ತುಮಕೂರು: ಕಾಂಗ್ರೆಸ್ ಶಾಸಕರಿಗೆ ಸಚಿವರ ಮೇಲೆ ಅಸಮಾಧಾನ, ಸಿಎಂಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನನಗೆ ಅದರ ಬಗ್ಗೆ ಗೊತ್ತಿಲ್ಲ, ನಿನ್ನೆ ಸಿಎಂ ಸಿಕ್ಕಿದ್ರು, ಅದರ ಬಗ್ಗೆ ಏನೂ ಮಾತಾಡಿಲ್ಲ ಎಂದು ತಿಳಿಸಿದ್ರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಆಪರೇಷನ್ ವಿಚಾರದಲ್ಲಿ ಅದರ ಬಗ್ಗೆ ನಮ್ಮ ಅಧ್ಯಕ್ಷರು ಮಾತನಾಡಿದಾರಲ್ಲ, ಅವರಿಗೆ ಅದರ ಬಗ್ಗೆ ವಿಶೇಷವಾಗಿ ಮಾಹಿತಿ ಇರಬಹುದು ಅಲ್ಲಿ ಏನೇನಾಗ್ತಾ ಇದೆ ಅನ್ನೋದು, ಖಂಡಿತವಾಗಿಯೂ ಜೆಡಿಎಸ್ ಬಿಜೆಪಿ ಒಂದಾಗಿರೋದು ಸತ್ಯ, ಅವರು ಷಡ್ಯಂತ್ರ ಮಾಡ್ತಾ ಇರಬಹುದು. ಆದರೆ ನಾವು ಒಗ್ಗಟ್ಟಾಗಿದ್ದೇವೆ ಎಂದರು.
ಐದು ವರ್ಷ ನಾವು ಅಧಿಕಾರ ನಡೆಸ್ತಿವಿ. ಒಳ್ಳೆ ಆಡಳಿತ ಕೊಡ್ತಿವಿ, ಆ ಆತಂಕ ಯಾವುದೂ ಇಲ್ಲ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.
ಕೋವಿಡ್ ಕಾಲದಲ್ಲಿ ನಡೆದ ಎಲ್ಲ ಅವ್ಯವಹಾರಗಳನ್ನು ತನಿಖೆ ಮಾಡಿಸುತ್ತೇವೆ. ಇದು ದ್ವೇಷದ ರಾಜಕಾರಣ ಅಲ್ಲ, ತನಿಖೆ ಮಾಡಿಸುವ ಬಗ್ಗೆ ನಾವು ಚುನಾವಣೆಯಲ್ಲೇ ಹೇಳಿದ್ದೇವೆ ಎಂದು ತಿಳಿಸಿದರು.
ಯಾವ ರೀತಿಯ ತನಿಖೆಯಾಗಬೇಕು ಅನ್ನೋದನ್ನು ಸಿಎಂ ಬಳಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ಅವರು ಖರಿದಿ ಮಾಡಿದ ಔಷಧಿ, ಸಲಕರಣೆಗಳು ಅದರ ಬಗ್ಗೆ ತನಿಖೆ ಮಾಡ್ತಿವಿ ಎಂದು ಹೇಳಿದರು.
ಇದರ ಕುರಿತು ಪಬ್ಲಿಕ್ ಅಕೌಂಟ್ ಕಮಿಟಿ ವರದಿ ನೀಡಲಾಗಿದೆ. ಈ ವರದಿಯಲ್ಲಿ ಅವ್ಯವಹಾರದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಎಲ್ಲವನ್ನೂ ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದರು.
ವಿಡಿಯೋ ನೋಡಿ:
ನನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA