nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ1 ಕೋಟಿ ಪರಿಹಾರ ವಿತರಿಸಿದ ಕೆ. ಎಸ್.ಆರ್.ಟಿ.ಸಿ.
    ರಾಜ್ಯ ಸುದ್ದಿ July 16, 2023

    ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ1 ಕೋಟಿ ಪರಿಹಾರ ವಿತರಿಸಿದ ಕೆ. ಎಸ್.ಆರ್.ಟಿ.ಸಿ.

    By adminJuly 16, 2023No Comments2 Mins Read
    ksrtc

    ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಅಧ್ಯಕ್ಷರು, ಕರಾರಸಾ ನಿಗಮ ರವರು ನಿಗಮದ ಕೇಂದ್ರ ಕಛೇರಿಯಲ್ಲಿ ನಿಗಮವು ತನ್ನ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ರೂ. 1 ಕೋಟಿ ಅಪಘಾತ ಪರಿಹಾರ ವಿಮೆಯ ಚೆಕ್ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಕೆ. ಎಸ್. ಆರ್. ಟಿ. ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗೆ ರೂ. 1 ಕೋಟಿ ಮೊತ್ತದ ಅಪಘಾತ ವಿಮೆಯನ್ನು ( On duty & Of Duty ಅಪಘಾತ) ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ ರೂ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ವಾರ್ಷಿಕ ರೂ. 885/- ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ರೂ. 50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ.


    Provided by
    Provided by

    ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ. ಈ ಯೋಜನೆಯ ಜಾರಿಯ ನಂತರದಲ್ಲಿ ಕೆ. ಎಸ್. ಆರ್. ಟಿ. ಸಿ. ಯ ಚಾಲನಾ ಸಿಬ್ಬಂದಿಗಳಾದ ಶಜಿ. ವಿ. ಚಲಪತಿ, 41 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ 7275, ಘಟಕ-6, ಬೆಂಗಳೂರು ಕೇಂದ್ರೀಯ ವಿಭಾಗರವರು ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ.

    ದಿನಾಂಕ ಜನವರಿ 29 2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಮೃತಪಟ್ಟಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ. 1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ. 17. 21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ. 12. 71 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 4. 50 ಲಕ್ಷವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ.

    ಪಿ. ಎನ್. ನಾಗರಾಜು, 52 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ. 1173, ಘಟಕ-2, ಹಾಸನ ವಿಭಾಗ ರವರು ನಿಗಮದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ.

    ಫೆಬ್ರವರಿ 1, 2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಮಾಡಿದ ಪರಿಣಾಮ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ. 1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ. 21. 94 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ. 16. 19 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 5. 75 ಲಕ್ಷ ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿಇಲಾಖೆಯಿಂದ ಶೀಘ್ರದಲ್ಲಿಯೇ ಪಾವತಿಯಾಗಲಿದೆ.

    ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಮಾನ್ಯ ಅಧ್ಯಕ್ಷರು, ಕರಾರಸಾ ನಿಗಮ ರವರು ಈ ಎರಡು ಚಾಲನಾ ಸಿಬ್ಬಂದಿಗಳ ಕುಟುಂಬ ವರ್ಗದವರಿಗೆ ಅಪಘಾತ ಪರಿಹಾರ ವಿಮಾದ ತಲಾ ರೂ. 1 ಕೋಟಿಗಳ ಚೆಕ್ ವಿತರಿಸಿ ಸಾಂತ್ವನ ಹೇಳಿದರು.

    ಈ ಕಾರ್ಯಕ್ರಮದಲ್ಲಿ ಎಸ್ ಬಿ. ಐ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಹೆಚ್. ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ. ಎಸ್. ಮಹದೇವಯ್ಯ, ಹೆಚ್. ಡಿ. ರೇವಪ್ಪ, ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ  ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ…

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.