಟ್ಟಣದಲ್ಲಿಯೂ ಟೋಲ್ ಕಟ್ಟಿಸಿಕೊಳ್ಳುತ್ತಿರುವುದು ಸಾರ್ವಜನಿಕರಿಗೆ ದುಪ್ಪಟ್ಟು ಹೊರೆಯಾಗಲಿದೆ. ಅಲ್ಲದೆ, ಇನ್ನೂ ಕಾಮಗಾರಿಗಳೇ ಪೂರ್ಣಗೊಂಡಿಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಈ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು. ಸರ್ವಿಸ್ ರಸ್ತೆ ಸೇರಿದಂತೆ ಇನ್ನಿತರ ಕಾಮಗಾರಿ ಮುಗಿಯುವವರೆಗೂ ಶ್ರೀರಂಗಪಟ್ಟಣ ಟೋಲ್‌ ನಲ್ಲಿ ಶುಲ್ಕವನ್ನು ಸಂಗ್ರಹ ಮಾಡದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.


    Provided by
    Provided by

    ಮನವಿ ಪತ್ರದಲ್ಲೇನಿದೆ?
    ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯು ಮಾರ್ಚ್ ತಿಂಗಳಲ್ಲಿ ಲೋಕಾರ್ಪಣೆಗೊಂಡಿದೆ. ಇದರಿಂದ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಶೀಘ್ರ ಸಂಚಾರಕ್ಕೆ ಅನುಕೂಲವಾಗಿದೆ ಎಂಬ ಅಂಶ ಬಿಟ್ಟರೆ, ಇದು ಜನರಿಗೆ ನಿಜಕ್ಕೂ ಜೇಬು ಸುಡುವ ರಹದಾರಿಯಾಗಿದೆ. ಈ ಮಾರ್ಗದಲ್ಲಿ ಜನರು ಟೋಲ್ ಕಟ್ಟಿ ಕಟ್ಟಿ ಬಸವಳಿಯುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈಗ ಇದ್ದದ್ದು ಸಾಲದೆಂಬಂತೆ, ಶ್ರೀರಂಗಪಟ್ಟಣದಲ್ಲಿ ಸಹ ಇದೇ ಜುಲೈ 1ರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಲಿರುವುದು ಜನರಿಗೆ ನುಂಗಲಾರದ ತುತ್ತಾಗಿದೆ.

    ಉದ್ಘಾಟನೆಯಾಗಿ ಎರಡು ತಿಂಗಳು ಕಳೆಯುವಷ್ಟರಲ್ಲಿ ಈ ರೀತಿಯ ಜನರಿಗೆ ಹೊರೆಯಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಅಲ್ಲದೆ, ಬೆಂಗಳೂರಿನಿಂದ ಮೈಸೂರಿಗೆ ಸ್ವಂತ ವಾಹನದಲ್ಲಿ ಹೋಗಿ ಬರಲು ಟೋಲ್ ಶುಲ್ಕವಾಗಿಯೇ 500 ರೂಪಾಯಿ ಕಟ್ಟಬೇಕೆಂದರೆ ನಿಜಕ್ಕೂ ಪ್ರಯಾಣ ಎಂಬುದು ದುಸ್ತರವಾಗಲಿದೆ.

    ಒಂದೆಡೆ ಆರಂಭಿಕ ಹಂತದಲ್ಲಿ ಟೋಲ್ ಶುಲ್ಕ ಬೀಳುತ್ತಿದೆ. ಇದನ್ನು ಜೂನ್ 1ರಿಂದಲೇ ಜಾರಿಗೆ ಬರುವಂತೆ ಶೇಕಡಾ 22ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿತ್ತು. ಮೊದಲೇ ಬೆಲೆ ಏರಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಇದು ದೊಡ್ಡ ಹೊರೆಯಾಗಲಿದೆ. ಬಾಕಿ ಉಳಿದಿರುವ ಕಾಮಗಾರಿಗಳು ಹತ್ತಾರು ಇವೆ. ಅವುಗಳು ಇನ್ನೂ ಕುಂಟುತ್ತಾ ಸಾಗಿವೆ. ಕೇಳಿದರೆ ಕುಂಟು ನೆಪಗಳನ್ನು ಹೇಳಲಾಗುತ್ತಿದೆ. ಆದರೆ, ಜನರಿಂದ ದುಡ್ಡು ಪಡೆಯಲು ಮಾತ್ರ ಇದಾವುದೂ ಲೆಕ್ಕಕ್ಕೇ ಬಾರದು ಎಂದರೆ ಹೇಗೆ?

    ಮಂಡ್ಯ ತಾಲೂಕಿನ ಹನಕೆರೆ ಅಂಡರ್ ಪಾಸ್, ಹಳೇ ಬೂದನೂರು ಹಾಗೂ ಹೊಸ ಬೂದನೂರು ನಡುವಿನ ಸರ್ವಿಸ್ ರಸ್ತೆಗೆ ನಿರ್ಮಾಣ ಮಾಡುತ್ತಿರುವ ಸೇತುವೆ ಸೇರಿದಂತೆ ಹಲವು ಕಾಮಗಾರಿಗಳು ಅಪೂರ್ಣವಾಗಿವೆ. ಈ ಹಂತದಲ್ಲಿ ಟೋಲ್ ಸಂಗ್ರಹ ಮಾಡುವುದು ಸರಿ ಅಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಡೆ ಖಂಡನಾರ್ಹವಾಗಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದು ವಿನಂತಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.