nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಕ್ಕೆ ಬರಲು ತತ್ವ ಸಿದ್ಧಾಂತಕ್ಕೆ ವಿಪಕ್ಷಗಳ ತಿಲಾಂಜಲಿ
    ರಾಜ್ಯ ಸುದ್ದಿ July 17, 2023

    ಅಧಿಕಾರಕ್ಕೆ ಬರಲು ತತ್ವ ಸಿದ್ಧಾಂತಕ್ಕೆ ವಿಪಕ್ಷಗಳ ತಿಲಾಂಜಲಿ

    By adminJuly 17, 2023No Comments2 Mins Read
    n ravikumar

    ವಿವಿಧ ವಿರೋಧ ಪಕ್ಷಗಳು ತಮ್ಮ ತತ್ವ- ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಬೇಕೆಂದು ಏಕೈಕ ಉದ್ದೇಶದೊಂದಿಗೆ ಹೊರಟಿದ್ದಾರೆ. ಅದಕ್ಕಾಗಿ ಇದೇ 18 ರಂದು ವಿಪಕ್ಷಗಳ ಸಭೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ಷೇಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಜಿ ಅವರು 2047ರ ವೇಳೆಗೆ ಪ್ರಪಂಚದಲ್ಲಿ ಭಾರತವನ್ನು ನಂಬರ್ 1 ರಾಷ್ಟ್ರವಾಗಿ ಮಾಡುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ಪರಿವರ್ತಿಸುವ ಒಂದೇ ಕನಸು ಮೋದಿಜಿ ಅವರದು. ಪಾರ್ಟಿ ಬೆಳೆಸುವುದು, ಮತಬ್ಯಾಂಕ್ ದೃಢೀಕರಣದ ಉದ್ದೇಶ ಅವರದಲ್ಲ. ಅಂಥ ದುರುದ್ದೇಶದ ಚಿಂತನೆ ವಿಪಕ್ಷಗಳದು ಎಂದು ಟೀಕಿಸಿದರು.

    ನಿಸ್ವಾರ್ಥ ಮತ್ತು ದೂರದೃಷ್ಟಿಯ ಸಮರ್ಥ ನಾಯಕತ್ವವನ್ನು ಮೋದಿಜಿ ಕೊಡುತ್ತಿದ್ದು, ಅದನ್ನು ಜನರೂ ಅರ್ಥ ಮಾಡಿಕೊಂಡಿದ್ದಾರೆ ಎಂದು ನುಡಿದರು. ಮತ್ತೊಮ್ಮೆ ನರೇಂದ್ರ ಮೋದಿಜಿ ಅವರು ಪ್ರಧಾನಿ ಆಗಬೇಕೆಂಬ ಆಶಯ, ಅಭಿಲಾಶೆ ಜನರದು. ಅವರಿಗೆ ಅಧಿಕಾರ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸದನ ಪ್ರಾರಂಭವಾಗಿ ಹತ್ತು ಹನ್ನೆರಡು ದಿನಗಳಾಗಿವೆ.

    ಕಾಂಗ್ರೆಸ್‌ ನವರು, ಸಿಎಂ ಅವರು ರಾಜ್ಯಪಾಲರ ಕುರಿತು, ಬಜೆಟ್ ವಿಚಾರದಲ್ಲಿ ಮಾತನಾಡುತ್ತಿಲ್ಲ. ಅವರು ಮುಂದಿನ ಸಂಸತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ತಮಗೆ ಬಹುಮತ, 41 ಶೇ ಮತಪ್ರಮಾಣ ಬಂದಿದೆ ಎಂದು ಹೇಳುತ್ತಿದ್ದಾರೆ. ಶೇ 41 ಮತಗಳಿಕೆಗೂ ಬಜೆಟ್‌ ಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

    ಒಳ್ಳೆಯ ಬಜೆಟ್ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್‌ ನವರನ್ನು ಕೇಳಿದ ಅವರು, ಅಲ್ಪಸಂಖ್ಯಾತರ ಪರವಾಗಿರುವ ಬಜೆಟನ್ನು ನೀವು ಕೊಟ್ಟಿದ್ದೀರಿ. ಯಾವುದೇ ಗುಡಿ ಗೋಪುರಗಳು, ಸಾಧುಸಂತರು, ಸ್ವಾಮೀಜಿಗಳು, ವ್ಯಾಪಾರಿ ವರ್ಗ, ಕುಶಲಕರ್ಮಿಗಳು ನೀವೇನು ಬಜೆಟ್‌ ನಲ್ಲಿ ನಯಾಪೈಸೆ ತೆಗೆದು ಇಟ್ಟಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮದ್ಯಪ್ರಿಯರಿಗೆ ವಿಪರೀತ ತೆರಿಗೆ ಹೇರಿದ್ದೀರಿ.

    ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ನಾವು ಸಂಸತ್ ಚುನಾವಣೆಯಲ್ಲಿ
    ಗೆಲ್ಲುತ್ತೇವೆ ಎಂದು ಭಾಷಣ ಮಾಡುತ್ತಾರೆ. ಸಂಸತ್ ಚುನಾವಣೆಯಲ್ಲಿ ಸೀಟು ಗೆಲ್ಲುವ ಅಟೆಂಡ ಫಿಕ್ಸ್ ಮಾಡಿದ್ದಾರೆ. ಬಜೆಟ್, ರಾಜ್ಯಪಾಲರ ಮಾತಿನ ಕುರಿತು ಮಾತನಾಡುವುದಿಲ್ಲ ಎಂದು ಟೀಕಿಸಿದರು.

    ಆಡಳಿತ ಯಂತ್ರವನ್ನು ಲೋಕಸಭಾ ಚುನಾವಣೆಗೆ ಸಿದ್ಧ ಮಾಡುತ್ತಿದ್ದಾರೆ. ಭಾರತ ನಂಬರ್ ಒನ್ ಮಾಡುವ ಉದ್ದೇಶ ಇವರದಲ್ಲ. ಜನರಿಗೆ ಉದ್ಯೋಗ ನೀಡುವ ಬಜೆಟ್ ಕೊಟ್ಟಿಲ್ಲ. ಜನರ ಉದ್ಯೋಗ ಕಸಿಯುವ ಬಜೆಟ್ ಇದು ಎಂದು ಆರೋಪಿಸಿದರು. ಮಹಿಳೆಯರಿಗೆ ಉಚಿತ ಪ್ರಯಾಣ, ಪ್ರವಾಸ ಮಾಡಲಿ; ಅಡ್ಡಿ ಇಲ್ಲ. ಆದರೆ, ಕಾರ್ಮಿಕರಿಗೆ- ಕೃಷಿ ವರ್ಗಕ್ಕೆ ಏನು ಮಾಡಿದ್ದೀರಿ? ನೀರಾವರಿಗೆ ಎಷ್ಟು ಹಣ ಕೊಟ್ಟಿದ್ದೀರಿ? ರೈತರಿಗೆ ಏನು ಕೊಡುಗೆ ನೀಡಿದ್ದೀರಿ? ರಸ್ತೆಗಳ ಅಭಿವೃದ್ಧಿಗೆ ಏನು ಮಾಡುತ್ತೀರಿ? ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

    ಮಳೆ ಇಲ್ಲ. ಉದ್ಯೋಗ ನೀಡಿಕೆಗೆ ಏನು ನಿಮ್ಮ ಯೋಜನೆ ಎಂದು ಕೇಳಿದ ಅವರು, ಖಾಸಗಿ ಬಸ್‌ ಆಟೋ ರಿಕ್ಷಾ, ಕ್ಯಾಬ್‌ ನವರಿಗೆ ಏನು ಮಾಡುತ್ತೀರಿ? ಸಣ್ಣ, ಗೃಹ ಕೈಗಾರಿಕೆಗಳ ಪುನಶ್ವೇತನಕ್ಕೆ ಏನು ಸರಕಾರದ ಹಣವನ್ನು ಕಾಂಗ್ರೆಸ್ ಪಾರ್ಟಿಯ ಪಂಚ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಜನರಿಗೆ ಅರ್ಥವಾಗಿದೆ. ಸಂಸತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಗೆ ಪಾಠ ಕಲಿಸುವುದು ನಿಶ್ಚಿತ ಎಂದು ನುಡಿದರು.

    ಎನ್‌ ಡಿಎ ಸಭೆಗೆ ಜೆಡಿಎಸ್‌ ಗೆ ಆಹ್ವಾನ ಕುರಿತು ಪ್ರಶ್ನೆಗೆ ಉತ್ತರ ನೀಡಿದ ಅವರು, ಸಭೆಗೆ ಆಹ್ವಾನ ಕೊಟ್ಟಿರಬಹುದು; ನನಗೆ ತಿಳಿದು ಬಂದ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮತ್ತು ದೇವೇಗೌಡರು ದೆಹಲಿಗೆ ಹೋಗಲಿದ್ದಾರೆ. ಇದರ ಬಗ್ಗೆ ನಡ್ಡಾಜಿ, ಅಮಿತ್ ಶಾ ಮತ್ತು ಪ್ರಧಾನಿಯವರು ನಿರ್ಧರಿಸಲಿದ್ದಾರೆ. ದೇಶದ ಒಳಿತನ್ನು ಗಮನಿಸಿ ನಿರ್ಣಯ ಕೈಗೊಳ್ಳಲಿದ್ದು, ಅದಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock…

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.