ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಲ್.ರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋದವಾಗಿ ಆಯ್ಕೆಯಾದರು.
ಈ ಸಂಧರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್ ಮಾತನಾಡಿ, ಈ ಗೆಲುವಿಗೆ ಸಚಿವರಾದ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಹಾಗೂ ಜಿ.ಪಂ. ಮಾಜಿ ಸದಸ್ಯರಾದ ಶಾಂತಲ, ರಾಜಣ್ಣ ಸಹಕಾರವೇ ಗೆಲುವಿಗೆ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಅಧಿಕಾರ ಹಂಚುವ ಅವರ ಕಾರ್ಯವೈಕರಿಗೆ ನಾವೆಲ್ಲ ಅಭಾರಿಯಾಗಿದ್ದೇವೆ ಎಂದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಮುಖಂಡ ನಾಗರಾಜು, ಗ್ರಾ.ಪಂ ಸದಸ್ಯರಾದ ಪ್ರೇಮಲತಾ, ಮಂಜುನಾಥ್ ರೆಡ್ಡಿ, ಸುರೇಶ್, ಬಸವರಾಜು,ಅನಿತಾ, ಸವಿತಾ ಹಾಗೂ, ಕುರೂಡಿ ನಿಂಗಪ್ಪ, ಅಶ್ವತಪ್ಪ, ಗಂಗಪ್ಪ, ಶಿವಣ್ಣ, ಪ್ರಕಾಶ್, ಚನ್ನಸೋಮೆಗೌಡ, ರಾಮಚಂದ್ರು, ಸಿದ್ದಗಂಗಪ್ಪ, ಗೋವಿಂದಪ್ಪ, ನಂಜುಡಪ್ಪ, ವೆಂಕಟೇಶ್, ಲಿಂಗರಾಜು, ಮಧನ್ ಕುಮಾರ್, ಹಾಗೂ ಮುಂತಾದವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA