nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿನಿಯರ ವಿದ್ಯಾರ್ಥಿ ನಿಲಯಕ್ಕೆ ಅಭದ್ರತೆ: ಗೇಟ್ ಹತ್ತಿ ಎಸ್ಕೇಪ್ ಆದ ವಿದ್ಯಾರ್ಥಿನಿ: ರಾತ್ರಿ 11ಕ್ಕೆ ಹೊರಕ್ಕೆ ಮುಂಜಾನೆ 5ಕ್ಕೆ ಒಳಗೆ..
    ಕೊರಟಗೆರೆ July 16, 2023

    ವಿದ್ಯಾರ್ಥಿನಿಯರ ವಿದ್ಯಾರ್ಥಿ ನಿಲಯಕ್ಕೆ ಅಭದ್ರತೆ: ಗೇಟ್ ಹತ್ತಿ ಎಸ್ಕೇಪ್ ಆದ ವಿದ್ಯಾರ್ಥಿನಿ: ರಾತ್ರಿ 11ಕ್ಕೆ ಹೊರಕ್ಕೆ ಮುಂಜಾನೆ 5ಕ್ಕೆ ಒಳಗೆ..

    By adminJuly 16, 2023No Comments3 Mins Read
    koratagere
    • ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    ಕೊರಟಗೆರೆ : ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸೀಗಲೆಂದು ಪೋಷಕರು ಹಗಲುರಾತ್ರಿ ಎನ್ನದೇ ದುಡಿದು ಕಷ್ಟಪಡ್ತಾರೇ.. ಶಾಲಾ–ಕಾಲೇಜಿನಲ್ಲಿ ಶಿಕ್ಷಕರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಶ್ರಮಿಸ್ತಾರೇ. ಆದರೇ ಇಲ್ಲೊಂದು ವಸತಿ ಶಾಲೆಯಲ್ಲಿ ತಡರಾತ್ರಿ ವಿದ್ಯಾರ್ಥಿಯೇ ಗೇಟ್ ಹತ್ತಿ ಹೊರಗಡೆ ಹೋಗ್ತಾಳೇ.. ರಾತ್ರಿಯಿಡಿ ಹೊರಗಡೆ ಇದ್ದು ಮತ್ತೇ ಅದೇ ನಿಲಯಕ್ಕೆ ಯಾರ ಭಯವು ಇಲ್ಲದೇ ಮುಂಜಾನೇ ವಾಪಸ್ ಬರ್ತಾಳೇ.. ಹಾಗಾದ್ರೇ ಸಮಾಜ ಕಲ್ಯಾಣ ಇಲಾಖೆಯ ಪಾತ್ರವೇನು ಎಂಬುದೇ ಯಕ್ಷಪ್ರಶ್ನೆ..?

    ಕೊರಟಗೆರೆ ಪಟ್ಟಣದ ಹೃದಯ ಭಾಗದಲ್ಲಿನ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ 11ಗಂಟೆ 21 ನಿಮಿಷಕ್ಕೆ ಇಂತಹದೊಂದು ಘಟನೆ ನಡೆದಿದೆ. ವಸತಿ ನಿಲಯದ ವಾರ್ಡನ್ ಶೃತಿ.ಜಿ ತಮ್ಮ ಕರ್ತವ್ಯ ಮುಗಿಸಿ 6ಗಂಟೆಗೆ ಮನೆಗೆ ಹೋದ ನಂತರ ಕಾವಲುಗಾರ ಇರುವ ವೇಳೆ ಲೋಪ ಉಂಟಾಗಿದೆ. ಖಾಸಗಿ ವ್ಯಕ್ತಿ ಚಿತ್ರಿಕರಣ ಮಾಡಿರುವ ವಿಡೀಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.


    Provided by
    Provided by

    ವಿದ್ಯಾರ್ಥಿನಿಗಾಗಿ ರಾತ್ರಿಯಿಡಿ ಹುಡುಕಾಟ..

    ವಿದ್ಯಾರ್ಥಿ ನಿಲಯದಿಂದ ಎಸ್ಕೇಪ್ ಆದ ಕೇಲವೇ ಕ್ಷಣದಲ್ಲಿಯೇ ಕಾವಲುಗಾರ್ತಿ ಲಲಿತಮ್ಮಗೆ ದೂರವಾಣಿ ಕರೆ ಬರುತ್ತೇ. ತಕ್ಷಣ ಎಚ್ಚೇತ್ತ ವಾರ್ಡನ್ ಶೃತಿ ಸ್ಥಳಕ್ಕೆ ಆಗಮಿಸಿ ಕೊರಟಗೆರೆ ಪಟ್ಟಣದ ಕಾಲೇಜು ಮೈದಾನ, ಗೊರವನಹಳ್ಳಿ ರಸ್ತೆ, ಊರ್ಡಿಗೆರೆ ಕ್ರಾಸ್, ಡಿಗ್ರಿ ಕಾಲೇಜು ಸೇರಿದಂತೆ ಹತ್ತಾರು ಕಡೆಯಲ್ಲಿ ರಾತ್ರಿಯಿಡಿ ಹುಡುಕಾಟ ನಡೆಸಿದ್ರು ಸಿಕ್ಕಿಲ್ಲ. ನಂತರ ಮುಂಜಾನೆ 5 ಗಂಟೆ 15 ನಿಮಿಷಕ್ಕೆ ಯಾರ ಭಯವು ಇಲ್ಲದೇ ಮತ್ತೇ ನಿಲಯಕ್ಕೆ ಹಿಂದಕ್ಕೆ ಬಂದು ಕೊಠಡಿಯೊಳಗೆ ಸೇರಿಕೊಂಡಿದ್ದಾಳೆ.

    ಕೊರಟಗೆರೆ ತಹಶೀಲ್ದಾರ್ ಮುನಿಶಾಮಿರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಮಲ್ಲಿಕಾರ್ಜುನ್, ಕೊರಟಗೆರೆ ಪಿಎಸೈ ಚೇತನ್‍ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಲಯದಲ್ಲಿದ್ದ ವಿದ್ಯಾರ್ಥಿಯನ್ನು ಸಮಾಜ ಕಲ್ಯಾಣ ಇಲಾಖೆ ಪೋಷಕರ ಜವಾಬ್ದಾರಿಗೆ ನೀಡಿದೆ. ಕೊರಟಗೆರೆ ತಾಲೂಕು ದುಗ್ಗೆನಹಳ್ಳಿಯ ಆಟೋ ಚಾಲಕ ಆರ್ಯಗೌಡ(26) ಮತ್ತು ಟಾಟಾ ಎಸಿ ಆಟೋ ಪೊಲೀಸರ ಅತಿಥಿಯಾಗಿದ್ದಾನೆ. ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ದೂರಿನ ಅನ್ವಯ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    358 ಜನ ವಿದ್ಯಾರ್ಥಿಗಳ ರಕ್ಷಣೆ ಯಾರದ್ದು..?

    ಕೊರಟಗೆರೆ ಪಟ್ಟಣದ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ–50, ಬಾಲಕರ ವಿದ್ಯಾರ್ಥಿ ನಿಲಯ–70, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ–90, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ–90 ಮತ್ತು ಅಕ್ಕಿರಾಂಪುರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ–58ಜನ ಸೇರಿ ಒಟ್ಟು 358 ಜನ ಇರುವ ವಸತಿ ನಿಲಯದಲ್ಲಿ ಸಿಸಿಟಿವಿ ಲಭ್ಯವಿದ್ರು, ವಿದ್ಯಾರ್ಥಿಗಳಿಗೆ ರಾತ್ರಿ ಪಾಳೇಯದ ಭದ್ರತೆಯಲ್ಲಿ ಲೋಪ ಉಂಟಾಗಿದೆ.

    ರಾತ್ರಿ ವೇಳೆ ವಿದ್ಯಾರ್ಥಿ ನಿಲಯಕ್ಕೆ ಅಭದ್ರತೆ:

    ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಕೊರಟಗೆರೆ ಪಟ್ಟಣ ಮತ್ತು ಅಕ್ಕಿರಾಂಪುರ ಸೇರಿ ಒಟ್ಟು 5 ವಿದ್ಯಾರ್ಥಿ ನಿಲಯಗಳಿವೆ. ಪ್ರಸ್ತುತ ವಾಸವಿರುವ 358 ಜನ ವಿದ್ಯಾರ್ಥಿಗಳಿಗೆ ಸಿಸಿಟಿವಿಯ ಭದ್ರತೆ ನೆಪಮಾತ್ರ ಅಷ್ಟೆ. ಮಕ್ಕಳ ಜವಾಬ್ದಾರಿ ಹೊತ್ತ ವಾರ್ಡನ್ ಸಂಜೆ 6 ಗಂಟೆಗೆ ಜಾಗ ಖಾಲಿ ಮಾಡ್ತಾರೇ. 6 ಗಂಟೆ ನಂತರ ಬರುವ ಕಾವಲುಗಾರ ಊಟ ಮಾಡಿದ ನಂತರ ಮಕ್ಕಳು ಮಲಗುವ ಮುಂಚೆಯೇ ಕೊಠಡಿ ಸೇರಿಕೊಳ್ತಾರೇ. ವಿದ್ಯಾರ್ಥಿಗಳಿಗೆ ರಕ್ಷಣೆಯ ಜೊತೆಗೆ ಅಧಿಕಾರಿಗಳ ಭಯವು ಸಹ ಇಲ್ಲದೇ ಅಭದ್ರತೆ ಸೃಷ್ಟಿಯಾಗಿದೆ.

    ರಾತ್ರಿ11ಕ್ಕೆ ಹೊರಕ್ಕೆ ಮುಂಜಾನೆ 5ಕ್ಕೆ ಒಳಗೆ:

    ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಾಸವಿರುವ 17 ವರ್ಷದ ವಿದ್ಯಾರ್ಥಿನಿ ಶುಕ್ರವಾರ ತಡರಾತ್ರಿ 11 ಗಂಟೆ 21ನಿಮಿಷಕ್ಕೆ ನಿಲಯದ ಬಾಗಿಲಿನ ಗೇಟ್ ಹತ್ತಿ ಹೊರಗಡೆ ಹೋಗ್ತಾಳೆ. ಮತ್ತೇ ಮುಂಜಾನೆ 5 ಗಂಟೆ 15 ನಿಮಿಷಕ್ಕೆ ಮತ್ತೇ ಅದೇ ಗೇಟ್ ಹತ್ತಿ ಒಳಗಡೆ ಬರ್ತಾಳೆ. ವಿದ್ಯಾರ್ಥಿ ಹೊರಗಡೆ ಹೋಗುವ ದೃಶ್ಯ ನಿಲಯದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಡೆ ಬಂದ ನಂತರ ಆಟೋ ಹತ್ತಿ ಹೋಗುವ ದೃಶ್ಯ ಖಾಸಗಿ ವ್ಯಕ್ತಿಯ ಮೊಬೈಲ್‍ ನಲ್ಲಿ ಸೆರೆಯಾಗಿದೆ. ಎರಡು ವಿಡೀಯೊಗಳು ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ವೈರಲ್ ಆಗಿದೆ.

    ವಿದ್ಯಾರ್ಥಿ ನಿಲಯದ ವಾರ್ಡನ್ ಮತ್ತು ಕಾವಲುಗಾರರಿಂದ ಭದ್ರತೆಯ ಲೋಪ ಆಗಿದೆ. ನಿಲಯದ ಇಬ್ಬರ ಮೇಲೆ ಕ್ರಮಕ್ಕೆ ಇಲಾಖೆಗೆ ಸೂಚಿಸಲಾಗಿದೆ. ಪೊಲೀಸರಿಂದ ಸಿಸಿಟಿವಿ ಮತ್ತು ಖಾಸಗಿ ವಿಡೀಯೊ ದೃಶ್ಯಾವಳಿ ಪರಿಶೀಲನೆ ನಡೆದಿದೆ. ಟಾಟಾ ಎಸಿ ಆಟೋ ಮತ್ತು ಆರೋಪಿ ಪೊಲೀಸರ ವಶದಲ್ಲಿ ಇದ್ದಾನೆ. ಕೊರಟಗೆರೆ ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಗಡೆ ಬರಲಿದೆ.

    -ಮುನಿಶಾಮಿ ರೆಡ್ಡಿ. ತಹಶೀಲ್ದಾರ್. ಕೊರಟಗೆರೆ.

     

    ವಿದ್ಯಾರ್ಥಿಯೇ ತಡರಾತ್ರಿ 11 ಗಂಟೆ ವೇಳೆ ಗೇಟ್ ಹತ್ತಿ ಇಳಿದು ಕಾರಿಗೆ ಹತ್ತಿರುವ ವಿಡೀಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾರ್ಡನ್ ಕರ್ತವ್ಯ ಮುಗಿಸಿ ಮನೆಗೆ ತೆರಳಿದ ನಂತರ ಕಾವಲುಗಾರ್ತಿ ಬಂದಿದ್ದಾರೆ. ರಾತ್ರಿವೇಳೆ ನಿದ್ದೆ ಟೈಂನಲ್ಲಿ ಇಂತಹ ಘಟನೆ ನಡೆದಿದೆ. ಆರೋಪಿ ಆಟೋ ಡ್ರೈವರ್ ಈಗ ಪೊಲೀಸರ ವಶದಲ್ಲಿ ಇದ್ದಾನೆ. ಪೊಲೀಸರ ತನಿಖೆಯಿಂದ ನಿಲಯದ ಇನ್ನಷ್ಟು ಸತ್ಯಾಂಶ ಹೊರಗಡೆ ಬರಲಿದೆ.

    –ಕೃಷ್ಣಪ್ಪ.ಎಸ್. ಜಂಟಿ ನಿರ್ದೇಶಕ. ಸಮಾಜ ಕಲ್ಯಾಣ ಇಲಾಖೆ. ತುಮಕೂರು.

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ…

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.