ತುಮಕೂರು: ಸಹಾಯಮಾಡುವ ನೆಪದಲ್ಲಿ ವೃದ್ಧೆಯೊಬ್ಬರನ್ನು ಪರಿಚಯ ಮಾಡಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ ಘಟನೆ ನಡೆದಿತ್ತು. ಕಳೆದ ವಾರ ಚಿಕ್ಕಮ್ಮ ಎಂಬ ವೃದ್ಧೆಯ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು.
ಚಿಕ್ಕಮ್ಮ ಅವರನ್ನು ಕಟ್ಟಿಹಾಕಿ ಹಣ, ಒಡವೆ ದೋಚಿದ್ದ ಖತರ್ನಾಕ್ ಕಳ್ಳರು ಬೆಂಗಳೂರಿಗೆ ಪರಾರಿಯಾಗಿದ್ದರು. ಇದೀಗ ಕಳ್ಳತನ ಮಾಡಿದ ಆರೋಪಿಗಳಾದ ಶರತ್, ಶಿವರಾಜು, ವಸಂತಕುಮಾರ್, ಅಲೀಶಾ ಬಾಬು ಅವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ
ಬ್ಯಾಂಕಿಗೆ ಬಂದಿದ್ದ ವೃದ್ದೆಯನ್ನ ಪರಿಚಯ ಮಾಡಿಕೊಂಡಿದ್ದ ಆರೋಪಿ ಶರತ್, ಎಟಿಎಂ ನ ಲಾಕರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ವಾರ ಬ್ಯಾಂಕಿಗೆ ಬಂದಿದ್ದ ಚಿಕ್ಕಮ್ಮರನ್ನ ಶರತ್ ಪರಿಚಯ ಮಾಡಿಕೊಂಡಿದ್ದನು. ಈ ವೇಳೆ ವೃದ್ಧೆ ಚಿಕ್ಕಮ್ಮ ಶರತ್ ಬಳಿ ತನ್ನ ಕಷ್ಟ ಸುಖಗಳನ್ನ ಹೇಳಿಕೊಂಡಿದ್ದರು. ಅಜ್ಜಿ ಒಬ್ಬಂಟಿಯಾಗಿರುವುದನ್ನು ಶರತ್ ಖಾತರಿಪಡಿಸಿಕೊಂಡಿದ್ದನು.
ತನ್ನ ಸ್ನೇಹಿತರ ಜೊತೆ ಸೇರಿ ವೃದ್ಧೆಯ ಮನೆ ಮೇಲೆ ದಾಳಿ ಮಾಡಿದ್ದ ಶರತ್ ಆತನ ಸಹಚರರು 54 ಸಾವಿರ ನಗದು, 50 ಗ್ರಾಂ ಬಂಗಾರ ಕದ್ದು ಪರಾರಿಯಾಗಿದ್ದರು. ತೀವ್ರ ತನಿಖೆ ನಡೆಸಿದ್ದ ಕುಣಿಗಲ್ ಡಿವೈಎಸ್ ಪಿ ಲಕ್ಷ್ಮೀಕಾಂತ್ ನೇತೃತ್ವದ ಪೊಲೀಸರ ತಂಡ ಕೇವಲ 6 ದಿನದಲ್ಲಿ ಆರೋಪಿಗಳನ್ನ ಬಂಧಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA