nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯ ಹಲವು ಕಾರ್ಯಕ್ರಮ ಕೈಬಿಟ್ಟ ಕಾಂಗ್ರೆಸ್ ಸರ್ಕಾರ
    ರಾಜ್ಯ ಸುದ್ದಿ July 25, 2023

    ಬಿಜೆಪಿಯ ಹಲವು ಕಾರ್ಯಕ್ರಮ ಕೈಬಿಟ್ಟ ಕಾಂಗ್ರೆಸ್ ಸರ್ಕಾರ

    By adminJuly 25, 2023No Comments2 Mins Read
    bjp government

    ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ. ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‌ ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತೋದ್ದಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು. ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ.
    ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ. ಅಗ್ನಿವೀರರಾಗಲು ಎಸ್ಸಿ, ಎಸ್‌ಟಿ ಯುವಕರಿಗೆ ತರಬೇತಿಯನ್ನು ರದ್ದು ಮಾಡಿದ್ದಾರೆ. ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ, ಹಾಲು ಉತ್ಪಾದಕರ ಬ್ಯಾಂಕ್ ರದ್ದು, ವಿನಯ ಸಾಮರಸ್ಯ ಕ್ಕೀಂ ಕೈಬಿಟ್ಟಿದ್ದಾರೆ ಎಂದು ಆಕ್ಷೇಪಿಸಿದರು.


    Provided by
    Provided by

    ಸಿದ್ದರಾಮಯ್ಯ 1995-2000, 2013ರಿಂದ 18ರ ವರೆಗೆ ಬಜೆಟ್ ಮಂಡಿಸಿದ್ದರು. ಅವನ್ನು ಅವಲೋಕನ ಮಾಡಿದಾಗ ಅವರು ಮಂಡಿಸಿದ ಬಜೆಟ್‌ ಗಳ ಸ್ಥಿತಿಗತಿ ಅರ್ಥವಾಗುತ್ತದೆ. 2000 ವರೆಗಿನ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮಿಗತೆಯಿಂದ ಆರ್ಥಿಕ ದುಃಸ್ಥಿತಿ ಕಡೆ ನಡೆಯಿತು. ನಂತರ ಎಸ್. ಎಂ. ಕೃಷ್ಣ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ಹಣಕಾಸಿನ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿದ್ದರು. ಆಗ ರಾಜ್ಯದ ಆರ್ಥಿಕ ಸ್ಥಿತಿ ಶಿಥಿಲವಾದುದನ್ನು ತಿಳಿಸಿದ್ದರು. 2018ರಲ್ಲಿ ಅಧಿಕಾರದಿಂದ ಕೆಳಕ್ಕೆ ಇಳಿಯುವಾಗ ಸಾಲಕ್ಕೆ ರಾಜ್ಯವನ್ನು ಸಿಲುಕಿಸಿದ್ದನ್ನು ಅಂಕಿಅಂಶಗಳೇ ಹೇಳುತ್ತವೆ. ಅವರು 2. 42 ಲಕ್ಷ ಕೋಟಿ ಸಾಲ ಮಾಡಿದ್ದರು ಎಂದು ನಾರಾಯಣಸ್ವಾಮಿ ಟೀಕಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ  ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ…

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.