nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು?: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೀಗಂದಿದ್ದೇಕೆ?
    ರಾಜ್ಯ ಸುದ್ದಿ July 23, 2023

    ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು?: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೀಗಂದಿದ್ದೇಕೆ?

    By adminJuly 23, 2023No Comments2 Mins Read
    aap

    ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ರಾಜ್ಯದ ಸಾಲ 5. 5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಪ್ರಶ್ನಿಸಿದ್ದಾರೆ.

    ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು ಬಣ್ಣಿಸಿದರು.

    ಕೌಟಿಲ್ಯನ ಅರ್ಥಶಾಸ್ತ್ರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಗಳಿಕೆ– ಉಳಿಕೆ — ಬಳಕೆ ಬಜೆಟ್ ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ಎಂದು ಟೀಕಿಸಿದರು.

    ಮಣಿಪುರ ಘಟನೆ ಯ ಬಗ್ಗೆ ಆತಂಕ ವ್ಯಕ್ತಪಡಿಸಿ ಮಾತನಾಡಿದ ಮುಖ್ಯಮಂತ್ರಿ,  ಚಂದ್ರ ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ. ಮುಂಬರುವ ರಾಜ್ಯದ ಜಿಲ್ಲಾ – ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

    ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ. ಟಿ. ನಾಗಣ್ಣ, ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರುಗಳು ಸಹ ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock…

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.