ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಬೇಕು. ಅಲ್ಲದೆ ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡುವ ಹಾಗೂ ಪುನರ್ವಸತಿ ಕೇಂದ್ರಗಳ ಕಾಮಗಾರಿ ಮತ್ತೆ ಚಾಲನೆ ನೀಡುವ ವಿಚಾರವಾಗಿ ಪರಿಷತ್ ಸದಸ್ಯರಾದ ರುದ್ರಪ್ಪ ನಿರಾಣಿ ಅವರು ಪ್ರಸ್ತಾಪಿಸಿದಾಗ, ಮಾತನಾಡಿದ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ಸದಸ್ಯರು ಹೇಳಿದ ಮಾತು ಸತ್ಯವಿದೆ. ಸಂತ್ರಸ್ತರಿಗೆ ಎಷ್ಟು ಹಣ ನೀಡಬೇಕು ಎಂಬುದರ ಬಗ್ಗೆ ಬಹಳ ದಿನಗಳಿಂದ ತೀರ್ಮಾನ ಆಗಬೇಕಿತ್ತು. ಬಾಗಲಕೋಟೆ ಭಾಗದಲ್ಲಿ 2-3 ಲಕ್ಷ ಇದ್ದರೂ 10-15 ಲಕ್ಷಕ್ಕೆ ಮಾಡಲಾಗಿತ್ತು. ಹೀಗಾಗಿ ಸಮಸ್ಯೆ ಆಗಿತ್ತು”. ಎಂದು ವಿಧಾನ ಪರಿಷತ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ನಾವು ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡು ಮಾಡಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಇದಕ್ಕೆ ಹಣ ನೀಡಲು ಆಗುತ್ತಿಲ್ಲ. ಆದರೂ ಇದು ಆದ್ಯತೆ ಯೋಜನೆ ಆಗಿದ್ದು, ನಾನು ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಬಾಕಿ ಇರುವ ಅಧಿಸೂಚನೆ ಸರಿಪಡಿಸುವಂತೆ ಮನವಿ ಮಾಡಿದ್ದೇನೆ. ಸದನ ಮುಗಿಯುವ ಒಳಗೆ ಈ ವಿಚಾರವಾಗಿ ಮಾತನಾಡಲು ಸಭೆ ಮಾಡುತ್ತೇನೆ. ನಿಮ್ಮನ್ನು ಸೇರಿದಂತೆ ಈ ಭಾಗದ ನಾಯಕರನ್ನು ಆಹ್ವಾನಿಸಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಆ ಸಭೆಯಲ್ಲಿ ನಿಮ್ಮ ಸಲಹೆಗಳನ್ನು ಹಂಚಿಕೊಳ್ಳಿ” ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


